LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. 4ರಂದು ಅಖಿಲ ಕರ್ನಾಟಕ ಮಹಿಳಾ ನೌಕರರ ಸಂಘ ಮಹಿಳಾ ನೌಕರರ ಸಮ್ಮೇಳನ

ಬೆಂಗಳೂರು: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ(ರಿ)ವತಿಯಿಂದ ಡಿಸೆಂಬರ್ 4ರಂದು ಮಹಿಳಾ ಸಮ್ಮೇಳನ ಮತ್ತು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿರುವ ರಾಜ್ಯದ ಸರ್ಕಾರ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಂಪುಟ ಸಚಿವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷ ರೋಷಣಿ ಗೌಡ ಅವರು ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಳೆಯರು ಅಬಲೆಯಲ್ಲ, ಸಬಲೆಯಾಗಿದ್ದಾಳೆ. ಇಂದು ಸಮಾಜದಲ್ಲಿ ಪುರುಷರಷ್ಟೆ ಸರಿಸಮಾನವಾಗಿ ಕಾರ್ಯ ನಿರ್ವಹಿಸಿ ದಿಟ್ಟ ಮಹಿಳೆ ಎಂದು ರೂಪಿಸಿದ್ದಾಳೆ ಅದರು ಸರ್ಕಾರದಲ್ಲಿ ಮಹಿಳಾ ನೌಕರರು ಹಲವಾರು ಮಹಿಳೆಯರು ಸಂಕಷ್ಟ ಎದುರಿಸಿದ್ದಾರೆ ಸಮಸ್ಯೆಗಳ ನಿವಾರಣೆ ಮತ್ತು ಮಹಿಳಾ ನೌಕರರ ಪರ ಗಟ್ಟಿಯಾಗಿ ನಿಲ್ಲಲು ನಮ್ಮ ಸಂಘದ ಉದ್ದೇಶವಾಗಿದೆ.

ಮಹಿಳಾ ನೌಕರರಿಗೆ ಋತುಚಕ್ರ ರಜೆ ಮಂಜೂರು ಮಾಡುವಲ್ಲಿ ನಮ್ಮ ಸಂಘವು ಪ್ರಮುಖ ಪಾತ್ರವಹಿಸಿದೆ.

ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಣೆ ಮಾಡುವಲ್ಲಿ ನಮ್ಮ ಸಂಘದ ಹೋರಾಟದಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಳರ್ ಮತ್ತು ಸಂಪುಟ ಸಭೆಯಲ್ಲಿ ಅನುಮೋದನೆಯಾಗಿ ಅದೇಶ ಬರುವಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಉತ್ತಮ ಸಹಕಾರ ನೀಡಿದರು.

ಋತುಚಕ್ರ ರಜೆ ಘೋಷಣೆ ಮಾಡಿರುವ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೆ ಹಾಗೂ ಸಂಪುಟದ ಎಲ್ಲ ಸಚಿವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಡಿಸೆಂಬರ್ 4ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಗ್ಗೆ 10ಗಂಟೆಗೆ ಆಯೋಜಿಸಲಾಗಿದೆ. ರಾಜ್ಯಾದ್ಯಂತ ಇರುವ ಸರ್ಕಾರಿ ಸಾವಿರಾರು ಮಹಿಳಾ ನೌಕರರು ಭಾಗವಹಿಸಿಲಿದ್ದಾರೆ.

ದೇಶದಲ್ಲಿ ಮೊಟ್ಟಮೊದಲ ಮಹಿಳಾ ನೌಕರರ ಸಂಘ ಎಂಬ ಕೀರ್ತಿಗೆ ನಮ್ಮ ಸಂಘ ಪಾತ್ರವಾಗಿದೆ. ರಾಜ್ಯ ಸರ್ಕಾರದಲ್ಲಿ ಶೇಕಡ 52ರಷ್ಟು ಮಹಿಳಾ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.ಮಹಿಳೆಯಿಂದ ಮಹಿಳೆಯರಿಗಾಗಿ, ಮಹಿಳೆಗೋಸ್ಕರ ನಮ್ಮ ಸಂಘವು ಶ್ರಮಿಸುತ್ತಿದೆ. ಮಹಿಳೆಯರು ಮತ್ತು ಅವರ ಮಕ್ಕಳಿಗೆ ಆರೋಗ್ಯ ತಪಾಸಣೆ, ಕ್ರೀಡಾ ಚಟುವಟಿಕೆ ಮತ್ತು ಮಹಿಳಾ ಹಕ್ಕುಗಳಿಗೆ ನಮ್ಮ ಸಂಘಟನೆಯ ಮುಖ್ಯ ಧ್ಯೇಯ ಉದ್ದೇಶವಾಗಿ.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಮಹಿಳಾ ನೌಕರರಿಗೆ ಋತುಚಕ್ರ ವೇತನ ಸಹಿತ ರಜೆ ಘೋಷಣೆ ಮಾಡಿದ್ದಾರೆ ಮೊಟ್ಟ ಮೊದಲ ರಾಜ್ಯವಾಗಿದೆ.ಸರ್ಕಾರಿ ಮಹಿಳಾ ನೌಕರರು ನಮ್ಮ ಸಂಘದ ಸದಸ್ಯತ್ವ ಪಡೆಯಬೇಕು, ನಮ್ಮ ಸಂಘದ ಕಾರ್ಯಚಟುವಟಿಕೆ ಸಂಘಟನೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಿದರು

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ರೋಶನಿಗೌಡರವರು,ರಾಜ್ಯ ಗೌರವಾಧ್ಯಕ್ಷರಾದ ಗೀತಮಣಿ, ಉಪಾಧ್ಯಕ್ಷೆ ಮಲ್ಲಿಕಾ ಎಂ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ರಾಜ್ಯ ಖಜಾಂಚಿ ಡಾ.ವೀಣಾ ಕೃಷ್ಣಮೂರ್ತಿರವರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ