LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುದ್ಧ ಸದೃಶ ಪರಿಸ್ಥಿತಿಯಲ್ಲಿ ಯುವಕರಿಂದ ವಿಜಯದ ಸಂಕಲ್ಪ

ಬೆಂಗಳೂರು : ಇಡೀ ವಿಶ್ವವು ಯುದ್ಧದ ಅಂಚಿನಲ್ಲಿ ಬಂದು ನಿಂತಿದೆ. ಇತಿಹಾಸವನ್ನು ಗಮನಿಸಿದರೆ, ಯಾವ ಯುದ್ಧಗಳಲ್ಲಿ ಹನುಮಂತನು ನೆಲೆಸಿದ್ದಾನೋ, ಅಲ್ಲಿ ವಿಜಯವು ನಿಶ್ಚಿತವಾಗಿದೆ ಎಂದು ತಿಳಿಯುತ್ತದೆ. ಪ್ರಭು ಶ್ರೀರಾಮನ ಸೇನೆಯಲ್ಲಿದ್ದು ರಾವಣನ ಲಂಕೆಯನ್ನು ದಹಿಸಿದ ಹನುಮಂತನಿರಲಿ ಅಥವಾ ಮಹಾಭಾರತದಲ್ಲಿ ಅರ್ಜುನನ ರಥದ ಧ್ವಜದ ಮೇಲೆ ವಿರಾಜಮಾನನಾಗಿ ಅಧರ್ಮದ ವಿರುದ್ಧ ಪಾಂಡವರಿಗೆ ಬಲ ನೀಡಿದ ಹನುಮಂತನಿರಲಿ; ಪ್ರತಿ ಸ್ಥಳದಲ್ಲೂ ವಿಜಯವು ಖಚಿತವಾಗಿದೆ. ಅಷ್ಟೇ ಅಲ್ಲದೆ, ಛತ್ರಪತಿ ಶಿವಾಜಿ ಮಹಾರಾಜರ ‘ ಹಿಂದವಿ ಸ್ವರಾಜ್ಯ’ದ ಸ್ಥಾಪನೆಗಾಗಿ ಸಮರ್ಥ ರಾಮದಾಸ ಸ್ವಾಮಿಗಳು ಗ್ರಾಮ ಗ್ರಾಮಗಳಲ್ಲಿ ಮಾರುತಿ ಮಂದಿರಗಳನ್ನು ಸ್ಥಾಪಿಸಿ ಪ್ರಾರಂಭಿಸಿದ ಬಲೋಪಾಸನೆಯಿಂದಾಗಿ, ಸ್ವರಾಜ್ಯಕ್ಕೆ ಆಧ್ಯಾತ್ಮಿಕ ಹಾಗೂ ಸಾಮರ್ಥ್ಯದ ಬಲ ದೊರೆಯಿತು. ಇಂದು ಮತ್ತೆ ದೇಶ ಮತ್ತು ಧರ್ಮವು ಸಂಕಷ್ಟದಲ್ಲಿದೆ ಹಾಗೂ ಎಲ್ಲೆಡೆ ಭಯದ ವಾತಾವರಣ ನಿರ್ಮಾಣವಾಗುತ್ತಿದೆ.

ಹಿಂದೂ ಜನಜಾಗೃತಿ ಸಮಿತಿಯಿಂದ ಹನುಮಂತನ ಮಂದಿರದಲ್ಲಿ ವಿಶೇಷ ಪೂಜಾ ಕನ್ಕಾರಿಗಳನ್ನು ಮಾಡಿ ಶಾಂತಿ ಸಂದೇಶವನ್ನು ಸಾರಿದರು,ಇಂತಹ ಸಮಯದಲ್ಲಿ ಪ್ರತಿಯೊಬ್ಬ ಹಿಂದೂವಿನಲ್ಲಿ ಮಾರುತಿಯಂತಹ ಶೌರ್ಯ, ಶಕ್ತಿ ಮತ್ತು ಭಕ್ತಿಯ ಜಾಗೃತಿಯಾಗಲಿ ಹಾಗೂ ಮುಂಬರುವ ಕಠಿಣ ಸಮಯದಲ್ಲಿ ಅವರ ಆಶೀರ್ವಾದದಿಂದ ಹಿಂದೂಗಳ ವಿಜಯವು ಖಚಿತವಾಗಲಿ ಎನ್ನುವ ಸಂಕಲ್ಪದೊಂದಿಗೆ, ಶ್ರೀ ಹನುಮ ಜಯಂತಿಯ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದೇಶಾದ್ಯಂತ 850 ಸ್ಥಳಗಳಲ್ಲಿ ಹಾಗೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಾಮೂಹಿಕ ‘ಗದಾಪೂಜೆ’ ನಡೆಸಲಾಯಿತು.

‘ಗದಾಪೂಜೆ’ ವಿಧಿ, ಶ್ರೀಹನುಮಂತನ ಆರತಿ, ಮಾರುತಿ ಸ್ತೋತ್ರ ಪಠಣ, ಶಂಖನಾದ ಮತ್ತು ಸಾಮೂಹಿಕ ಪ್ರಾರ್ಥನೆಯ ನಂತರ ‘ಶ್ರೀ ಹನುಮತೇ ನಮಃ’ ಎಂಬ ಸಾಮೂಹಿಕ ನಾಮಜಪವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ‘ರಾಮರಾಜ್ಯದ ಸ್ಥಾಪನೆಗಾಗಿ ಮಾರುತಿಯ ಗುಣಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು’ ಎಂಬ ವಿಷಯದ ಕುರಿತು ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ‘ರಾಮರಾಜ್ಯದ ಸ್ಥಾಪನೆಗಾಗಿ ಸಾಮೂಹಿಕ ಪ್ರತಿಜ್ಞೆ’ ಸ್ವೀಕರಿಸಲಾಯಿತು. ಹಿಂದೂ ಜನಜಾಗೃತಿ ಸಮಿತಿಯು ಕಳೆದ 4 ವರ್ಷಗಳಿಂದ ದೇಶಾದ್ಯಂತ ಸಾಮೂಹಿಕ ‘ಗದಾಪೂಜೆ’ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದ್ದು, ಈ ವರ್ಷವೂ ಹಿಂದುತ್ವನಿಷ್ಠರು ಮತ್ತು ಶ್ರದ್ಧಾಳುಗಳ ಉತ್ಸಾಹಭರಿತ ಸಹಭಾಗಿತ್ವ ಕಂಡುಬಂದಿತು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ