LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಯಮಬಾಹಿರ ವಸೂಲಿ: ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಡಿಜಿಪಿಗೆ ಪತ್ರ

ಬೆಂಗಳೂರು: ಸಾಲ ವಸೂಲಾತಿ ನೆಪದಲ್ಲಿ ನಿರಂತರ ಕಿರುಕುಳ, ದೌರ್ಜನ್ಯ ಮತ್ತು ಮಾನಹಾನಿ ಮಾಡುವ ಮೂಲಕ ಮಾನವ ಹಕ್ಕುಗಳನ್ನು ಮತ್ತು ಆರ್‌ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮತ್ತು ವಸೂಲಿಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ರಾಜ್ಯದ ಡಿಜಿಪಿಗೆ ಪತ್ರ ಬರೆದಿದ್ದಾರೆ!

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರನ್ನ ಗುರಿಯಾಗಿಸಿಕೊಂಡು ಯಾವುದೇ ಷರತ್ತುಗಳನ್ನು ತಿಳಿಸದೆ ಸುಲಭವಾಗಿ ಸಾಲ ಪಡೆಯುವಂತೆ ಹಲವು ಆಮಿಷಗಳನ್ನು ನೀಡುವುದರಿಂದ ಜನರು ತಮ್ಮ ಅವಶ್ಯಕತೆಗಳಿಗಾಗಿ ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಮತ್ತು ಖಾಸಗಿ ಸಾಲಗಾರರಿಂದ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು ಮತ್ತು ಹಣಕಾಸು ಸಂಸ್ಥೆಗಳು ಆ‌ರ್ ಬಿಐ ಮಾರ್ಗಸೂಚಿಗಳನ್ನು ಪಾಲಿಸದೇ ಕಾನೂನಿನಡಿಯಲ್ಲಿ ಮರುಪಾವತಿ ಪಡೆದುಕೊಳ್ಳುವುದನ್ನು ಬಿಟ್ಟು ಸಾಲಪಡೆದವರ ಮನೆಗೆ ಸಾಲ ವಸೂಲಿ ನೆಪದಲ್ಲಿ ಗೂಂಡಾ, ರೌಡಿಗಳನ್ನು ನಿಯೋಜಿಸಿ ನಿರಂತರ ಕಿರುಕುಳ, ದೌರ್ಜನ್ಯ ಮಾನಹಾನಿ ಉಂಟು ಮಾಡುತ್ತಿರುವುದನ್ನ ಮತ್ತು ಸಾಲಗಾರರ ಆಸ್ತಿಯ ಜಪ್ತಿ ಮಾಡುವಂತೆ ನ್ಯಾಯಾಲಯದ ಯಾವುದೇ ಆದೇಶಗಳು ಇಲ್ಲದಿದ್ದರು ಸಾಲಗಾರರ ಮನೆಯ ಗೋಡೆಗಳ ಮೇಲೆ ಈ ಮನೆಯನ್ನು ಅಡಮಾಡಲಾಗಿದೆ ಎಂದು ಬರೆಯುತ್ತಿರುವುದು ಸರಿಯಾದ ಕ್ರಮವಲ್ಲ.

ತೆಗೆದುಕೊಂಡ ಸಾಲಕ್ಕೆ ಕಂತುಗಳು ಕಟ್ಟದಿದ್ದಲ್ಲಿ ಮನೆ ಹರಾಜು ಮಾಡಲಾಗುವುದು ಎಂದು ಗೋಡೆ ಬರಹ ಬರೆಯುತ್ತಿರುವುದನ್ನು ಮತ್ತು ಮಧ್ಯರಾತ್ರಿವರೆಗೂ ಸಾಲಗಾರರ ಮನೆಮುಂದೆ ಠಿಕ್ಕಾಣಿ ಹೂಡಿ ಮನಬಂದಂತೆ ವರ್ತಿಸುವುದನ್ನು ಸಹಿಸಿಕೊಳ್ಳದ ಮಧ್ಯಮ ಮತ್ತು ಕೆಳ ವರ್ಗದ ಕುಟುಂಬದವರು ಮಾನಕ್ಕೆ ಹೆದರಿ ಕಿರುಕುಳ ದೌರ್ಜನ್ಯದಿಂದ ಕೆಲವರು ಊರುತೊರೆದರೆ ಇನ್ನು ಕೆಲವರು ಬೆಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಇದು ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961ರನ್ನು ಮತ್ತು ಆರ್‌ಬಿಐ ಮಾರ್ಗಸೂಚಿಗಳನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಂಪೂರ್ಣವಾಗಿ ಉಲ್ಲಂಘಿಸಿರುತ್ತವೆ, ಆದ್ದರಿಂದ ನಿಯಮ ಮೀರಿ ವಸೂಲಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ, ದೌರ್ಜನ್ಯವೆಸಗುವ ಪ್ರಕರಣಗಳು ಕಂಡುಬಂದಲ್ಲಿ ಮತ್ತು ಸಾಲಗಾರರು ಅಂತಹ ಪ್ರಕರಣಗಳ ಬಗ್ಗೆ ಠಾಣೆಗೆ ದೂರು ನೀಡಲು ಬಂದಾಗ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ರಾಜ್ಯದ ಡಿಜಿಪಿಗೆ ಪತ್ರ ಬರೆದಿದ್ದಾರೆ!
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ