*ಬೆಂಗಳೂರು ಕೇಂದ್ರ ನಗರ ಪಾಲಿಕೆ*
ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಾಚರಣೆ :- ರಾಜೇಂದ್ರ ಚೋಳನ್*
*ಒಟ್ಟು 8.75 ಕಿ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ*
*260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿ*
*48 ಲೋಡ್ ತ್ಯಾಜ್ಯ ಹಾಗೂ 27 ಬ್ಲ್ಯಾಕ್ ಸ್ಪಾಟ್ ಗಳ ತೆರವು*
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರ ನೈರ್ಮಲ್ಯಕ್ಕೆ ಆದ್ಯತೆ ನೀಡಿ, ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತಗ್ರಳ ವಿವಿಧ ಸ್ಥಳಗಳಲ್ಲಿ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು *ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್* ರವರು ತಿಳಿಸಿದರು.
ನಗರದ ಸ್ವಚ್ಛತೆ, ಸುವ್ಯವಸ್ಥೆ ಮತ್ತು ನಾಗರಿಕರಿಗೆ ಸುಗಮ ವಾತಾವರಣ ಒದಗಿಸುವ ನಿಟ್ಟಿನಲ್ಲಿ, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದೈನಂದಿನ ಸ್ವಚ್ಛತಾ ಕಾರ್ಯಗಳ ಜೊತೆಗೆ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
*ಇಂದು ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಂಡ ಸ್ಥಳಗಳ ವಿವರ:*
1) *ಚಾಮರಾಜಪೇಟೆ ಕ್ಷೇತ್ರ:*
6ನೇ ಅಡ್ಡ ರಸ್ತೆ, 4ನೇ ಮುಖ್ಯರಸ್ತೆ, ಚಾಮರಾಜಪೇಟೆ ಸುತ್ತಮುತ್ತಲ ಪ್ರದೇಶದಲ್ಲಿ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
2) *ಚಿಕ್ಕಪೇಟೆ ಕ್ಷೇತ್ರ:*
ವಾರ್ಡ್ ಸಂಖ್ಯೆ-153 ರ ಬಿ.ಹೆಚ್.ಇ.ಎಲ್ ಲೇಔಟ್ 1, 2 & 3ನೇ ಅಡ್ಡರಸ್ತೆ ಮತ್ತು ಸುತ್ತ ಮುತ್ತಲಿನ ಕೂಡು ಪ್ರದೇಶಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ .
3) *ಗಾಂಧಿನಗರ ಕ್ಷೇತ್ರ:*
ಓಕಳಿಪುರಂ 2ನೇ ಮುಖ್ಯರಸ್ತೆ, ಓಕಳಿಪುರಂ ಸ್ಮಶಾನ
ಅವಿನ್ಯೂ ರಸ್ತೆ, ಕಿಲಾರಿ ರಸ್ತೆಯಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ .
4) *ಶಾಂತಿನಗರ ಕ್ಷೇತ್ರ:*
ರೆಸಿಡೆನ್ಸಿ ರೋಡ್, (ರಿಚ್ ಮಂಡ್ ವೃತ್ತದಿಂದ ಬ್ರಿಗೇಡ್ ರಸ್ತೆ ವೃತ್ತದವರೆಗೆ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
5) *ಶಿವಾಜಿನಗರ ಕ್ಷೇತ್ರ:*
ಕ್ವೀನ್ಸ್ ರೋಡ್ ಮತ್ತು ಬಂಬುಬಜಾರ್ ರಸ್ತೆ ಸುತ್ತಲಿನ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
6) *ಸಿ.ವಿ. ರಾಮನ್ ನಗರ ಕ್ಷೇತ್ರ:*
ಎನ್ ಆರ್ ಕಾಲೋನಿ ಮೇನ್ ರೋಡ್ ಜೀವನ್ ಭೀಮಾನಗರ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಬೆಂಗಳೂರು ಕೇಂದ್ರ ನಗರ ಪಾಲಿಕೆಯ *ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ ರವರ ಮೇಲುಸ್ತುವಾರಿಯಲ್ಲಿ* ನಗರದ ಸ್ವಚ್ಛತೆ, ಸಂಚಾರ ಸುಗಮತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಇಂತಹ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸುತ್ತಿದ್ದು, ಇಂದು, *ಒಟ್ಟು 8.75 ಕಿ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದು 5 ಜೆಸಿಬಿ ಹಾಗೂ 41 ಟ್ರಾಕ್ಟರ್ ಗಳ ಸಹಾಯದಿಂದ ರಸ್ತೆ ಬದಿಯ 48 ಲೋಡ್ ತ್ಯಾಜ್ಯ ಹಾಗೂ 27 ಬ್ಲ್ಯಾಕ್ ಸ್ಪಾಟ್ ಗಳನ್ನು ತೆರವುಗೊಳಿಸಲಾಗಿದ್ದು, 260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು* ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸಾಮೂಹಿಕ ಸ್ವಚ್ಛತಾ ಪಾದಚಾರಿ ಒತ್ತುವರಿ ಕಾರ್ಯದಲ್ಲಿ ಆಯಾ ವಿಭಾಗಗಳ ಕಾರ್ಯಪಾಲಕ ಅಭಿಯಂತರರು, ಡಿಜಿಎಂ ಗಳು, ಎ.ಜಿ.ಎಂ.ಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಅರಣ್ಯ, ತೋಟಗಾರಿಕೆ, ಪೌರಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.