LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್

ಬೆಂಗಳೂರು: ಹಲಸೂರು ಕೆರೆಯ ಸಮಗ್ರ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ, ಕೆರೆಯ ಊಳನ್ನು ತೆಗೆಯುವುದರಿಂದ ನೀರಿನ ಸಂಗ್ರಹಣೆ ಸೇರಿದಂತೆ ಅಂತರ್ಜಲ ಸುಧಾರಿಸುತ್ತದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಪುರಾತನವಾಗಿರುವ ಹಲಸೂರು ಕೆರೆಯ ಹೂಳು ತೆಗೆಯುವ ಕಾರ್ಯ ಬರದಿಂದ ಸಾಗುತ್ತಿದ್ದು ನಗರದ ಜನರಿಗೆ ಕೆರೆಯಿಂದ ಸಾಕಷ್ಟು ಪ್ರಯೋಆಕರ್ಷಕಣೀಯಗೊಳಿಸಲಾನೆಟ್ಟು .ಕೆರೆಯಲ್ಲಿನ ಮಲಿನದಿಂದ ಕೂಡಿದ ಹೂಳು ತೆಯುವುದರಿಂದ ಹೊಸ ನೀರು ಸಂಗ್ರಹಣೆಯಾಗಿ ವಾಯುವಿಹಾರಿಗಳಿಗೆ ಆಕರ್ಷಣೀಯ ಸ್ಥಳವಾಗಿ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತದೆ ಎಂದರು.

*ಜೀವವೈವಿದ್ಯಗಳ ಸಂರಕ್ಷಣೆಗೆ ಕ್ರಮ*

ಬೆಂಗಳೂರು ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ *ಹಲಸೂರು ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಳು ಪ್ರಸ್ತುತ ಪ್ರಗತಿಯಲ್ಲಿದ್ದು, ಕೆರೆಯ ಪರಿಸರ ಹಾಗೂ ಸಾರ್ವಜನಿಕರಿಗೆ ಉತ್ತಮ ವಿನೋದಾತ್ಮಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್* ತಿಳಿಸಿದರು.

ಕೆರೆಯಲ್ಲಿನ ನೀರಿನ ಸಂಗ್ರಹದ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕೆರೆಯಲ್ಲಿ ಕಳೆದ 25 ವರ್ಷಗಳಿಂದ ಶೇಖರಣೆಯಾಗಿರುವ ಹೂಳೆತ್ತುವ (Desilting) ಕಾರ್ಯ ಕೈಗೊಳ್ಳಲಾಗಿದೆ. ಇದರಿಂದ ಕೆರೆಯ ಆಳವನ್ನು ಹೆಚ್ಚಿಸುವುದರ ಜೊತೆಗೆ ನೀರಿನ ಸಂಗ್ರಹ ಸಾಮರ್ಥ್ಯವೂ ಹೆಚ್ಚಳವಾಗುವುದರ ಜೊತೆಗೆ ಸುತ್ತಮುತ್ತ ಅಂತರ್ಜಲ ಮಟ್ಟ ವೃದ್ಧಿಯಾಗಲಿದೆ.

ಇದಲ್ಲದೆ, ಕೆರೆಯ ಸುತ್ತಮುತ್ತ ಬಂಡ್ ರಕ್ಷಣೆಯೊಂದಿಗೆ ಎರಡು ಹಂತದ ವಾಯುವಿಹಾರಿಗಳಿಗೆ ಸುಲಭ ನಡಿಗೆ ಮಾರ್ಗ (Two Level Walkway) ನಿರ್ಮಾಣ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಸುರಕ್ಷಿತವಾಗಿ ನಡೆದು ವಿಶ್ರಾಂತಿ ಪಡೆಯಲು, ಆರೋಗ್ಯ ವೃದ್ಧಿಗೆ ಅನುಕೂಲವಾಗಲಿದೆ.

ಕೆರೆಯ ಗಡಿ ಭಾಗದಲ್ಲಿ (ದಡದಲ್ಲಿ) ಸುರಕ್ಷಾ ಕ್ರಮವಾಗಿ ಅಲಂಕಾರಿಕ ಗ್ರಿಲ್‌ಗಳನ್ನು ಅಳವಡಿಸುವ ಕಾರ್ಯವೂ ನಡೆಯುತ್ತಿದ್ದು, ಇದು ನಾಗರಿಕರ ಸುರಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ ಕೆರೆಯ ಸೌಂದರ್ಯವನ್ನು ಮತ್ತಷ್ಟು ವೃದ್ಧಿಸಲಿದೆ.

ಇದೇ ಸಂದರ್ಭದಲ್ಲಿ, ಕೆರೆಯ ಪ್ರದೇಶವನ್ನು ಸಮೀಪದ ಉದ್ಯಾನವನದೊಂದಿಗೆ ಸಂಪರ್ಕಿಸುವ ಸಂಪರ್ಕ ಸೇತುವೆ (Connecting Bridge) ನಿರ್ಮಾಣ ಕಾರ್ಯವನ್ನೂ ಕೈಗೊಳ್ಳಲಾಗುತ್ತಿದೆ. ಜೊತೆಗೆ ಹೊಸ ಕಲ್ಯಾಣಿ ನಿರ್ಮಾಣ ಸೇರಿದಂತೆ ಇತರೆ ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಕೈಗೊಳ್ಳಲಾಗುತ್ತಿದೆ.

*ಕೆರೆಯಲ್ಲಿನ 3 ದ್ವೀಪಗಳ ಮರುನಿರ್ಮಾಣ*

ಹಲಸೂರು ಕೆರೆಯಲ್ಲಿ 3 ದ್ವೀಪಗಳಿದ್ದು, ಅಲ್ಲಲ್ಲಿ ಕುಸಿದು ದುಸ್ಥಿತಿಯಲ್ಲಿದ್ದು, ಇವುಗಳನ್ನು ಪುನರ್ ನಿರ್ಮಾಣ ಮಾಡಲಾಗುವುದು.

*NDRF ಸಿಬ್ಬಂದಿಗಳ ತರಬೇತಿಗೆ ಅನುಕೂಲ*

ಹಲಸೂರು ಕೆರೆಯಲ್ಲಿ ಹೂಳು ತೆಗೆಯುವುದರಿಂದ ಕೆರೆಯ ನೀರಿನ ಆಳ ಹೆಚ್ಚಾಗುವುದರಿಂದ
ಕೆರೆಯ ಒಂದು ಭಾಗದಲ್ಲಿ (ಸೈನ್ಯ ಸಿಬ್ಬಂದಿಗಳ ತರಬೇತಿ) *NDRF ಸಿಬ್ಬಂದಿಗಳು ಕೈಗೊಳ್ಳುವ ತರಬೇತಿಗೆ ಅನುಕೂಲ* ಆಗಲಿದೆ.ನಾಗರಿಕರ, ವಾಯುವಿಹಾರಿಗಳ ವಿಶ್ರಾಂತಿಗಾಗಿ ಆಸನಗಳ ವ್ಯವಸ್ಥೆ ಮಾಡಲಾಗುವುದು.

ಕೆರೆ ಬದಿಯಲ್ಲಿನ ಉದ್ಯಾನವನ ಅಭಿವೃದ್ಧಿ ಕೈಗೊಂಡು ವಿವಿಧ ಬಗೆಯ ಸಸಿಗಳನ್ನು ನೆಟ್ಟು ಆಕರ್ಷಕಣೀಯಗೊಳಿಸಲಾಗುವುದು.

ಈ ಎಲ್ಲಾ ಅಭಿವೃದ್ಧಿ ಕಾರ್ಯಗಳ ಮೂಲಕ ಹಲಸೂರು ಕೆರೆಯ ಪರಿಸರ ಸಮತೋಲನವನ್ನು ಕಾಪಾಡುವುದರ ಜೊತೆಗೆ ನಾಗರಿಕರಿಗೆ ಉತ್ತಮ ವಿಶ್ರಾಂತಿ ಹಾಗೂ ಮನರಂಜನಾ ವಾತಾವರಣವನ್ನು ಒದಗಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ