LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಮುವಿಯ 2026-27ನೇ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಆರಂಭ : ಪ್ರೊ.ಎ.ಪಿ.ಜ್ಞಾನಪ್ರಕಾಶ್

ಬೆಂಗಳೂರು : ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಎಂಬ ಉದ್ದೇಶದಿಂದ ಯಾರು ಕೂಡ ಶಿಕ್ಷಣದಿಂದ ವಂಚಿತರಾಗಬಾರದು, ಪ್ರಸ್ತುತ ಶಿಕ್ಷಣದಿಂದ ದೂರ ಉಳಿಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ದೂರ ಶಿಕ್ಷಣ ಬಹಳ ಪ್ರಯೋಜನಕಾರಿ ಯಾಗಿದೆ ಅದನ್ನು ವಿದ್ಯಾರ್ಥಿಗಳು ಸದುದ್ದೇಶದಿಂದ ಬಳಸಿಕೊಳ್ಳಬೇಕು ಎಂದು ಕರಾಮುವಿಯ  ಕುಲಪತಿಗಳಾದ ಪ್ರೊ.ಎ.ಪಿ.ಜ್ಞಾನಪ್ರಕಾಶ್ ತಿಳಿಸಿದರು.news_1784696710_2_915.webp

 ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2026-27 ನೇ ಸಾಲಿನ ಜುಲೈ  ಆವೃತ್ತಿಯ  ಪ್ರವೇಶಾತಿ  ಪ್ರಾರಂಭವಾಗಿರುವ ಕುರಿತು  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ  ಈಗಾಗಲ್ಲೇ 2026-27ನೇ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಆರಂಭವಾಗಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಶಿಕ್ಷಣವು ಪ್ರತಿಯೊಬ್ಬರ ಬದುಕಿನ ಪ್ರಮುಖ ಆಧಾರವಾಗಿದೆ. ಆದರೆ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬದ ಜವಾಬ್ದಾರಿ ಅಥವಾ ಇತರ ಕಾರಣಗಳಿಂದ ಅನೇಕರು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗುವುದಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕರಾಮುವಿ) ಮೂರು ದಶಕಗಳಿಂದ ದೂರ ಮತ್ತು ಮುಕ್ತ ಶಿಕ್ಷಣದ ಮೂಲಕ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತ ಬಂದಿದೆ ಎಂದರು.

ಕರ್ನಾಟಕದಲ್ಲಿಯೇ ಕರಾಮುವಿ ಏಕೈಕ ವಿವಿ:

ಕರ್ನಾಟಕದಲ್ಲಿ ದೂರ ಮತ್ತು ಮುಕ್ತ ಶಿಕ್ಷಣವನ್ನು ನೀಡುವ ರಾಜ್ಯದ ಏಕೈಕ ವಿಶ್ವವಿದ್ಯಾನಿಲಯವಾಗಿ ಕರಾಮುವಿ ಕಾರ್ಯನಿರ್ವಹಿಸುತ್ತಿದ್ದು, ಯುಜಿಸಿ-ಡಿಇಬಿ ಮಾನ್ಯತೆ, ನ್ಯಾಕ್ A+ ಶ್ರೇಣಿ ಹಾಗೂ ರಾಷ್ಟ್ರೀಯ NIRF ಮುಕ್ತ ವಿಶ್ವವಿದ್ಯಾನಿಲಯಗಳ ವಿಭಾಗದಲ್ಲಿ 2ನೇ ಸ್ಥಾನ ಪಡೆದಿರುವುದು ವಿಶೇಷವಾಗಿದೆ ಎಂದರು.

2026-27 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಸಿ., ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಸಿ. ಸೇರಿದಂತೆ 65ಕ್ಕೂ ಹೆಚ್ಚು ಯುಜಿಸಿ ಅನುಮೋದಿತ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಪ್ರಮಾಣಪತ್ರ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲವು ಕೋರ್ಸ್ಗಳನ್ನು ಸಂಪೂರ್ಣ ಆನ್ಲೈನ್ ಮೂಲಕವೂ ಕಲಿಯುವ ಅವಕಾಶವಿದ್ದು, ವಿದ್ಯಾರ್ಥಿಗಳಿಗೆ ಇನ್ನಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.news_1784696709_1_451.webp

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಅನುಕೂಲಗಳ ಮಹಾಪೂರ:

ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗಾಗಿ ಹಲವಾರು ವಿಶೇಷ ಸೌಲಭ್ಯಗಳನ್ನು ಒದಗಿಸಿದೆ. ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಎಸ್ಎಸ್ಪಿ ವಿದ್ಯಾರ್ಥಿವೇತನ, ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ತೃತೀಯ ಲಿಂಗದ ವಿದ್ಯಾರ್ಥಿಗಳು, ದೃಷ್ಟಿಹೀನ ವಿದ್ಯಾರ್ಥಿಗಳು ಹಾಗೂ ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಬಿಪಿಎಲ್ ಮಹಿಳೆಯರು, ಮಾಜಿ ಸೈನಿಕರು, ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಅವರ ಕುಟುಂಬದವರಿಗೆ ಶುಲ್ಕದಲ್ಲಿ ರಿಯಾಯಿತಿಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕರಾಮುವಿಯಿಂದ ಡಿಜಿಟಲ್ ಶಿಕ್ಷಣಕ್ಕೆ   ಹೆಚ್ಚು ಹೊತ್ತು;
.
ಡಿಜಿಟಲ್ ಶಿಕ್ಷಣಕ್ಕೂ ಕರಾಮುವಿ ಹೆಚ್ಚಿನ ಆದ್ಯತೆ ನೀಡಿದ್ದು ಮೊಬೈಲ್ ಆಪ್, ಇ-ಲರ್ನಿಂಗ್ ವೇದಿಕೆ, ಆನ್ಲೈನ್ ತರಗತಿಗಳು, ದಾಖಲಿತ ವಿಡಿಯೊ ಪಾಠಗಳು, ಅಸೈನ್ಮೆಂಟ್ ಅಪ್ಲೋಡ್, ಹಳೆಯ ಪ್ರಶ್ನೆಪತ್ರಿಕೆಗಳು ಮತ್ತು "ಕರಾಮುವಿ ದೃಶ್ಯವಾಹಿನಿ" ಯೂಟ್ಯೂಬ್ ಚಾನೆಲ್ ಮೂಲಕ ವಿದ್ಯಾರ್ಥಿಗಳು ಎಲ್ಲಿಂದ ಬೇಕಾದರೂ ಅಧ್ಯಯನ ಮಾಡಬಹುದು. ಇದರಿಂದ ಶಿಕ್ಷಣ ಇನ್ನಷ್ಟು ಸುಲಭವಾಗಿ ಲಭ್ಯವಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬಹುದಾಗಿದೆ ಎಂದರು.

ಕರಾಮುವಿಯ ಎಲ್ಲಾ ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿ ಮಾಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ವಿವಿಧ ಕೊರ್ಸುಗಳಿಗಾಗಿ ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in ನಲ್ಲಿ KSOU Admission Portal ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರಾಮುವಿಯ ಪ್ರಾದೇಶಿಕ ನಿರ್ದೇಶಕರಾದ ರೋಹಿತ್, ಸೇರಿದಂತೆ ಪ್ರಾದೇಶಿಕ ವಲಯದ ಅಧಿಕಾರಿ ವರ್ಗದವರು ಸಿಬ್ಬಂದಿಗಳು ಬೋಧಕರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಐ ಆಧಾರಿತ ಉತ್ಪನ್ನ ರಾಷ್ಟ್ರ ನಿರ್ಮಾಣ' ಗುರಿಯೊಂದಿಗೆ ಎರಡು ದಿನಗಳ ಶೃಂಗಸಭೆ:ಡಾ. ಸೆಲ್ವಕುಮಾರ್ನೀಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಶ್ನೆ ಪತ್ರಿಕೆ ಸೋರಿಕೆ; ಯೂಥ್ ಕಾಂಗ್ರೆಸ್ ನಿಂದ ಧರಣಿಕರಾಮುವಿಯ 2026-27ನೇ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಆರಂಭ : ಪ್ರೊ.ಎ.ಪಿ.ಜ್ಞಾನಪ್ರಕಾಶ್ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ "ಬೆಂಗಳೂರು ಹಸಿರೂರು ಅಭಿಯಾನಫಿಫಾ ವಿಶ್ವ ಕಪ್: ಅರ್ಜೆಂಟೇನ ಮಣಿಸಿದ ಸ್ಟೇನ್ಚೆನ್ನಮ್ಮ ಮಾತೃಶಕ್ತಿಯ ಸಂಕೇತವಾಗಿದ್ದರು: ಎಂ ಬಿ ಪಾಟೀಲ ಕಂಬನಿಕ್ವಿನ್ ಸಿಟಿಯಲ್ಲಿ ಲಕ್ಸಂಬರ್ಗ್ ಸಹಭಾಗಿತ್ವಕ್ಕೆ ಆಹ್ವಾನ, ಜಪಾನ್‌ನಲ್ಲಿ ಹೂಡಿಕೆ ಆಕರ್ಷಣೆ: ಸಚಿವ ಎಂ ಬಿ ಪಾಟೀಲಮಹಾರಾಣಿ ಟ್ರೋಫಿ ಟಿ20 2ನೇ ಸೀಸನ್ ಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡ ಪ್ರಕಟ, ಶುಭಾ ಸತೀಶ್‌ ಗೆ ನಾಯಕತ್ವ ಫೀನಿಕ್ಸ್ ಮಾರ್ಕೆಟ್ಸಿಟಿಯಲ್ಲಿ  ಅಜೋರ್ಟ್ ಹೊಸ ಮಳಿಗೆ ಆರಂಭಜೋಹಾನ್ ಜಾಬ್ NEET UG 2026 ರಲ್ಲಿ AIR 69 ರೊಂದಿಗೆ ಬೆಂಗಳೂರಿಗೆ ಟಾಪರ್