ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಆರ್ ಮಾರುಕಟ್ಟೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕೆ.ಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಮತ್ತು ರಸ್ತೆಗಳನ್ನು ಪ್ರೆಶರ್ ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛಗೊಳಿಸಲು ಸೂಚಿಸಿದರು.
ಮಾರುಕಟ್ಟೆಯಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಸಮರ್ಕವಾಗಿ ವಿಲೇವಾರಿ ಮಾಡಬೇಕು. ಎಲ್ಲಿಯೂ ತ್ಯಾಜ್ಯ ಬಿಸಾಡದಂತೆ ನೋಡಿಕೊಂಡು ಸದಾ ಸ್ವಚ್ಛತೆಯಿರುವಂತೆ ನೋಡಿಕೊಳ್ಳಲು ಮಾರ್ಷಲ್ ಮೇಲ್ವಿಚಾರಕರಿಗೆ ಸೂಚನೆ ನೀಡಿದರು.
ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿರುವವರ ಸಮೀಕ್ಷೆ ಮಾಡಿ, ಹೆಚ್ಚುವರಿ ಜಾಗ ಆಕ್ರಮಿಸಿಕೊಂಡು ವ್ಯಾಪಾರ ಮಾಡದಂತೆ ಅಗತ್ಯ ಕ್ರಮವಹಿಸಬೇಕು. ಅಂಗಡಿಗಳ ನಡುವಿನ ಅಂತರಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಲು ಸೂಚಿಸಿದರು.
*ಸೀಜ್ ವಾಹನಗಳನ್ನು ತೆರವುಗೊಳಿಸಿ:*
ಸಂಚಾರಿ ಪೊಲೀಸ್ ವಿಭಾಗದಿಂದ ಸೀಜ್/ವಶಪಡಿಸಿಕೊಂಡಿರುವ ವಾಹನಗಳನ್ನು ಕೆ.ಆರ್ ಮಾರುಕಟ್ಟೆಯ ಪಾರ್ಕಿಂಗ್ ಸ್ಥಳದಲ್ಲಿದ್ದು, ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಜೊತೆಗೆ ತುಂಬಾ ದಿನಗಳಿಂದ ನಿಂತಿರುವ ವಾಹನಗಳನ್ನು ಗುರುತಿಸಿ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ತೆರವುಗೊಳಿಸಲು ಸೂಚನೆ ನೀಡಿದರು.
ಈ ವೇಳೆ ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಮುಖ್ಯ ಅಭಿಯಂತರರಾದ ಲೋಕೇಶ್, ಬಸವರಾಜ್ ಕಬಾಡೆ, ರಾಜೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.