ಗೋಕಾಕ : ಸರಕಾರಕ್ಕೆ ಸಲ್ಲಿಸಿದ ವರದಿಯು ಅ ವೈಜ್ಞಾನಿಕವಾಗಿದೆ ಎಂದು ಉಪ್ಪಾರ ಸಮಾಜದ ಜಿಲ್ಲಾ ಯುವ ಮುಖಂಡ ಹಾಗೂ ಕರುನಾಡ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಮಂಜುನಾಥ್ ಜಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಿಂದುಳಿದ ವರ್ಗದವರ ಮನೆ ಮನೆಗೆ ತೆರಲಿ ಸರಿಯಾಗಿ ಸಮೀಕ್ಷೆ ಮಾಡದೆ ವರದಿ ನೀಡಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ ಕರ್ನಾಟಕ ರಾಜ್ಯದಲ್ಲಿ ಉಪ್ಪಾರ್ ಸಮಾಜವು ಸುಮಾರು 50 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಆದರೆ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಮಾಹಿತಿಗಳ ಪ್ರಕಾರ ಉಪ್ಪಾರ ಸಮಾಜವು ಕೇವಲ 7. 58.605 ಎಂಬ ಅಂಕಿ ಸಂಖ್ಯೆ ಜಾತಿ ಗಣತಿ ಯಂತಿ ಸಮೀಕ್ಷೆ ವರದಿ ಕಂಡು ಬರುತ್ತದೆ.
ಇದರಿಂದ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಕರ್ನಾಟಕ ರಾಜ್ಯದ ಉಪ್ಪಾರ ಸಮಾಜಕ್ಕೆ ಅನ್ಯಾಯವಾದಂತಾಗುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳು ಈ ವರದಿಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡದೆ ಅಂಗೀಕರಿಸಬಾರದು ಒಂದು ವೇಳೆ ಸದರಿ ವರದಿಯನ್ನು ಅಂಗೀಕರಿಸಿದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಪ್ಪಾರ ಸಮಾಜದಿಂದ ಹೋರಾಟ ಮಾಡಲಾಗುವುದು ಎಂದು ಮಂಜುನಾಥ್ ಜಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ