ಬೆಂಗಳೂರು :ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ CLP ಸಭೆ ನಡೆಯಿತು. ಅಧಿವೇಶನದಲ್ಲಿ ಯಾವೆಲ್ಲಾ ಅಂಶಗಳನ್ನು ಚರ್ಚೆ ಮಾಡಬೇಕು ಎಂಬುದರ ಬಗ್ಗೆ ಸಭೆಯಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು ಎಂದು ತಿಳಿದುಕೊಂಡಿದೆ.
ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಸಾಕಷ್ಟು ಬಿಡಿಸಿನಲ್ಲಿ ಚರ್ಚೆಗಳು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ನಡೆಯುತ್ತಿವೆ ಆಡಳಿತ ರೋಡ ಸರ್ಕಾರವನ್ನು ಗೂಳಿಯಂತೆ ಗುಮ್ಮಲು ವಿರೋಧ ಪಕ್ಷದವರು ಕದಪ್ರಹಾರ ನಡೆಸುತ್ತಿದ್ದಾರೆ ಇವೆಲ್ಲದಕ್ಕೂ ತಕ್ಕ ಉತ್ತರವನ್ನು ಕಾಂಗ್ರೆಸ್ ಪಕ್ಷದ ಮಂತ್ರಿಮಂಡಲದವರು ಸಚಿವರು ಹೀಗೆಲ್ಲಾ ಉತ್ತರವನ್ನು ನೀಡಬೇಕು ಎಂಬುದರ ಬಗ್ಗೆ.
ಡಿಸಿಎಂ ಮತ್ತು KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಬೊಸರಾಜು ಅವರು, ದಿನೇಶ್ ಗುಂಡೂರಾವ್ ಮತ್ತು ಸತೀಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬರೂ ಅರ್ಥಪೂರ್ಣವಾಗಿ ಪಾಲ್ಗೊಳ್ಳುವಂತೆ, ವಿಷಯ ಮಂಡನೆ ಮಾಡುವಂತೆ ಕರೆ ನೀಡಿದರು.