LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೂಡಿಕೆ ಆಕರ್ಷಣೆಗೆ ಮುಂಬೈನಲ್ಲಿ 2 ದಿನಗಳ ರೋಡ್ ಶೋ

ಬೆಂಗಳೂರು: ಉಕ್ಕು ತಯಾರಿಕೆ ಮತ್ತು ಇತರ ವಲಯಗಳಲ್ಲಿ ಛಾಪು ಮೂಡಿಸಿರುವ ಜಿಂದಾಲ್ ಸಮೂಹವು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 1.20 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ.news_1785926776_1_469.webp

ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಬೇಕೆಂಬ ಉದ್ದೇಶದಿಂದ ಅವರು ರಾಷ್ಟ್ರದ ವಾಣಿಜ್ಯ ಕೇಂದ್ರ ಮುಂಬೈನಲ್ಲಿ ಎರಡು ದಿನಗಳ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಜಿಂದಾಲ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಜೆಎಂಡಿ ಜಯಂತ್ ಆಚಾರ್ಯ ಅವರ ಜತೆ ಸಚಿವರು ಸಭೆ ನಡೆಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಗಿದ ಬೆನ್ನಲ್ಲೇ, ಸೋಮವಾರವೇ ಮುಂಬೈಗೆ ಅವರು ಪ್ರಯಾಣ ಬೆಳೆಸಿದ್ದಾರೆ.
ಎಲ್ ಅಂಡ್ ಟಿ, ಬಿಸ್ಲೆರಿ, ರೇಮಂಡ್ ಟಾರ್ಕ್-ಹೀರಾನಂದಾನಿ, ಸನೋಫಿ ಹೆಲ್ತ್, ಮ್ಯಾಗ್ನಂ, ಬಾಲು ಫೋರ್ಜ್ ಮತ್ತು ಮ್ಯಾಕ್ಸ್ ಏರೋಸ್ಪೇಸ್ ಸೇರಿದಂತೆ ಇತರ 10 ಪ್ರಮುಖ ಕಂಪನಿಗಳೊಂದಿಗೆ ಸಚಿವರು ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಉಕ್ಕು ಉತ್ಪಾದನೆಯಿಂದ ಹಿಡಿದು ಬಣ್ಣದ ತಯಾರಿಕೆವರೆಗೆ ನಾನಾ ವಲಯಗಳಲ್ಲಿ ಛಾಪು ಮೂಡಿಸಿರುವ ಜಿಂದಾಲ್ ಸ್ಟೀಲ್ ವರ್ಕ್ಸ್ ಕಂಪನಿಯು ಬಂಡವಾಳ ಹೂಡಿಕೆಗೆ ರಾಜ್ಯವನ್ನು ಅಚ್ಚುಮೆಚ್ಚಿನ ತಾಣವೆಂದು ನಂಬಿದೆ.

ಜಿಂದಾಲ್ ಸಮೂಹವು ಮೂರು ದಶಕಗಳಿಂದಲೂ ರಾಜ್ಯದ ಕೈಗಾರಿಕಾ ವಲಯದಲ್ಲಿ ಹೆಜ್ಜೆ ಗುರುತು ಮೂಡಿಸಿದ್ದು, ಬಳ್ಳಾರಿ ಮತ್ತು ವಿಜಯನಗರ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾರಣವಾಗಿದೆ. ಅದರ ಮುಂದಿನ ಹಂತದ ಹೂಡಿಕೆ ಆಶಾದಾಯಕವಾಗಿದ್ದು, ಸರಕಾರವು ಕಂಪನಿಗೆ ಅಗತ್ಯವಿರುವ ನೆರವು ನೀಡಲಿದೆ. ಈ ಸಮೂಹವು ರಾಜ್ಯದಲ್ಲಿ ಈಗಾಗಲೇ 1.30 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿದೆ ಎಂದು ಅವರು ವಿವರಿಸಿದ್ದಾರೆ.

ಬಾಟಲಿ ನೀರಿನ ಉತ್ಪಾದನೆಗೆ ಹೆಸರಾಗಿರುವ ಬಿಸ್ಲೆರಿ ಕಂಪನಿಯು ರಾಜ್ಯದಲ್ಲಿ ಹೆಚ್ಚಿನ ಹೂಡಿಕೆ ಮತ್ತು ತನ್ನ ಸಾಮರ್ಥ್ಯ ಹೆಚ್ಚಳವನ್ನು ಪರಿಗಣಿಸುತ್ತಿದೆ. ಇದು ಸಾಧ್ಯವಾದರೆ 2 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು, ನೀರಿನ ಸಮೃದ್ಧಿ ಇರುವ ವಿಜಯಪುರ ಅಥವಾ ಚಾಮರಾಜನಗರ ಜಿಲ್ಲೆಯನ್ನು ಆಯ್ದುಕೊಳ್ಳಲು ಕೋರಲಾಗಿದೆ. ಇದೇ ರೀತಿಯಲ್ಲಿ ಜೀನ್ಸ್ ಬಟ್ಟೆ ಉತ್ಪಾದನೆಗೆ ಮನಸ್ಸು ಮಾಡಿರುವ ರೇಮಂಡ್ ಲೈಫ್ ಸ್ಟೈಲ್ ಲಿಮಿಟೆಡ್ ಕಂಪನಿಗೆ ಕಚ್ಚಾವಸ್ತು ಮತ್ತು ಮಾರುಕಟ್ಟೆ ಅನುಕೂಲಗಳ ಹಿನ್ನೆಲೆಯಲ್ಲಿ ಬಳ್ಳಾರಿ ಇಲ್ಲವೇ ವಿಜಯಪುರದಲ್ಲಿ ಹೂಡಿಕೆ ಮಾಡುವಂತೆ ಹೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ ಅಂಡ್ ಟಿ ಕಂಪನಿಯು ಔದ್ಯಮಿಕ ರೋಬೋಟಿಕ್ಸ್ ವಲಯಕ್ಕೆ ಪ್ರವೇಶಿಸುವ ಉತ್ಸಾಹದಲ್ಲಿದ್ದು, ಬೆಂಗಳೂರಿನಲ್ಲಿ ಜಾಗತಿಕ ಮಾರುಕಟ್ಟೆಗೆ ಬೇಕಾಗುವ ಚಿಪ್ ವಿನ್ಯಾಸ ಸ್ಥಾವರವನ್ನು ಸ್ಥಾಪಿಸುವ ಚಿಂತನೆಯಲ್ಲಿದೆ. ಜತೆಗೆ ಅದು ಎಲೆಕ್ಟ್ರಾನಿಕ್ಸ್ ವಲಯಕ್ಕೆಂದೇ ಪ್ರತ್ಯೇಕ ಸಂಶೋಧನಾ ಮತ್ತು ನಾವೀನ್ಯತಾ ಪಾರ್ಕ್ ಸ್ಥಾಪಿಸುವ ಆಲೋಚನೆಯನ್ನೂ ಕಂಪನಿಯ ಪ್ರತಿನಿಧಿಗಳು ಹಂಚಿಕೊಂಡಿದ್ದಾರೆ. ಕಂಪನಿಯು ಇದರ ಬಗ್ಗೆ ತೀರ್ಮಾನಿಸಿದರೆ ಅದಕ್ಕೆ ಪೂರಕವಾಗಿ ಹೈವೋಲ್ಟೇಜ್ ಪರೀಕ್ಷಾ ಮತ್ತು ಎಲೆಕ್ಟ್ರಾನಿಕ್ ಟೆಸ್ಟಿಂಗ್ ಸೌಲಭ್ಯಕ್ಕೂ ಸರಕಾರ ನೆರವು ನೀಡಲಿದೆ ಎಂದು ಅವರು ನುಡಿದಿದ್ದಾರೆ.

ಟಾರ್ಕ್ ಸೆಮಿಕಂಡಕ್ಟರ್ಸ್ ಸಂಸ್ಥೆಯು ರಾಜ್ಯದಲ್ಲಿ ಸೆಮಿಕಂಡಕ್ಟರ್, ಡೇಟಾ ಸೆಂಟರ್ ಮತ್ತು ಎಐ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವ ಆಸಕ್ತಿ ತೋರಿಸಿದೆ. ಜತೆಗೆ ನಮ್ಮಲ್ಲಿ ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾವರ ಸ್ಥಾಪಿಸಲು ಕಂಪನಿಗೆ ಮನಸ್ಸಿದೆ. ಎಫ್ಎಂಸಿಜಿ ವಲಯದಲ್ಲಿ ಹೆಸರು ಮಾಡಿರುವ ಟಿಸಿಪಿಎಲ್ ಪ್ಯಾಕೇಜಿಂಗ್ ಲಿಮಿಟೆಡ್ ರಾಜ್ಯದಲ್ಲಿ ಫಿಲ್ಮ್ಸ್ ಮತ್ತು ಲ್ಯಾಮಿನೇಟ್ಸ್ ವಲಯದಲ್ಲಿ ನೆಲೆಯೂರಲು ನೋಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲ ಹೂಡಿಕೆದಾರರ ಜತೆಗೂ ಹೆಚ್ಚಿನ ಹೂಡಿಕೆ, ಉತ್ಪಾದನೆ, ಉದ್ಯೋಗ ಸೃಷ್ಟಿ, ಸಂಶೋಧನೆ ಮತ್ತು ಅಭಿವೃದ್ಧಿ, ಡೇಟಾ ಸೆಂಟರುಗಳ ಸ್ಥಾಪನೆ, ನೀರು ಮತ್ತು ಭೂಮಿಯ ಲಭ್ಯತೆ ಇವುಗಳಿಗೆ ಒತ್ತು ಕೊಟ್ಟು ಮಾತುಕತೆ ನಡೆಸಲಾಯಿತು ಎಂದು ಅವರು ವಿವರಿಸಿದ್ದಾರೆ.

ಈ ಮಾತುಕತೆಗಳಲ್ಲಿ ಟಾರ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ನಿರಂಜನ್ ಹೀರಾನಂದಾನಿ, ಟಿಸಿಪಿಎಲ್ ಅಧ್ಯಕ್ಷ ಸಾಕೇತ್ ಕನೋರಿಯಾ, ಬಿಸ್ಲೆರಿ ಸಿಇಒ ಆ್ಯಂಜೆಲೋ ಜಾರ್ಜ್, ರೇಮಂಡ್ ಪರವಾಗಿ ಸಮೂಹದ ನೂತನ ಉಪಕ್ರಮಗಳ ಮುಖ್ಯಸ್ಥ ಗಿರೀಶ್ ಅಡ್ವಾಣಿ, ಎಲ್ ಅಂಡ್ ಟಿ ಹಿರಿಯ ಉಪಾಧ್ಯಕ್ಷ ಅರುಣ್ ರಾಮಚಂದ್ರಾನಿ, ಸನೋಫಿ ಮುಖ್ಯಸ್ಥರಾದ ವಿರಳ್ ಷಾ ಮತ್ತು ರುಚಿರ್ ಷಾ ಭಾಗವಹಿಸಿದ್ದರು.

ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯೆಲ್ ಉಪಸ್ಥಿತರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರೀಡಂ ಹಬ್ಬವು ಬೃಹತ್ ಸಾಂಸ್ಕೃತಿಕ ಸಂಭ್ರಮಾಚರಣೆಯ ಮೂಲಕ ಬೆಂಗಳೂರಿನ 'ವಿವಿಧತೆಯಲ್ಲಿ ಏಕತೆ'ಯನ್ನು ಪ್ರದರ್ಶಿಸುತ್ತದೆಪ್ರತಿದಿನ 20 ರಿಂದ 25 ಕಿ.ಮೀ. ಪುಟ್ ಪಾತ್ ಒತ್ತುವರಿ ತೆರವು ಮಾಡಿ : ಆಯುಕ್ತ ಕೆ. ಎನ್. ರಮೇಶ್ಸಂತೋಷ್‌ ಲಾಡ್‌ ರವರು ಕೈಗೊಂಡಿರುವ ಧಾರವಾಡ ಜಿಲ್ಲಾ ಪ್ರವಾಸಹೂಗುಚ್ಛ, ಶಾಲು, ಪೇಟಗಳಿಗೆ ಬ್ರೇಕ್, ಸರಳತೆಯ ಹಾದಿ ಹಿಡಿದ ಸಚಿವ ವಿಜಯಾನಂದ ಕಾಶಪ್ಪನವರ್ಕೈತಪ್ಪಿದ ಸಚಿವ ಸ್ಥಾನ, ಬೆಂಬಲಿಗರಿಂದ ಪ್ರತಿಭಟನೆ,ಮನವಲಿಸುವೆ ಎಂದ್ರು ಹರಿಪ್ರಸಾದ್ಹೂಡಿಕೆ ಆಕರ್ಷಣೆಗೆ ಮುಂಬೈನಲ್ಲಿ 2 ದಿನಗಳ ರೋಡ್ ಶೋಮಹಿಳೆಯರಿಗೆ ಶೂನ್ಯ ಸ್ಥಾನ, ಭ್ರಷ್ಟರಿಗೆ ಸಚಿವ ಸ್ಥಾನ – ಇದೇ ಕಾಂಗ್ರೆಸ್‌ನ ನಿಜವಾದ ಮುಖ" – ಉಷಾ ಮೋಹನ್ಕ್ರಿಶ್ಚಿಯನ್ ನಿಗಮದ ಅಧ್ಯಕ್ಷ ಉಪಾಧ್ಯಕ್ಷ ಎಂಡಿ ಮಜಾಗೊಳಿಸಲು ಆಗ್ರಹ ನೂತನ ಮಂತ್ರಿ ಕಾಶಪ್ಪನವರ್ ನೊಣವಿನಕೆರೆ ಮಟಕ್ಕೆ ಭೇಟಿಹ್ಯಾರಿಸ್ ಗೆ ಕೈ ತಪ್ಪಿದ ಸಚಿವ ಸ್ಥಾನ, ಕ್ಷೇತ್ರದ ಕಾರ್ಯಕರ್ತರ ಉರಿ ಉರಿ..!