LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

APS ಕಾಲೇಜಿನಲ್ಲಿ ಅದ್ದೂರಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಆಚಾರ್ಯ ಪಾಠ ಶಾಲೆಯ ಶಿಕ್ಷಣ ಸಂಸ್ಥೆಯ ವತಿಯಿಂದ ಅದ್ದೂರಿಯಾಗಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಆಟದ ಮೈದಾನದಲ್ಲಿ ನೆರವೇರಿಸಲಾಯಿತು.

ಇನ್ನು ಎಪಿಎಸ್ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳಿಂದ ತರಹೇವಾರಿ ನೃತ್ಯ ಪ್ರದರ್ಶನವನ್ನು ಸಹ ಏರ್ಪಾಡು ಮಾಡಲಾಯಿತು, ಮಕ್ಕಳು ನೃತ್ಯ ಮಾಡುವ ಮೂಲಕ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಣೆ ಮಾಡಿದರು.

ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಬಿಬಿಎಂಪಿ ಮಾಜಿ ಮೇಯರ್ ಆಗಿರುವ ಕಟ್ಟೆ ಸತ್ಯನಾರಾಯಣ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ನಾನು ಇದೇ ಶಾಲೆಯಲ್ಲಿ 1970ರ ಹಿಂದೆ ವಿದ್ಯಾಭ್ಯಾಸ ಮಾಡಿ ಶಿಕ್ಷಣವನ್ನು ಕಲಿತಿದ್ದೇನೆ, ನನಗೆ ಶಿಕ್ಷಣ ಕಲಿಸಿದ ಮಹಾನ್ ಸಂಸ್ಥೆಯಾಗಿದೆ, ಅಲ್ಲವೇ ಸಾವಿರಾರು ಜನರಿಗೆ ಇವತ್ತಿನ ಕಾಲದಲ್ಲಿ ಶಿಕ್ಷಣವನ್ನು ನೀಡುತ್ತಿರುವ ವಿದ್ಯಾ ಕೇಂದ್ರವಾಗಿದೆ. ಇಂತಹ ಶಾಲೆಗಳನ್ನು ಯಾರು ಸಹ ಮರೆಯಬಾರದು, ಅದೇ ರೀತಿ ಸಂಸ್ಥೆಯಲ್ಲಿ ಓದಿರುವ ಅದೆಷ್ಟೋ ಜನ ಸರ್ಕಾರದ ಅತ್ಯುನ್ನತ ಹುದ್ದೆಯಲ್ಲಿದ್ದಾರೆ ಎಂದು ಶಾಲೆಯ ಹಳೆ ನೆನಪುಗಳನ್ನು ಮೆಲುಕ ಹಾಕಿದರು.

ಇನ್ನು ಎಪಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದಂತಹ ಡಾ. ವಿಷ್ಣುಭರತ ಆಲಂಪಲ್ಲಿ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಎರಡು ವಿಶೇಷವಾದಂತಹ ರಾಷ್ಟ್ರೀಯ ಹಬ್ಬಗಳನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ ಒಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಹಬ್ಬವನ್ನು ಶಿಕ್ಷಕರು ಸೇರಿದಂತೆ ಮಕ್ಕಳು ಅದ್ದೂರಿ, ವೈಭವಪೇರಿತವಾಗಿ ಆಚರಣೆ ಮಾಡಲಾಗುತ್ತದೆ. ನಮ್ಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ನೀಡಲಾಗುವುದು, ಅದರ ಜೊತೆಗೆ ಕಾಲೇಜಿನ ಬೋಧಕ ವರ್ಗ ಶ್ರಮವಹಿಸಿ ಮಕ್ಕಳಿಗೆ ಪಾಠ ಪ್ರವಚನಗಳನ್ನು ನೀಡುತ್ತಿದ್ದಾರೆ, ಹೀಗಾಗಿ ಎಪಿಎಸ್ ಶಿಕ್ಷಣ ಸಂಸ್ಥೆ ರಾಜ್ಯದಲ್ಲಿ ಸಾಕಷ್ಟು ಹೆಸರು ಮಾಡಿರುವುದು ಗೊತ್ತಾಗುತ್ತದೆ.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಚಾರ್ಯ ಪಾಠಶಾಲೆ ಎಜುಕೇಶನಲ್ ಟ್ರಸ್ಟ್ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ 90 ವರ್ಷಗಳ ಅಮೋಘ ಮತ್ತು ಸಾರ್ಥಕ ಸೇವೆ ಪೂರ್ಣಗೊಳಿಸಿದೆ. ಇದೇ ವೇಳೆ ಎಪಿಎಸ್ ಮೈದಾನದಲ್ಲಿ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ, ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷ ಸಿಎ ಡಾ.ವಿಷ್ಣು ಭರತ್ ಆಲಂಪಲ್ಲಿ, ಪ್ರಧಾನ ಕಾರ್ಯದರ್ಶಿ ಪ್ರೊ.ಎ. ಪ್ರಕಾಶ್, ಟ್ರಸ್ಟಿ ಸಿಎ ಎಪಿ ಆಚಾರ್ಯ , ಅಭಿಮಾನಿ ಟ್ರಸ್ಟಿ ಎ ಆರ್ ಆಚಾರ್ಯ, ಪ್ರಾಂಶುಪಾಲರಾದ ನಾಗರಾಜ್ ಎಸ್ . ಉಪ ಪ್ರಾಂಶುಪಾಲರಾದ ಎಚ್. ಎಸ್ ರಂಜಿನಿ, ಎಪಿಎಸ್ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳು ಹಾಗೂ ಸಮೂಹ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ