ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಮಾಜಿ ಶಾಸಕರಾದ ಎಲ್ ಆರ್ ಶಿವರಾಮೇಗೌಡ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸಂಭ್ರಮದಿಂದ ಬೆಂಗಳೂರಿನಲ್ಲಿ ಆಚರಣೆ ಮಾಡಿಕೊಳ್ಳಲಾಯಿತು.
ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಅವರ ನಿವಾಸದ ಮುಂದೆ ಸಂಭ್ರಮ ಸಡಗರದಲ್ಲಿ 70ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಯಿತು.
ಇನ್ನೂ ಎಲ್ ಆರ್ ಶಿವರಾಮೇಗೌಡ ಅವರ ಹುಟ್ಟುಹಬ್ಬ ನಿಮಿತ್ತವಾಗಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಜರಾಯಿ ಹಾಗು ಸಾರಿಗೆ ಮಂತ್ರಿಗಳಾದಂತಹ ಸಚಿವ ರಾಮಲಿಂಗ ರೆಡ್ಡಿ ಅವರು ಸೇರಿದಂತೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್, ವಾರ್ಡ್ ಅಧ್ಯಕ್ಷರು ಸೆರಿ ಎಲ್ಲಾ ಕಾಂಗ್ರೆಸ್ನ ಕಾರ್ಯಕರ್ತರು ಮುಖಂಡರು ಎಲ್ ಆರ್ ಶಿವರಾಮೇಗೌಡ ಅವರ ಹುಟ್ಟುಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಿದರು.
ಇನ್ನು ಶಿವರಾಮೇಗೌಡರ ಹುಟ್ಟು ಹಬ್ಬದ ನಿಮಿತವಾಗಿ ಸಾರ್ವಜನಿಕರಿಗೆ ಅನ್ನದಾನವನ್ನು ಸಹ ಏರ್ಪಡಿಸಲಾಗಿತ್ತು. ಸಾವಿರಾರು ಜನ ಅನ್ನದಾನವನ್ನು ಸವಿದರು. ಶಿವರಾಮೇಗೌಡರು ಕೇವಲ ರಾಜಕೀಯದಲ್ಲಿ ಮಾತ್ರವಲ್ಲದೆ ಸಮಾಜಮುಖಿ ಕೆಲಸಗಳಲ್ಲಿ ಸಹ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳು ಹಿತೈಷಿಗಳು ಕಾರ್ಯಕರ್ತರು ನಾಗಮಂಗಲ ಕ್ಷೇತ್ರದ ಜನತೆ ಈ ಒಂದು ಹುಟ್ಟು ಹಬ್ಬದಲ್ಲಿ ಭಾಗಿಯಾಗಿದ್ದರು.
ಅಲ್ಲದೆ ಅಭಿಮಾನಿಗಳು ಶಿವರಾಮೇಗೌಡರ ಹುಟ್ಟುಹಬ್ಬಕ್ಕೆ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು.