LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿಯ ಭ್ರಷ್ಟ ಆರೋಗ್ಯ ಅಧಿಕಾರಿಗಳನ್ನು  ಕೂಡಲೇ ಅಮಾನತ್ತು ಮಾಡಲು ಎಎಪಿ ಆಗ್ರಹ

ಬೆಂಗಳೂರು: ಬೆಂಗಳೂರು ನಗರದಲ್ಲಿನ ನೂರಾರು ಅಮಾಯಕ ವ್ಯಾಪಾರಸ್ಥರ ಬಳಿ ಅಕ್ರಮ ಹಣ ವಸೂಲು ಮಾಡಲು ಮುಂದಾಗಿರುವ ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಗಳನ್ನು ಈ ಕೂಡಲೇ ಅಮಾನತ್ತು ಮಾಡಬೇಕೆಂದು ಪಕ್ಷದ ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಇಂದಿಲ್ಲಿ ಆಗ್ರಹಿಸಿದರು.

ನಗರದ ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವ್ಯಾಪಾರಸ್ಥರ ಬಳಿ ಹಣ ವಸೂಲಿ ಮಾಡಲು ಪದೇ ಪದೇ ಧಮಕಿ ಹಾಕುತ್ತಿದ್ದ ಅಧಿಕಾರಿಗಳ ವಿರುದ್ಧ ನೂರಾರು ವ್ಯಾಪಾರಸ್ಥರುಗಳ ಸಮೇತ ಬಿಬಿಎಂಪಿಯ ವಲಯ ಆಯುಕ್ತೆ ಸ್ನೇಹಲ್ ರಾಯಮನೆ ರವರ ಬಳಿ ದೂರನ್ನು ನೀಡಿ ಲಕ್ಷಾಂತರ ರೂಪಾಯಿಗಳ ಹಣ ವಸೂಲಿಗೆ ಮುಂದಾಗಿದ್ದ ಅಧಿಕಾರಿಗಳ ವಿರುದ್ಧ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ಈ ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿದರು.

ಕಳೆದ ಅನೇಕ ದಿವಸಗಳಿಂದ ಆರೋಗ್ಯ ವಿಭಾಗದ ಕೆಲ ಭ್ರಷ್ಟ ಅಧಿಕಾರಿಗಳು ಈ ವ್ಯಾಪಾರಸ್ಥರ ಬಳಿ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದಾರೆ ಹಾಗೂ ಲಕ್ಷಾಂತರ ರೂಪಾಯಿಗಳನ್ನು ಈಗಾಗಲೇ ವಸೂಲಿಯನ್ನು ಸಹ ಮಾಡಿದ್ದಾರೆ. ಲಕ್ಷಾಂತರ ರೂಪಾಯಿ ಬಂಡವಾಳವನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿರುವ ಈ ವ್ಯಾಪಾರಿ ಸಮೂಹವು ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದ್ದರು ಸಹ ಭ್ರಷ್ಟ ಅಧಿಕಾರಿಗಳು ಇವರಿಗೆ ಯಾವುದೇ ನೆರವನ್ನು ನೀಡುವುದನ್ನು ಬಿಟ್ಟು ಅವರ ಬಳಿಯೇ ಹಸ್ತ ವಸೂಲಿಗೆ ಮುಂದಾಗಿರುವುದು ಬಿಬಿಎಂಪಿಯ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.

ಇಂತಹ ಭ್ರಷ್ಟ ಅಧಿಕಾರಿಗಳನ್ನು ಈ ಕೂಡಲೇ ಅಮಾನತ್ತು ಮಾಡುವ ಮೂಲಕ ವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಅನಿಲ್ ನಾಚಪ್ಪ ಆಗ್ರಹಿಸಿದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ವ್ಯಾಪಾರಸ್ಥರ ನಿಯೋಗದೊಂದಿಗೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡ ಶಿವಕುಮಾರ್ ಸಹ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ