ಬೆಂಗಳೂರು: ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೇಂಟ್ ಜೋಸೆಫ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪಿ. ಅಭಯಸೂರ್ಯ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿ ರಾಜ್ಯಕ್ಕೆ ಹೆಸರು ತಂದಿದ್ದಾರೆ.
ಹತ್ತು ಮೀಟರ್ ನ ಓಪನ್ ಏರ್ ಸೈಟ್ ರೈಫಲ್ ಇವೆಂಟ್ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.
ಪುರುಷರ ವಿಭಾಗ, ಪುರುಷರ ಜೂನಿಯರ್ ವಿಭಾಗ, ಯುವ ಮತ್ತು ಪುರುಷರ ಉಪ ಯುವ ವಿಭಾಗದಲ್ಲಿ ಅಭಯ್ ಚಿನ್ನದ ಪದಕ ಗಳಿಸಿದ್ದಾರೆ.
ಪದಕ ವಿಜೇತ ಅಭಯ್ ಸೂರ್ಯ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ಅಭಯ್ ಸೂರ್ಯ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತು ಮೀರಾ ದಂಪತಿಯ ಪುತ್ರ.