LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಇ-ಆಸ್ತಿ ತ್ವರಿತ, ಸುಗಮ ವಿತರಣೆಗಾಗಿ ಕಂದಾಯ ವಿಭಾಗದ ಅಧಿಕಾರಿ ಮತ್ತು ನೌಕರರಿಗೆ ಕಾರ್ಯಗಾರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತುರ್ತಾಗಿ ಇ-ಖಾತಾ ಪಡೆಯಲು ಬರುವ ಆಸ್ತಿ ಮಾಲೀಕರಿಗೆ ಸರಿಯಾಗಿ ಸ್ಪಂದಿಸಬೇಕೆಂದು ಕಂದಾಯ ವಿಭಾಗದ ಜಂಟಿ ಆಯುಕ್ತೆಯಾದ ಲಕ್ಷ್ಮೀದೇವಿ ರವರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇ-ಖಾತಾ ನೀಡುವ ವಿಚಾರವಾಗಿ ನಗರದ ಎನ್.ಆರ್. ಕಾಲೋನಿಯ ಡಾ.ಸಿ ಅಶ್ವತ್ಥ್ ಕಲಾ ಭವನ ನಡೆದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಆಸ್ತಿ ಸೇವೆಗಳ ಸುಗಮ ವಿತರಣೆ ಹಾಗೂ ತುರ್ತು ಸಂದರ್ಭಗಳಲ್ಲಿ ನೋಂದಣಿ ಪ್ರಕರಣಗಳಿಗೆ ಆದ್ಯತೆಯನ್ನು ನೀಡಲು ತಿಳಿಸಿದರು.

ಬಿಬಿಎಂಪಿ‌ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳೊಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ತುರ್ತು ಆಸ್ತಿ ನೋಂದಣಿಗಾಗಿ ಅಂತಿಮ ಇ-ಖಾತಾವನ್ನು ಪಡೆಯುವ ಸಲುವಾಗಿ ಕಂದಾಯ ಅಧಿಕಾರಿಗಳ ಕಛೇರಿಗೆ ಬರುವ ನಾಗರೀಕರು/ಆಸ್ತಿ ಮಾಲೀಕರಿಗೆ ಕೂಡಲೆ ಸ್ಪಂದಿಸಿ ಇ-ಖಾತಾ ನೀಡುವ ವ್ಯವಸ್ಥೆ ಮಾಡಲು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿನ 21 ಲಕ್ಷಕಿಂತಲೂ ಹೆಚ್ಚು ಆಸ್ತಿಗಳನ್ನು ಡಿಜೀಟಲಿಕರಣಗೊಳಿಸಲಾಗಿದ್ದು, ದಿನಾಂಕ 1ನೇ ಅಕ್ಟೋಬರ್ 2024 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ವ್ಯವಸ್ಥೆಗೆ  ಒಳಪಡಿಸಿ bbmp.eaasthi.karnataka.gov.in ನಲ್ಲಿ ರಚಿಸಿ ಇರಿಸಲಾಗಿರುತ್ತದೆ ಎಂದರು.

ಇ-ಖಾತಾ ಪಡೆಯಲು ಹೆಲ್ಪ್ ಡೆಸ್ಕ್:

ಆಸ್ತಿ ನೊಂದಣಿ ಮಾಡಿಸುವವರಿಗೆ ಶೀಘ್ರವಾಗಿ ಇ-ಖಾತಾ ಪಡೆಯುವ ಸಲುವಾಗಿ ಸಹಾಯಕ ಕಂದಾಯ ಅಧಿಕಾರಿಗಳ ಕಛೇರಿಗಳಲ್ಲಿ Help Desk ತೆರೆಯಲಾಗಿದ್ದು, ಈ ಮೂಲಕ ಶೀಘ್ರವಾಗಿ ಇ-ಖಾತಾ ಬಗ್ಗೆ ಅಗತ್ಯ ಮಾಹಿತಿ ಪಡದು ಇ-ಖಾತಾ ಪಡೆಯಬಹುದಾಗಿದೆ.

ತುರ್ತಾಗಿ ಆಸ್ತಿ ನೋಂದಣಿ ಮಾಡಿಸುವವರಿಗೆ ಹಾಗೂ ಅನಿವಾಸಿ ಭಾರತೀಯರಿಗೆ ಯಾವುದೇ ತೊಂದರೆ ಆಗದಂತೆ ಅತಿ ಶೀಘ್ರದಲ್ಲಿ ಇ-ಖಾತಾ ವಿತರಿಸುವ ಸಲುವಾಗಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿನ ಹೆಲ್ಪ್ ಡೆಸ್ಕ್ ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ನೆರವಾಗುವಂತೆ ಸೂಚಿಸಿದರು.

8 ವಲಯಗಳ ಅಧಿಕಾರಿಗಳೊಂದಿಗೆ ಕಾರ್ಯಗಾರ:

ಇ-ಖಾತಾ ನೀಡುವ ವಿಚಾರವಾಗಿ ಪಾಲಿಕೆಯ ಎಂಟೂ ವಲಯಗಳಲ್ಲಿ ಬರುವ ಕಂದಾಯ ವಿಭಾಗದ ಉಪ ಆಯುಕ್ತರು, ಸಹಾಯಕ ಕಂದಾಯ ಅಧಿಕಾರಿಗಳು, ವಿಷಯ ನಿರ್ವಾಕರುಗಳು, ಎನ್.ಐ.ಸಿ ಅಧಿಕಾರಿಗಳು ಸೇರಿದಂತೆ 350ಕ್ಕೂ ಹೆಚ್ಚು ಅಧಿಕಾರಿ/ಸಿಬ್ಬಂದಿಗಳು ಕಾರ್ಯಗಾರದಲ್ಲಿದ್ದರು‌.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ