LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಛ ಸರ್ವೇಕ್ಷಣ್-2023ರ ಪಟ್ಟಿಯಲ್ಲಿ ಬಿಬಿಎಂಪಿಗೆ ಮೊದಲ ಸ್ಥಾನ 

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಸ್ತುತ ಸಾಲಿನಲ್ಲಿ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳಲ್ಲಿ ವರ್ಗೀಕರಿಸಲಾಗಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ 125ನೇ ಸ್ಥಾನವನ್ನು ಪಡೆದಿದೆ.

ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ವತಿಯಿಂದ ವಾರ್ಷಿಕ ಸ್ಚಚ್ಛತಾ ಸಮೀಕ್ಷೆ ನಡೆಸುತ್ತಿದ್ದು ಪ್ರಸ್ತುತ ಸಾಲಿನ ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆಯಲ್ಲಿ ನಗರಗಳನ್ನು 1 ಲಕ್ಷ ಜನಸಂಖ್ಯೆಯ ಒಳಗೆ ಹಾಗೂ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳು ಎಂಬುದಾಗಿ ವರ್ಗೀಕರಿಸಿ ಅದರಂತೆ ಶ್ರೇಯಾಂಕಗಳನ್ನು ನೀಡಲಾಗಿರುತ್ತದೆ.

ಕಳೆದ ಸಾಲಿನ ಸಮೀಕ್ಷೆಯಲ್ಲಿ ನಗರಗಳನ್ನು 10 ಲಕ್ಷ ಮೇಲ್ಪಟ್ಟ ನಗರ ಅಡಿಯಲ್ಲಿ ವರ್ಗೀಕರಿಸಲಾಗಿದ್ದು, ಸದರಿ ಸಮೀಕ್ಷೆಯಲ್ಲಿ ನಗರವು 45 ನಗರಗಳ ಪೈಕಿ 43ನೇ ನಗರವಾಗಿರುತ್ತದೆ.

1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳ ಮಾನದಂಡವನ್ನು 2017ನೇ ಸಾಲಿನಿಂದ 2020ನೇ ಸಾಲಿನ ವರೆಗೆ ಅನ್ವಯಿಸಲಾಗಿರುತ್ತದೆ. 2017ನೇ ಸಾಲಿನಲ್ಲಿ 210ನೇ ಸ್ಥಾನ, 2018ನೇ ಸಾಲಿನಲ್ಲಿ 216ನೇ ಸ್ಥಾನ, 2019ನೇ ಸಾಲಿನಲ್ಲಿ 194ನೇ ಸ್ಥಾನ ಮತ್ತು 2020ನೇ ಸಾಲಿನಲ್ಲಿ 214ನೇ ಸ್ಥಾನ ಪಡೆದಿದ್ದು, ಈ ಬಾರಿ 125ನೇ ಸ್ಥಾನಗಳಿಸಿದೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೋಲಿಸಿದಾಗ ಪಾಲಿಕೆಯು ಮೈಸೂರು, ಹುಬ್ಬಳ್ಳಿ ಧಾರವಾಡ ನಂತರ 3ನೇ ಸ್ಥಾನದಲ್ಲಿದ್ದು ,ರಾಜ್ಯದಲ್ಲಿಯೇ 3ನೇ ಸ್ವಚ್ಛ ನಗರವಾಗಿದೆ.

*ಇದೇ ಪ್ರಥಮ ಬಾರಿಗೆ ಬೆಂಗಳೂರು ನಗರಕ್ಕೆ ನೈರ್ಮಲ್ಯ ಸಮೀಕ್ಷೆಯಲ್ಲಿ ಉನ್ನತ ಶ್ರೇಯಾಂಕವಾದ ವಾಟರ್ + (Water +) ನೀಡಿದೆ*

Service Level Progress, Citizens Voice ಅಡಿಯಲ್ಲಿ ಪಾಲಿಕೆಯು ಉತ್ತಮವಾಗಿ ನಿರ್ವಹಿಸಿದ್ದು, ಸಾರ್ವಜನಿಕರು ಪಾಲಿಕೆಯೊಂದಿಗೆ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಸಹ ಉತ್ತಮ ಆಡಳಿತಕ್ಕೆ ಸ್ಫೂರ್ತಿಯಾಗಿದೆ ಎಂದು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಲಾಗಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ