LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 34 ಕೋಟಿ ವ್ಯವಹಾರ ವಹಿವಾಟು:ಪವನ್ ಕುಮಾರ್

ಶಿರಾ,ದೊಡ್ಡಹುಲಿಕುಂಟೆ:  ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 34 ಕೋಟಿ ವ್ಯವಹಾರವಿದ್ದು, ಇದರಲ್ಲಿ 9 ಕೊಟಿ ಸಾಲ ನಮ್ಮ ಬ್ಯಾಂಕ್ ಒಂದರಲ್ಲಿ ಸುಸ್ಥಿತಿಯಾಗಿದೆ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಪವನ್ ಕುಮಾರ್ ತಿಳಿಸಿದರು.

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ದೊಡ್ಡ ಹುಲಿಕುಂಟೆ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ 40ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಿಹಿ ಹಂಚಿ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿ,ಮಾತನಾಡಿ, ನಮ್ಮ ಬ್ಯಾಂಕಿನ ವ್ಯವಹಾರದಲ್ಲಿ 34 ಕೋಟಿ ವ್ಯವಹಾರವಿದ್ದು ಇದರಲ್ಲಿ ಒಂಬತ್ತು ಕೊಟ್ಟಿರುವ ಸಾಲ ನಮ್ಮ ಬ್ಯಾಂಕ್ ಒಂದರಲ್ಲಿ ಸುಸ್ಥಿತಿಯಾಗಿದೆ ತಾವುಗಳು ಬ್ಯಾಂಕ್ ವ್ಯವಹಾರದಲ್ಲಿ ಹೇಗೆ ನಡೆದುಕೊಳ್ಳಬೇಕೆಂಬುದನ್ನು ಬ್ಯಾಂಕ್ ಗ್ರಾಹಕರು ತಿಳಿಯಬೇಕಿದೆ.

ಗ್ರಾಮೀಣ ಬ್ಯಾಂಕ್ ಇರುವುದೇ ರೈತರಿಗೆ ಅನುಕೂಲ ಮಾಡಿಕೊಡಲು, ತೆಗೆದುಕೊಂಡಿರುವ ಸಾಲವನ್ನು ಸರಿಯಾದ ಸಮಯಕ್ಕೆ ಹಣ ಪಾವತಿ ಮಾಡಿ ತೊಂದರೆಯಾಗದಂತೆ ನೋಡಿಕೊಳ್ಳಿ, ONE TIME Settelment ವ್ಯವಸ್ಥೆಯು ಜಾರಿಯಲ್ಲಿದೆ, ಬಡ್ಡಿ, ಹಾಗು ಅಸಲು ಎರಡನ್ನೂ ಒಟ್ಟಿಗೆ ಕಟ್ಟುವ ಮೂಲಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದರು.

ಗ್ರಾಮಾಂತರ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜನ ಸಾಮಾನ್ಯರಿಗೆ ಅರ್ಥವಾಗುವ ಹಾಗೆ ಬ್ಯಾಂಕ್ ನ ವ್ಯವಹಾರದ ಬಗ್ಗೆ , ಮಾಹಿತಿ ಬಗ್ಗೆ ಬೋರ್ಡ್ ಹಾಕಲಾಗುತ್ತದೆ, ಅದರಿಂದ ಮಾಹಿತಿ ತಿಳಿಯಬಹುದಾಗಿದೆ ಎಂದರು.

ಹುಲಿಕುಂಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿಕುಮಾರ್, ಪಿಡಿಓ ತಿಪ್ಪೇಸ್ವಾಮಿ, ಮಾಜಿ ಗ್ರಾಫಂ ಅಧ್ಯಕ್ಷ ವೈಕೆ ತಿಪ್ಪೇಸ್ವಾಮಿ, ಗ್ರಾಮದ ತಾಪಂ ಮಾಜಿ ಸದಸ್ಯ ಲಕ್ಕಪ್ಪ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ತಿಲಕ್ ಕುಮಾರ್, ಕ್ಯಾಶಿಯರ್ ವಸಂದರ, ಅಟೆಂಡರ್ ರಮೇಶ್, ಬ್ಯಾಂಕ್ ಸಿಬ್ಬಂದಿ ಟಿವಿ ಚಂದ್ರಶೇಖರ, ಭಾರತಿ, ಹನುಮಂತರಾಯಪ್ಪ. ಕೆನರ ಎಚ್ ಎಸ್ ಬಿಸಿ ಅಧಿಕಾರಿ ಯಶೋಧರ, ಸಂಜೀವಿನಿ ಸ್ತ್ರೀ ಶಕ್ತಿ ಒಕ್ಕೂಟದ ಯೋಗೇಶ್ವರಿ, ರಂಗಸ್ವಾಮಿ ಇದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ