ಬೆಂಗಳೂರು: ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ತಿಳಿಸಿದರು.
ಪಶು ವೈದ್ಯಕೀಯ ಕಾಲೇಜು, ಮಾವು ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ಮಾವು ಮೇಳ-2025″ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಮಾತನಾಡಿದರು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಮೇಳವು ನಡೆಯಲಿದೆ, ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ. ಡಾ. ಕೆ.ಸಿ. ವೀರಣ್ಣ ಮಾತನಾಡಿ, ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.
ಪಶು ವೈದ್ಯಕೀಯ ಕಾಲೇಜಿನ ಅಲ್ಯೂಮಿನಿ ಅಸೋಸಿಯೇಷನ್ ಅಧ್ಯಕ್ಷ ಡಾ. ಹರೀಶ್ ಮಾತನಾಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಬ್ಬಾಳ ಮಾವಿನಹಣ್ಣಿನ ಮೇಳವನ್ನು ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರು ಹಾಗೂ ರೈತರ ನಡುವೆ ಒಂದು ಕೊಂಡಿಯಾಗಿ ಬೆಸೆಯುವ ನಟಿನಲ್ಲಿ ಮಾರಾಟ ಮೇಳವನ್ನು ಇದೇ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಮೊದಲ ಬಾರಿಗೆ 16 ಸ್ಟಾಲ್ ಗಳನ್ನು ರೈತರು ಹಾಕಿದ್ದಾರೆ. ಮ್ಯಾಂಗೋ ಮತ್ತು ಹಲಸಿಗೆ ಹೆಚ್ಚು ಹೊತ್ತು ಕೊಡಲಾಗಿದೆ ಎಂದರು.
ಹೆಬ್ಬಾಳ ಮಾವು ಮೇಳ ಹೆಸರಿಡಲು ಅದಕ್ಕೆ ಬಹಳ ಮುಖ್ಯವಾದ ಕಾರಣವಿದೆ. ಹೆಬ್ಬಾಳ ಕ್ಷೇತ್ರಕ್ಕೆ 125ವರ್ಷಗಳ ಇತಿಹಾಸವಿದೆ. ಹೀಗಾಗಿ ಇಲ್ಲಿನ ಜನರಿಗೆ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 15 ತರಹದ ಮಾವಿನ ಹಣ್ಣುಗಳು ಈ ಮೇಳದಲ್ಲಿ ಲಭ್ಯವಿದ್ದು ಗ್ರಾಹಕರು ಹೆಚ್ಚಿನದಾಗಿ ಆಗಮಿಸಿ ಕೊಂಡುಕೊಳ್ಳಲು ಮನವಿ ಮಾಡಿದರು ಈ ಮೇಳದಲ್ಲಿ ಬರುವ ಹಣ್ಣುಗಳಿಗೆ ಯಾವುದೇ ರಾಸಾಯನಿಕ ಸಿಂಪಡಿಸದೆ ಹಣ್ಣು ಮಾಡಲಾಗಿದೆ.
ರೈತರಿಗೆ ಅನುಕೂಲವಾಗಲು ಶೆಡ್ ನಿರ್ಮಾಣ ವ್ಯವಸ್ಥೆ
ಮುಂದಿನ ವರ್ಷದಲ್ಲಿ ಅಲುಮಿನಿಯಂ ಅಸೋಸಿಯೇಷನ್, ಕೃಷಿ ವಿಶ್ವ ವಿದ್ಯಾಲಯ, ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತಿ ತಿಂಗಳು ಮೇಳವನ್ನು ಮಾಡಲಾಗುತ್ತದೆ. ರೈತರಿಗೆ ಪ್ರತಿ ತಿಂಗಳು ಸ್ಟಾರ್ ಆಗುವ ಬದಲು ನಮ್ಮ ಸಂಘದಿಂದ ಶಾಶ್ವತವಾಗಿ ಶೆಡ್ಡುಗಳನ್ನು ನಿರ್ಮಾಣ ಮಾಡಿ ರೈತರಿಗೆ ತಗಲುವ ವೆಚ್ಚವನ್ನು ಕಡಿಮೆ ಮಾಡಲಾಗುತ್ತದೆ. ಮುಂದಿನ ಬಾರಿ ರೈತರನ್ನು ಹೆಚ್ಚಿನ ಪ್ರಮಾಣದಲ್ಲಿ ಕರೆಯಿಸಿ ಮೇಳವನ್ನು ಮಾಡಲಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು.ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸುರೇಶ್ ,ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.