ಬೆಂಗಳೂರು: ದಾಸರಹಳ್ಳಿ ವಲಯದ ಕೆಐಎಡಿಬಿ ರಸ್ತೆಯಲ್ಲಿ ಪಾದಾಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ದಾಸರಹಳ್ಳಿ ವಲಯದ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ತಿಳಿಸಿದರು.
*ಅನಧಿಕೃತ ಒ.ಎಫ್.ಸಿ ತೆರವು:*
ದಾಸರಹಳ್ಳಿ ವಲಯದ ಕೆಐಎಡಿಬಿ ರಸ್ತೆಯಲ್ಲಿ ಎನ್ಟಿಟಿಎಫ್ ವೃತ್ತದಿಂದ 14ನೇ ಕ್ರಾಸ್ ಜಂಕ್ಷನ್ ವರೆಗಿನ ಅನಧಿಕೃತ ಒ.ಎಫ್.ಸಿ ಸೇರಿದಂತೆ ಬಿದ್ದ ರೆಂಬೆ ಕೊಂಬೆ, ಪಾದಾಚಾರಿಗಳ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದ ಸೈಜ್ ಕಲ್ಲುಗಳನ್ನು ತೆರವುಗೊಳಿಸಿ ಪಾದಾಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಲಾಯಿತು.
*ಪಾದಾಚಾರಿ ಒತ್ತುವರಿ ಮಾಡಿರುವವರಿಗೆ ದಂಡ:*
ತೆರವು ಕಾರ್ಯಾಚರಣೆ ವೇಳೆ ಪಾದಾಚಾರಿ ಮಾರ್ಗದಲ್ಲಿನ 4 ತಳ್ಳುಗಾಡಿಗಳನ್ನು ತೆರವುಗೊಳಿಸಲಾಯಿತು. ಅಲ್ಲದೇ, ನಾಲ್ಕು ಸ್ಥಳಗಳಲ್ಲಿ ಪಾದಾಚಾರಿ ಮಾರ್ಗವನ್ನು ಒತ್ತುವರಿ ಮಾಡಿರುವವರಿಗೆ ರೂ. 4000/- ದಂಡ ವಿಧಿಸಲಾಯಿತು.
ಬೊಮ್ಮನಹಳ್ಳಿ ವಲಯದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು:
ಬೊಮ್ಮನಹಳ್ಳಿ ವಲಯದ ಅಂಜನಾಪುರ ಉಪವಿಭಾಗ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.
ಅದಲ್ಲದೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ಪಾದಚಾರಿ ಮಾರ್ಗದಲ್ಲಿ ಇರಿಸಿದ್ದ ಶಾಶ್ವತ ಮಳಿಗೆಗಳನ್ನು ತೆರವುಗೊಳಿಸಲಾಯಿತು.
ಈ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.