ಬೆಂಗಳೂರು: ಭಾರತ ಬಿಟ್ಟು ತೊಲಗಿ” ಚಳುವಳಿ ದಿನ ಅಂಗವಾಗಿ* ಬಿಬಿಎಂಪಿ ಮಾನ್ಯ *ಆಡಳಿತಗಾರರಾದ ಶ್ರೀ ತುಷಾರ್ ಗಿರಿ ನಾಥ್,* ರವರು, ಮಾನ್ಯ *ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್* ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ *ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.*
ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ *ಗೀತ ವಾಚನ*, ಶ್ರೀಮತಿ ದೀಪಿಕಾ ಶ್ರೀಕಾಂತ್ ರವರಿಂದ *ವೈಷ್ಣವ ಜನತೋ*, ಹಡ್ಸನ್ ಚರ್ಚಿನ ಫಾದರ್ ಶ್ರೀ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ *ಬೈಬಲ್ ವಾಚನ*, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ *ಗುರು ಗ್ರಂಥ ವಾಚನ*, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ *ಖುರಾನಿನ ವಾಚನ* ಮಾಡಲಾಯಿತು.
ಈ ವೇಳೆ ವಿಶೇಷ ಆಯುಕ್ತರಾದ ನವೀನ್ ಕುಮಾರ್ ರಾಜು, ಉಪ ಆಯುಕ್ತರಾದ ಅಮರೇಶ್, ಪೂರ್ವ ವಲಯ ಜಂಟಿ ಆಯುಕ್ತರಾದ ಸರೋಜಾ, ಮಾಜಿ ಸಚಿವರಾದ ರಾಮಚಂದ್ರೇಗೌಡ, ಮಾಜಿ ಮಹಾಪೌರರಾದ ಜೆ. ಹುಚ್ಚಪ್ಪ, ಎಂ.ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.