LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಬಳ್ಳಾಪುರದಲ್ಲಿ “ಅಹಿಂದ ಬೃಹತ್ ಸಮಾವೇಶ” – ರಕ್ಷಾ ರಾಮಯ್ಯ ಅವರಿಗೆ ಅಖಂಡ ಬೆಂಬಲ

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರಿಗೆ ಅಹಿಂದ ಮತ್ತು ಒಕ್ಕಲಿಗ ಸಮುದಾಯದ ಅಖಂಡ ಬೆಂಬಲ ದೊರೆತಿದೆ.

ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲೇಬೇಕು ಎಂಬ ಸಂಕಲ್ಪದೊಂದಿಗೆ ನಗರದಲ್ಲಿ “ಅಹಿಂದ ಒ ಬೃಹತ್ ಸಮಾವೇಶ” ನಡೆಯಿತು.

ಚಿಕ್ಕಬಳ್ಳಾಪುರದ ಶಾಸಕರಾದ ಪ್ರದೀಪ್ ಈಶ್ವರ್ ನೇತೃತ್ವದಲ್ಲಿ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರ ಮುಂದಾಳತ್ವದಲ್ಲಿ, ವಿಧಾನಪರಿಷತ್ ಸದಸ್ಯರಾದ ಡಾ.ಎಂ.ಆರ್ ಸೀತಾರಾಮ್, ನಾಗರಾಜ್ ಯಾದವ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಮಾಜಿ ಶಾಸಕರಾದ ಕೆ.ಪಿ. ಬಚ್ಚೇಗೌಡ,ಅವರ ಸಮ್ಮುಖದಲ್ಲಿ ಸಮಾವೇಶ ಯಶಸ್ವಿಯಾಗಿ ನಡೆಯಿತು.

ಜೆಡಿಎಸ್, ಬಿಜೆಪಿ ತೊರೆದು ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಯುವಕರಿಂದ ಹಿಡಿದು ಹಿರಿಯರವೆರೆಗೆ ಎಲ್ಲಾ ಹಂತದ ನಾಯಕರು ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಿದರು.

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ತಮಗೆ ಅಸಮಾಧಾನವಾಗಿದ್ದು, ತಳಮಟ್ಟದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮೈತ್ರಿಮಾಡಿಕೊಳ್ಳಲಾಗಿದೆ. ನಾವು ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಯುವ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಮಾತನಾಡಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ರಕ್ತ ರಹಿತ ಕ್ರಾಂತಿ ಮಾಡಿದ್ದು ಕಾಂಗ್ರೆಸ್ ಮುಖ್ಯಮಂತ್ರಿ ದೇವರಾಜ ಅರಸು. ಅವರು ನಮ್ಮ ನಿಜವಾದ ಹಿಂದುಳಿದ ವರ್ಗಗಳ ಹರಿಕಾರರು. ಹಿಂದುಳಿದ ವರ್ಗದವರಿಗೆ ರಾಜಕೀಯ ಸ್ವಾತಂತ್ರ್ಯ ದೊರಕಿಸಿಕೊಟ್ಟಿದ್ದು ದೇವರಾಜ ಅರಸರು ಎಂದು ಸ್ಮರಿಸಿಕೊಂಡರು.

ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಕೊಡುಗೆ ಅನನ್ಯ. ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಆರ್ಥಿಕ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ದೇಶದಲ್ಲಿ ಅವರು ನೀಡಿದ 20 ಅಂಶಗಳ ಕಾರ್ಯಕ್ರಮ ಅನನ್ಯವಾದದ್ದು. ಇದರಡಿ ಮಹಿಳೆಯರ ಶ್ರೇಯೋಭಿವೃದ್ಧಿಗೆ ಒತ್ತು ನೀಡಲಾಗಿತ್ತು. ವೃದ್ಧಾಪ್ಯ ವೇತನ, ಪಡಿತರ ವಿತರಣೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಉಳುವವನೇ ಭೂಮಿಯ ಒಡೆಯ ಕಾರ್ಯಕ್ರಮ ಜಾರಿಗೆ ತಂದಿದ್ದು ನಮ್ಮ ಹೆಮ್ಮೆ ಎಂದು ಹೇಳಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ