LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿಯಾ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ಚಿನ್ಮಯಿ ವಿನ್

ಬೆಂಗಳೂರು: 2024ರ IFM ಮಿಸ್ಟರ್ ಮತ್ತು ಮಿಸ್ ಇಂಡಿಯಾ ಸೂಪರ್ ಮಾಡೆಲ್ ಸೌಂದರ್ಯ ಸ್ಪರ್ಧೆಯನ್ನು ಇಂಡಿಯನ್ ಫಿಲ್ಮ್ ಮೇಕರ್ಸ್ ಸಂಸ್ಥೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಯೋಜನೆ ಮಾಡಲಾಗಿತ್ತು.

ಹೊಸ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸುವ ಹಿನ್ನೆಲೆ ಅದಕ್ಕಾಗಿಯೇ ವಿಶೇಷ ಸೌಂದರ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಕರ್ನಾಟಕ, ತಮಿಳ್ನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ನೇಪಾಳ ಸೇರಿದಂತೆ ದಕ್ಷಿಣ ಭಾರತದ ರೂಪದರ್ಶಿಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಪ್ರತಿಯೊಬ್ಬರ ವಿಶೇಷ ಪ್ರತಿಭೆಯನ್ನು ಗುರುತಿಸಿದರು.

ಸೌಂದರ್ಯ ಸ್ಪರ್ಧೆಯನ್ನು ಐಎಫ್ ಎಂನ ಸಂಸ್ಥಾಪಕರಾದ ಜೆಎನ್ ರವಿ ಆಯೋಜನೆ ಮಾಡಿದ್ದರು, ಸಿಡಿ ರಮೇಶ್ ಅವರು ಕಾರ್ಯಕ್ರಮದ ತರಬೇತುದಾರ ಹಾಗೂ ಕೊರಿಯೋಗ್ರಾಫರ್ ಆಗಿದ್ದರು. ನಟ ಆಧಿ ಲೋಕೇಶ್, ಎಂಎಸ್ ಐಎಲ್ ನ ಮಾರುಕಟ್ಟೆ ಮುಖ್ಯಸ್ಥ ರಾಮಚಂದ್ರಪ್ಪ, ಸೇರಿದಂತೆ, ಹೆಸರಾಂತ ಮಾಡೆಲ್ ಗಳು ಭಾಗವಹಿಸಿದ್ದರು. ಸೌಂದರ್ಯ ಸ್ಪರ್ಧೆಯಲ್ಲಿ ಅನುಭವ ಇರುವ 3 ಜನ ತೀರ್ಪುಗಾರರನ್ನು ನೇಮಿಸಲಾಗಿತ್ತು.

IFM ಸಂಸ್ಥೆ ಪ್ರತಿ ವರ್ಷ ಒಂದೊಂದು ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡಲಾಗುತ್ತದೆ, ಸೌಂದರ್ಯ ಸ್ಪರ್ಧೆಯಲ್ಲಿ ಹಲವು ಸುತ್ತುಗಳು ಸ್ಪರ್ಧೆ ನಡೆದವು, ಲಲನೆಯರು ರ್ಯಾಂಪ್ ಮೇಲೆ ವೈಯಾರದ ಹೆಜ್ಜೆ ಹಾಕಿ ನೆರೆದಿದ್ದವರನ್ನು ಮಂತ್ರ ಮುಗ್ದರನ್ನಾಗಿಸಿದರು, ಅಂತಿಮವಾಗಿ ಮಹಿಳಾ ವಿಭಾಗದಲ್ಲಿ ಇಂಡಿಯಾ ಸೂಪರ್ ಮಾಡೆಲ್ ಸೌಂದರ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಚಿನ್ಮಯಿ ಜಯಗಳಿಸಿದ್ದಾರೆ ಅವರಿಗೆ ಟ್ರೋಫಿ,ಕಿರೀಟ ನೀಡಲಾಯಿತು, ಮೊದಲನೇ ರನ್ನರ್ ಆಪ್ ಆಗಿ ಹವಿಷ್ಯ ಕೊಳ್ಳಿ, 2ನೇ ರನ್ನರ್ ಆಫ್ ಆಗಿ ಅಷ್ಲಿ ಎಲಿಜಬೆತ್, ಪ್ರಿಷ ಅವರು 3ನೇ ಬಹುಮಾನಕ್ಕೆ ತೃಪ್ತಿಪಟ್ಟರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ