LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಕ್ಕೆ 143 ಕೋಟಿ ರೂ. ಲಾಭಾಂಶ ಕೊಟ್ಟ ಕೆಎಸ್ಐಐಡಿಸಿ: ಎಂ ಬಿ ಪಾಟೀಲ

ಬೆಂಗಳೂರು: 2024-25ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಗಳಿಸಿದ ನಿವ್ವಳ ಲಾಭದಲ್ಲಿ 143.12 ಕೋಟಿ ರೂ.ಗಳ ಲಾಭಾಂಶವನ್ನು (ಡಿವಿಡೆಂಡ್) ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೋಮವಾರ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ 3 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಿಗಮವು 2024-25ರಲ್ಲಿ ಒಟ್ಟು ತೆರಿಗೆ ಕಡಿತದ ಬಳಿಕ 188.41 ಕೋಟಿ ರೂ. ಲಾಭ ಗಳಿಸಿತ್ತು. ಜತೆಗೆ 2025-26ನೇ ಸಾಲಿನಲ್ಲಿ ಸಂಸ್ಥೆಗೆ 19.34 ಕೋಟಿ ರೂ.ಗಳಷ್ಟು ಹಣವು ವಿಶೇಷ ಡಿವಿಡೆಂಡ್ ಲಾಭದಲ್ಲಿ ಬಂದಿತ್ತು. ನಿಯಮಾನುಸಾರವಾಗಿ ಲಾಭಾಂಶದ ಪೈಕಿ ಶೇ.30ರಷ್ಟನ್ನು ಈಗ ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.

ಕೆಎಸ್ಐಐಡಿಸಿ ಸಂಸ್ಥೆಗೆ ಕ್ಯಾಮ್ಕೊ, ಕ್ಯಾಟ್ಕೊ, ಎಂಎಸ್ಐಎಲ್, ಎಚ್.ಜಿ.ಎಂ.ಎಲ್ ಮುಂತಾದ ಉದ್ದಿಮೆಗಳಿಂದ ಈ ಆದಾಯ ಬಂದಿದೆ. ಸಾರ್ವಜನಿಕ ಉದ್ದಿಮೆಗಳು ಲಾಭದ ಹಳಿಗೆ ಮರಳುತ್ತಿರುವುದು ಮತ್ತು ಕಳೆದ ಮೂರು ವರ್ಷಗಳಿಂದ ಇದು ಸಾರ್ವಕಾಲಿಕ ದಾಖಲೆಯ ಪ್ರಮಾಣದಲ್ಲಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಅವರು ನುಡಿದಿದ್ದಾರೆ.

ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಕಾರ್ಯನಿರ್ವಾಹಕ ನಿರ್ದೇಶಕ ಚಿದಾನಂದ್ ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಘನ ತ್ಯಾಜ್ಯ ನಿರ್ವಹಣೆ, ಬ್ಲ್ಯಾಕ್ ಸ್ಪಾಟ್ ತೆರವು, ಸಿಬ್ಬಂದಿ ಕಾರ್ಯಕ್ಷಮತೆ ಕುರಿತು ಪ್ರಗತಿ ಪರಿಶೀಲನಾ ಸಭೆಕಸ ಸಂಗ್ರಹಣ ಆಟೋಗಳ ಮೇಲೆ ನಿಗಾ ಇಡಲು ಪ್ರಾಯೋಗಿಕವಾಗಿ MATRA app ಬಳಕೆ: ಆಯುಕ್ತ ಕೆ. ಎನ್. ರಮೇಶ್ವಾರ್ಡ್ ಮಟ್ಟದ  ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಿ: ಲೋಖಂಡೆ ಸ್ನೇಹಲ್ ಸುಧಾಕರ್ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ರಾಜ್ಯದ ನೇತೃತ್ವದಲ್ಲಿ ಪಾಲುದಾರರ ಕಾರ್ಯಾಗಾರಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಲಮಂಡಳಿ ಅಧ್ಯಕ್ಷರಾದ ಡಾ ಮಂಜುಳಾ ಸೂಚನೆ*ಕಿಮ್ಸ್ ರೆನೋವಾ ಆಂಕಾಲಜಿ ಇನ್‌ಸ್ಟಿಟ್ಯೂಟ್ ಉದ್ಘಾಟನೆ ಮಾಡಿದ ಕ್ರಿಕೆಟ್ ದಿಗ್ಗಜ ವಿವಿಎಸ್ ಲಕ್ಷ್ಮಣ್15 ಲಕ್ಷ ಸ್ಥಳೀಯ ತಳಿ ಸಸಿಗಳ ನೆಡುವ ಬೃಹತ್ ಅಭಿಯಾನಕ್ಕೆ ಸಕಲ ಸಿದ್ಧತೆಶ್ರೀ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮಿಗಳು ಲಿಂಗೈಕ್ಯಸಮಗ್ರ ಯೋಜನೆ ರೂಪಿಸಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಕೃಷ್ಣ ಬೈರೇಗೌಡಪಂಚ ಗ್ಯಾರಂಟಿ ನಾವೆಂದೂ ನಿಲ್ಲಿಸುವುದಿಲ್ಲ, ಕೊಟ್ಟ ಮಾತು ತಪ್ಪುವರಲ್ಲ:ಸಿದ್ದರಾಮಯ್ಯ