LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ (ಸುವರ್ಣಸೌಧ): ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ವಿತ್ತೀಯ ಕಾರ್ಯಕಲಾಪ ವೇಳೆ ಪೂರಕ ಅಂದಾಜು ಪಟ್ಟಿಗೆ ಅನುಮೋದನೆಗಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸದನದಲ್ಲಿ ಮಂಡಿಸಿದರು.

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ಪ್ರವಾಹದಿಂದಾಗಿ ಉಂಟಾದ ರೈತರ ಬೆಳೆಹಾನಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‍ಗೆ 8,500 ರೂ. ಪರಿಹಾರವನ್ನು ನಾವು ನೀಡಿದ್ದೇವೆ. ಈ ಹೆಚ್ಚುವರಿ ವೆಚ್ಚ ಭರಿಸಲು 1015.66 ಕೋಟಿ ರೂ. ಗಳನ್ನು ಪೂರಕ ಅಂದಾಜಿನಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಇತ್ತೀಚೆಗೆ ಗುಡ್ಡ ಮತ್ತು ಮಣ್ಣು ಕುಸಿತ ಆಗುತ್ತಿದೆ. ಇದನ್ನು ತಡೆಗಟ್ಟಲು ರಾಜ್ಯ ವಿಪತ್ತು ಉಪಶಮನ ನಿಧಿಗಾಗಿ 372 ಕೋಟಿ ರೂ. ಗಳನ್ನು ಒದಗಿಸಲಾಗುತ್ತಿದೆ. ಕಬ್ಬು ಬೆಳೆಗಾರರ ಹಿತ ಕಾಯಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತಿ ಟನ್‍ಗೆ 50 ರೂ. ಗಳನ್ನು ನೀಡುತ್ತಿದ್ದು ಇದಕ್ಕಾಗಿ 300 ಕೋಟಿ ರೂ., ಅಮೃತ್ ಯೋಜನೆಗಾಗಿ 140 ಕೋಟಿ ರೂ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಹಿಂದುಳಿದ ವರ್ಗಗಳ ಜನರಿಗೆ ಹಲವು ಯೋಜನೆಗಳಡಿ ಸಹಾಯಧನ ಒದಗಿಸಲು 150 ಕೋಟಿ ರೂ., ಪ.ಜಾತಿ, ಪ.ಪಂಗಡದ ವಸತಿ ಶಾಲೆಗಳಿಗೆ ಹಾಗೂ ವಿವಿಧ ವಸತಿ ಶಾಲೆಗಳ ನಿರ್ವಹಣೆಗಾಗಿ 200 ಕೋಟಿ ರೂ. ಸೇರಿದಂತೆ ಪೂರಕ ಅಂದಾಜು ಪಟ್ಟಿಯಲ್ಲಿ ಅನುದಾನಕ್ಕೆ ಅವಕಾಶ ಮಾಡಿಕೊಳ್ಳಲಾಗಿದೆ.

ಈ ಅನುದಾನವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ, ಸಾಲ, ತೆರಿಗೆ ಸಂಗ್ರಹ ಮುಂತಾದ ಮೂಲಗಳಿಂದ ಸಂಗ್ರಹಿಸುವ ಉದ್ದೇಶ ಹೊಂದಲಾಗಿದೆ. ಈ ಪೂರಕ ಅಂದಾಜು ವೆಚ್ಚದ ಮೊತ್ತವು ಈ ವರ್ಷದ ಆಯವ್ಯಯದ ಶೇ. 1.45 ರಷ್ಟಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಸದನದ ಸದಸ್ಯರುಗಳ ಚರ್ಚೆಯ ಬಳಿಕ 2025-26 ನೇ ಸಾಲಿನ ಪೂರಕ ಅಂದಾಜುಗಳ ಕಂತಿನ ಬೇಡಿಕೆಗಳ ಪಟ್ಟಿಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ