LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

  ಅಂಬೇಡ್ಕರ್ ಪ್ರಸಿದ್ಧ ಮತ್ತು ನುರಿತ ಅರ್ಥಶಾಸ್ತ್ರಜ್ಞರು – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಡಾ.ಭೀಮರಾವ್ ಅಂಬೇಡ್ಕರ್ ಅವರು ಪ್ರಸಿದ್ಧ ಮತ್ತು ನುರಿತ ಅರ್ಥಶಾಸ್ತ್ರಜ್ಞಾರಾಗಿದ್ದರು. ಅವರ ಚಿಂತನೆ ಮತ್ತು ನೀತಿಗಳನ್ನು ಪರಿಗಣಿಸಿ, ಭಾರತ ಸರ್ಕಾರವು ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರಿಂದಾಗಿ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮುನ್ನಡೆಯುತ್ತಿದ್ದು, ದೇಶದ ಆರ್ಥಿಕತೆಯೂ ಬಲಿಷ್ಠವಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಮೊದಲನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಉನ್ನತ ಶಿಕ್ಷಣ ಪಡೆದು ಬಾಬಾ ಸಾಹೇಬರು ಬಯಸಿದ್ದರೆ ಲಂಡನ್, ಅಮೆರಿಕ ಅಥವಾ ದೇಶದಲ್ಲೇ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಆಯ್ಕೆ ಮಾಡಿ ಭವ್ಯ ಜೀವನ ನಡೆಸಬಹುದಿತ್ತು. ತನ್ನ ಮತ್ತು ತನ್ನ ಕುಟುಂಬದ ಕಲ್ಯಾಣದ ಬಗ್ಗೆ ಯೋಚಿಸುವ ಬದಲು, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ತೊಡೆದುಹಾಕಲು ಸಮಾನತೆ ಮತ್ತು ಸಾಮರಸ್ಯದ ವಾತಾವರಣವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಕೆಲಸ ಮಾಡಿದರು. ಬಾಬಾ ಸಾಹೇಬರು ದೇಶ ಮತ್ತು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡುವುದನ್ನು ಮುಂದುವರೆಸಿದರು ಮತ್ತು ಸರ್ವವ್ಯಾಪಿ, ಸರ್ವ ಸ್ನೇಹಿಯಾದರು ಎಂದರು.

ಭಾರತೀಯ ಕರೆನ್ಸಿ ಸಮಸ್ಯೆ, ಹಣದುಬ್ಬರ ಮತ್ತು ವಿನಿಮಯ ದರ, ಭಾರತದ ರಾಷ್ಟ್ರೀಯ ಲಾಭಾಂಶ, ಭೂರಹಿತ ಕಾರ್ಮಿಕರ ಸಮಸ್ಯೆ ಮತ್ತು ಪ್ರಮುಖ ವಿಷಯಗಳ ಕುರಿತು ಸಂಶೋಧನೆ ಮಾಡುವ ಮೂಲಕ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಭಾರತದಲ್ಲಿ ಆರ್ಥಿಕ ಮತ್ತು ಆರ್ಥಿಕ ಶಕ್ತಿಗಾಗಿ ಅವರ ಕೆಲಸವು ಅನುಕರಣೀಯವಾಗಿದೆ ಎಂದು ತಿಳಿಸಿದರು.

ಯಶಸ್ವಿ ಅರ್ಥಶಾಸ್ತ್ರಜ್ಞರು ಸಂಕೀರ್ಣ ದತ್ತಾಂಶ ಮತ್ತು ಅಂಕಿಅಂಶಗಳನ್ನು ಅಧ್ಯಯನ ಮಾಡುತ್ತಾರೆ ಮತ್ತು ಹಣಕಾಸು ಸಂಸ್ಥೆಗಳಿಗೆ ಸಲಹೆ ನೀಡಲು ಅವರ ಸಂಶೋಧನೆಗಳನ್ನು ಬಳಸುತ್ತಾರೆ. ನೀತಿಗಳು ಮತ್ತು ಹೂಡಿಕೆಗಳ ಸಂಭಾವ್ಯ ಪ್ರಭಾವದ ಕುರಿತು ಅರ್ಥಶಾಸ್ತ್ರಜ್ಞರ ಸಲಹೆ ಮುಖ್ಯವಾಗಿದೆ. ನಮ್ಮ ದೇಶದ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ, ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ಸಕ್ರಿಯ ಪ್ರಯತ್ನಗಳು ನಡೆಯಬೇಕು ಎಂದು ಸಲಹೆ ನೀಡಿದರು.

ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾನಿಲಯವು ಮೊದಲ ಘಟಿಕೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಸಂತೋಷದ ಸಂಗತಿಯಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವು ಆರ್ಥಿಕ ಸಂಶೋಧನೆ ಮತ್ತು ಶಿಕ್ಷಣದಲ್ಲಿ ಉತ್ಕøಷ್ಟತೆಯ ಉದಯೋನ್ಮುಖ ಸಂಸ್ಥೆಯಾಗಿದೆ. ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ಬೇಡಿಕೆಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸುವ ಅರ್ಥಶಾಸ್ತ್ರ ಕ್ಷೇತ್ರದಲ್ಲಿ ಪ್ರತಿಷ್ಠಿತ ಸಂಸ್ಥೆಯ ಅಗತ್ಯವನ್ನು ಪೂರೈಸಲು ಇದು ರಚಿಸಲಾಗಿದೆ. ಈ ಸಂಸ್ಥೆಯಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿಂದನೆಗಳು. ನೀವು ಅರ್ಥಶಾಸ್ತ್ರಜ್ಞರಾಗಿ, ಆರ್ಥಿಕ ಪ್ರವೃತ್ತಿಗಳನ್ನು ಸಂಶೋಧಿಸುವುದು ಮತ್ತು ಮೇಲ್ವಿಚಾರಣೆ ಮಾಡುವುದು ಮತ್ತು ಭವಿಷ್ಯದ ಬೆಳವಣಿಗೆಗಳಿಗಾಗಿ ಸಂಖ್ಯಾಶಾಸ್ತ್ರೀಯ ಮಾದರಿಗಳನ್ನು ರಚಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ವೇಳೆ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಆರ್‍ಬಿಐ ಮಾಜಿ ಗವರ್ನರ್ ಡಾ.ಸಿ.ರಂಗರಾಜನ್, ಕುಲಪತಿ ಡಾ.ಎನ್.ಆರ್.ಭಾನುಮೂರ್ತಿ ಇತರ ಗಣ್ಯರು ಹಾಜರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ