LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ಕೃಷಿ ವಿವಿ ಸುಸ್ಥಿರ ಕೃಷಿ, ಗ್ರಾಮೀಣ ಅಭಿವೃದ್ಧಿ, ನವೀಕರಿಸಬಹುದಾದ ಇಂಧನದ ಮೂಲಗಳ ಉತ್ತೇಜಿಸಲು ಒಡಂಬಡಿಕೆ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಹಾಗೂ ಹೋಂಡಾ ಟ್ರೇಡಿಂಗ್ ಕಾರ್ಪೊರೇಷನ್ ಇಂಡಿಯಾ ಪ್ರೈ. ಲಿಮಿಟೆಡ್, ಸಹಯೋಗದೊಂದಿಗೆ ಇಂದು ಜೈವಿಕ ಇಂಧನ ಅಭಿವೃದ್ಧಿ ಹಾಗೂ ಕೃಷಿ ಬಯೋಮಾಸ್ ಬಳಕೆಯ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು.

ಈ ಒಡಂಬಡಿಕೆಯು ಸೂರ್ಯಕಾಂತಿ ಹೈಬಿಡ್ ಬೀಜಗಳ ಉತ್ಪಾದನೆ, ಕೃಷಿ ಸಮುದಾಯಗಳನ್ನು ಒಳಗೊಂಡ ಜೈವಿಕ ಇಂಧನ ಪೂರೈಕೆ ಸರಪಳಿ ಅಭಿವೃದ್ಧಿ, ಮಣ್ಣಿನ ಸಾವಯವ ಇಂಗಾಲವನ್ನು ಹೆಚ್ಚಿಸಲು ಬಯೋಚಾರ್ ಉತ್ಪಾದನೆಗೆ ಕೃಷಿ ಬಯೋಮಾಸ್ಸ್ ತ್ಯಾಜ್ಯವನ್ನು ಬಳಸುವುದು ಮತ್ತು ಕೃಷಿ ಉಪಕರಣಗಳ ಪೂರೈಕೆಯ ಉಪಕ್ರಮಗಳನ್ನು ಒಳಗೊಂಡಿದೆ.

ಈ ಒಡಂಬಡಿಕೆಯು ಸುಸ್ಥಿರ ಕೃಷಿ, ಗ್ರಾಮೀಣ ಅಭಿವೃದ್ಧಿ ಮತ್ತು ನವೀಕರಿಸಬಹುದಾದ ಇಂಧನದ ಮೂಲಗಳನ್ನು ಉತ್ತೇಜಿಸಲು ಸಾರ್ವಜನಿಕ – ಖಾಸಗಿ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ: ಎಸ್.ವಿ.ಸುರೇಶ ಅವರಿಗೆ ಹೋಂಡಾಟ್ರೇಡಿಂಗ್ ಕಾರ್ಪೊರೇಷನ್ ಇಂಡಿಯಾ ಪ್ರೈ. ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರು ಕೋಜಿ ಸೈತೋಹ್, ತೋಷಿಮಿಟ್ಸು ಸುಡಾ, ಕೆಂಟಾ ಮಿಜುಟಾನಿ, ಶ್ರೀಮತಿ ಅಂಜನಾ ಮುಖಿಜಾ ಮತ್ತು ಆಶ್ವಿನಿ ಅವರು ಒಡಂಬಡಿಕೆ ಪತ್ರವನ್ನು ಹಸ್ತಾಂತರಿಸಿದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ