ಬೆಂಗಳೂರು: ಒಳ ಮೀಸಲಾತಿ ಸಮೀಕ್ಷೆಗೆ ಜಾತಿ ರಹಿತ ಬೌಧರಿಗೆ ದತ್ತಾಂಶ ಹಾಗು ಪ್ರತ್ಯೇಕ ಧರ್ಮಕ ಕಾಲಂ ರಚನೆ ಮಾಡಬೇಕೆಂದು ಭಾರತೀಯ ಬೌದ್ಧ ಮಹಸಭಾದ ಯುವ ಘಟಕದ ಅಧ್ಯಕ್ಷ ದರ್ಶನ್ ಬಿಎಸ್ ಸೋಮಶೇಖರ್ ಒತ್ತಾಯ ಮಾಡಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೇ 5 ರಿಂದ 17 ರವರೆಗೆ ಮೀಸಲಾತಿ ವರ್ಗಿಕರಣ ಮಾಡುತ್ತಿದ್ದು ರಾಜ್ಯ ಸರ್ಕಾರ ಒಳಮೀಸಲಾತಿ ನಮೀಕ್ಷೆ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಲಂ ಸೃಷ್ಟಿಸಿಲ್ಲ ಹಾಗೂ ಜಾತಿ ರಹಿತ ಬೌಧರೆಂದು ಸೇರಿಸಲು ಯಾವುದೇ ದತ್ತಾಂಶ ಇಲ್ಲ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂದರು.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಂಬೇಡ್ಕರ್ ಬುದ್ಧರ ಅನುಯಾಯಿಗಳಾಗಿದ್ದು, ನಾವೆಲ್ಲರೂ ಬೌದ್ಧ ಧರ್ಮವನ್ನು ಪರಿಪಾಲನೆ ಮಾಡುತ್ತಿದ್ದೇವೆ, ಜಾತಿ ರಹಿತದಾರ ಬೌದ್ಧ ಧರ್ಮವನ್ನು ಅನುಸರಿಸುತ್ತಿದ್ದೇವೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಮಾಜಕಲ್ಯಾಣ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಅವರಿಗೆ ಈಗಾಗಲೇ ಮನವಿ ಮಾಡಿದ್ದರೂ ಸಹ ಬೌದ್ಧ ಧರ್ಮದ ಕಾಲಂ ಹಾಗೂ ಜಾತಿ ರಹಿತ ಬೌದರೆಂದು ಸೇರಿಸಲು ದತ್ತಾಂಶದಲ್ಲಿ ಹೊಸ ವಿಭಾಗ ರಚಿಸಿಲ್ಲ. ಈಗಾಗಲೇ ಒಳಮೀಸಲಾತಿಯ ಜನಗಣತಿಯ ಸಮೀಕ್ಷೆಯಲ್ಲಿ ಜಾತಿ ಹೆಸರನ್ನು ಬಳಸದೇ ಇರುವವರನ್ನು ಬೌದ್ಧರೆಂದು ಪರಿಗಣಿಸಬೇಕು ಹಾಗೂ ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳಿಕರಣದ ದಾಖಲೆಗಳನ್ನು ಪಡೆಯುವಂತೆ ಕ್ರಮಕೈಗೊಳ್ಳಬೇಕೆಂದು ಹೇಳಿದ್ದಾರೆ.
ದತ್ತಾಂಶದಲ್ಲಿ ಸರಳಿಕರಣ ಮಾಡಲು ಸರ್ಕಾರಕ್ಕೆ ಒತ್ತಾಯ
ಬೌದ್ಧರಾದವರಿಗೆ ದತ್ತಾಂಶದಲ್ಲಿ ಸರಳಿಕರಣದ ದಾಖಲೆಗಳನ್ನು ಪಡೆಯಲು ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ನಮೂದಿಸಲ್ಪಟ್ಟ ಜಾತಿ ರಹಿತ ಬೌಧ ಧರ್ಮೀಯರಿಗೆ ಜನಸಂಖ್ಯೆ ಗಾತ್ರಕ್ಕೆ ಅನಗುಣವಾಗಿ ಅದರ ಸಾಂವಿಧಾನಿಕ ಹಕ್ಕನ್ನು ನೀಡಬೇಕು.
ಒಳಮೀಸಲಾತಿ ಸಮೀಕ್ಷೆಯಲ್ಲಿ ದ್ರಾವಿಡ, ಆದಿ ದ್ರಾವಿಡ ಸೇರಿದಂತೆ ಒಳ ಮೀಸಲಾತಿ ಪಂಗಡಳಿಗೆ ಪ್ರತ್ಯೇಕ ಕಾಲಂ ಇದೆ. ರಾಜ್ಯದಾದ್ಯಂತ ಅಂಬೇಡ್ಕರ್ ಮತ್ತು ಬೌಧರ ಅನುಯಾಯಿಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಭಾರತೀಯ ಬೌದ್ಧ ಮಹಾಸಭಾ ಯುವ ಘಟಕ ಹೊಂದಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಪೂರೈಸಲು ನಮ್ಮ ಸಂಘಟನೆಗೆ ಪೂರಕವಾಗಿ ಒಳ ಮೀಸಲಾತಿಯಲ್ಲಿ ನಡುಗೆ ಪೂರಕ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಬೌದ್ಧ ಮಹಸಭಾದ ಯುವ ಘಟಕದ ಖಜಾಂಚಿ ಬಿ ಆರ್ ಕೃಷ್ಣಯ್ಯ, ಜನರಲ್ ಕಾರ್ಯದರ್ಶಿ ಹಾಗು ವಕೀಲ ನಾಗೇಂದ್ರ ಕುಮಾರ್ ಉಪಸ್ಥಿತರಿದ್ದರು.