LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕುಗಳು ಗ್ರಾಹಕರ ನಂಬಿಕೆ,ಸಹಕಾರ ತತ್ವ ಬೆಳೆಸಿಕೊಳ್ಳಬೇಕು:ಆರ್ ಅಶೋಕ್

ಬೆಂಗಳೂರು: ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು ಸಹಕಾರ ತತ್ವ ಪಾಲಿಸಿ ಮುಂದುವರಿದರೆ ಬ್ಯಾಂಕುಗಳು ದೀರ್ಘಕಾಲೆ ನಡೆಯಲು ಸಾಧ್ಯವಿದ್ದು ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಇದಕ್ಕೆ ನಿದರ್ಶನ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನ ಎಪಿಎಸ್ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕಿನ ವಜ್ರ ಮಹೋತ್ಸವ ಮಹೋತ್ಸವ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಸಾಕಷ್ಟು ಬ್ಯಾಂಕುಗಳು ಮುಚ್ಚಿದ ಉದಾಹರಣೆಗಳು ನಮ್ಮ ಮುಂದಿವೆ. ನಂಬಿಕೆ ವಿಶ್ವಾಸ ಇಲ್ಲದಿದ್ದಾಗ ವ್ಯವಹಾರದಲ್ಲಿ ಉಂಟಾಗುವ ಗೊಂದಲದಿಂದ ಇಂತದ್ದಾಗುತ್ತದೆ. ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರನ್ನು ನಂಬಿ ಜನ ವಹಿವಾಟಿಗೆ ಮುಂದಾಗುತ್ತಾರೆ. ಹೀಗಿರುವಾಗ ಅವರ ಜವಾಬ್ದಾರಿ ಹೆಚ್ಚಿರುತ್ತದೆ. ತ್ಯಾಗರಾಜ ಬ್ಯಾಂಕ್ ಸುದೀರ್ಘ ಸುದಿ ಹಾದಿ ಕ್ರಮಿಸಿದ್ದು, ಮುಂದಿನ ಮುಂದಿನ ದಿನಗಳಲ್ಲಿ ಮತ್ತಷ್ಟು ಜನತೆಗೆ ನೆರವಾಗಲಿ ಎಂದರು.

ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್‌ ಮಾತನಾಡಿ, ಸಹಕಾರಿ ಬ್ಯಾಂಕ್‌ಗಳು ಸರ್ಕಾರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಿದ್ದು, ದೇಶ ಕಟ್ಟುತ್ತಿವೆ. ಇಂದು ರಾಜ್ಯದಲ್ಲಿ ಸುಮಾರು 360 ಸಹಕಾರಿ ಬ್ಯಾಂಕ್‌ಗಳು 53,000 ಕೋಟಿ ವಹಿವಾಟು ನಡೆಸುತ್ತಿದ್ದು, ಸುಮಾರು 50 ಲಕ್ಷ ಜನರು ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಈ ಕ್ಷೇತ್ರದ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದರು.

ಶ್ರೀತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ 14 ಶಾಖೆ ಹೊಂದಿದ್ದು, ಇನ್ನು 3 ಶಾಖೆಗಳ ನಿರ್ಮಾಣ ಪ್ರಗತಿಯಲ್ಲಿವೆ. ಸಾವಿರಾರು ಜನರು ಠೇವಣಿದಾರರು ಇದ್ದಾರೆ. ಸಾವಿರಾರು ಜನರಿಗೆ ಸಾಲವನ್ನೂ ನೀಡಿದೆ ಎಂದರು.

ಬ್ಯಾಂಕ್ ಅಧ್ಯಕ್ಷ ಡಾ.ಎಂ.ಆರ್.ವೆಂಕಟೇಶ್ ಮಾತನಾಡಿ, ನಮ್ಮ ಬ್ಯಾಂಕ್ ಬೆಂಗಳೂರಿನ ಹಳೆಯ ಸಹಕಾರಿ ಸಂಸ್ಥೆಯಾಗಿದ್ದು, ವಾರ್ಷಿಕ 26000 ಕೋಟಿ ವಹಿವಾಟು ನಡೆಸುತ್ತದೆ. ಆರ್‌ಬಿಐ ಹಾಗೂ ಸರ್ಕಾರ ನಗರ, ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಸಮಸ್ಯೆಗೆ ಸಿಲುಕಿದರೆ, ಅವುಗಳ ಪುನಶ್ಚತನಕ್ಕೆ ಸರ್ಕಾರಗಳು, ಆರ್‌ಬಿಐ ಒಂದು ಪ್ರತ್ಯೇಕ ಸಂಸ್ಥೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. Rbi ನಿಂದ ಉತ್ತಮ ಬ್ಯಾಂಕ್ ಎಂದು ಹೆಸರು ಪಡೆದಿದೆ. ಅಲ್ಲದೆ ಸಹಕಾರಿ ಬ್ಯಾಂಕ್ ಗಳಲ್ಲಿಯೇ ತ್ಯಾಗರಾಜ ಕೋಆಪರೇಟಿವ್ ಬ್ಯಾಂಕ್ ಅತ್ಯುತ್ತಮವಾಗಿ ನಡೆದುಕೊಂಡು ಹೋಗುತ್ತಿದ್ದೆ ಎಂದರು. ಬ್ಯಾಂಕಿನ ಲಾಭವನ್ನು ಗ್ರಹಕರೆಲ್ಲರು ಪಡೆದುಕೊಳ್ಳುತ್ತಿದ್ದಾರೆ. ಗ್ರಾಹಕರಿಗೆ ಸಾಲಸೌಲಭ್ಯಗಳನ್ನು ನೀಡುವ ಕೆಲಸವನ್ನು ಮಾಡಲಾಗುತ್ತದೆ 60 ವರ್ಷಗಳ ಸಾರ್ಥಕ ಸೇವೆಯೇ ಎಸ್ಟು ಪ್ರಮಾಣದಲ್ಲಿ ಬ್ಯಾಂಕ್ ನಡೆದುಕೊಂಡು ಬರಲು ಸಹಕಾರಿಯಾಗಿದೆ ಎಂದರು.

ಸಹಕಾರ ಸಂಘಗಳ ಅಂಬ್ರೆಲಾ ಅರ್ಗನೈಸೇಷನ್ ಸಿಇಒ ಡಿ.ಕೃಷ್ಣ, ಅರ್ಬನ್ ಬ್ಯಾಂಕ್ ಫೆಡರೇಷನ್ ಸಿಇಒ ಪುಂಡಲೀಕ ಕೇರೂರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಎಂಡಿ ನವೀನ್, ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಮಂಡಳಿ ಸದಸ್ಯರು ಇದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ