LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿರುವ ವಾಹನಗಳ ತೆರವು ಹಾಗೂ ಹರಾಜು: ಮಹೇಶ್ವರ್ ರಾವ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ  ಜಿಬಿಎ(GBA) ಕಾಯ್ದೆ 2024, ಸೆಕ್ಷನ್ 324ರ ಅನ್ವಯ ಜುಲೈ 10 ರಿಂದ ಅನಾಥ ವಾಹನಗಳ ತೆರವು ಕಾರ್ಯವನ್ನು ಆರಂಭಿಸಲಾಗುತ್ತಿದೆ. news_1783526611_1_398.webp

ಸಮಸ್ತ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ, 10ನೇ ಜುಲೈ 2026 ರಿಂದ ಅನ್ವಯವಾಗುವಂತೆ, ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು ಗುರುತಿಸಿ 5 ನಗರ ಪಾಲಿಕೆಗಳು ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಅವುಗಳ ವಿರುದ್ಧ ಜಂಟಿ ಕಾರ್ಯಾಚರಣೆಯ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

*ಕ್ರಮಗಳ ವಿವರ:*

1. ನೋಟಿಸ್ ಅವಧಿ: ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುವುದು. ನೋಟಿಸ್ ಅಂಟಿಸಿದ ವಾಹನಗಳ ಚಕ್ರಕ್ಕೆ ವೀಲ್ ಕ್ಲಾಂಪ್ ಅಳವಡಿಸಲಾಗುವುದು.

2. ವಾಹನ ಜಪ್ತಿ(Towing): ನೋಟಿಸ್ ನೀಡಿದ 7 ದಿನಗಳ ಒಳಗಾಗಿ ವಾಹನಗಳ ಮಾಲೀಕರು ವಾಹನಗಳನ್ನು ತೆರವುಗೊಳಿಸದಿದ್ದರೆ, ಅಂತಹ ವಾಹನಗಳನ್ನು ಎಳೆದುಕೊಂಡು ಹೋಗಿ(Tow) ಜಪ್ತಿ ಮಾಡಲಾಗುವುದು.

3. ಬಹಿರಂಗ ಹರಾಜು: ಜಪ್ತಿ ಮಾಡಲಾದ ಎಲ್ಲಾ ವಾಹನಗಳನ್ನು ನಿಯಮಾನುಸಾರ ಬಹಿರಂಗ ಹರಾಜು ಮಾಡಲಾಗುವುದು.

ಸಾರ್ವಜನಿಕರಿಗೆ ಸೂಚನೆ: ಈ ಪ್ರಕಟಣೆಯ ಮೂಲಕ ಸಾರ್ವಜನಿಕರಲ್ಲಿ ವಿನಂತಿಸುವುದೇನೆಂದರೆ, ನೀವು ರಸ್ತೆಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮ ಯಾವುದೇ ವಾಹನಗಳನ್ನು ಬಿಟ್ಟಿದ್ದರೆ, ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ, ಸದರಿ ವಾಹನಗಳನ್ನು ನಿಮ್ಮ ಸ್ವಂತ ಜಾಗಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ವಾಹನಗಳನ್ನು ಜಪ್ತಿ ಮಾಡಿ ಹರಾಜು ಹಾಕಲಾಗುವುದು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೀದಿಬದಿ ವ್ಯಾಪಾರಿಗಳ ಜೊತೆ ಸಚಿವ ಕೃಷ್ಣಭೈರೇಗೌಡ ಸಭೆ ಕೆಲ ಅಂಶಗಳು ಚರ್ಚೆBwssbಯಲ್ಲಿ ನೇರ ನೇಮಕಾತಿ ಅಧಿಸೂಚನೆಗಳಿಗೆ ದಾಖಲಾತಿ ಪರಿಶೀಲನೆಪ್ರೀತಿಯಲ್ಲಿ ಕಿರಿಕ್ ಪ್ರಿಯತಮದಿಂದ ಪ್ರೀತಮಗೆ ಚಾಕು ಇರಿತ ಆಸ್ಪತ್ರೆ ಪಾಲುನಮ್ಮ ಪಂಚರತ್ನ  ಸಿನೆಮಾ ಟೈಟಲ್ ಲಾಂಚ್ ಮಾಡಿದ ಶಾಸಕ ಗೋಪಾಲಯ್ಯನಜೀರ ಅಹ್ಮದ ಶೇಖ್ ಗೆ MLC ನಾಮನಿರ್ದೇಶನಕ್ಕೆ ಕಿತ್ತೂರು ಮುಸ್ಲಿಂ ವೇದಿಕೆಯಿಂದ ಒತ್ತಾಯಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿರುವ ವಾಹನಗಳ ತೆರವು ಹಾಗೂ ಹರಾಜು: ಮಹೇಶ್ವರ್ ರಾವ್ವಿಶ್ವ ಚಾಕೊಲೇಟ್ ದಿನದಂದು ಐಐಎಚ್‌ಎಂ ಬೆಂಗಳೂರಿನ ವಿದ್ಯಾರ್ಥಿಗಳಿಂದ ಅರಳಿದ 'ಚಾಕೊಲೇಟ್ ಕಲೆ ಮಕ್ಕಳಿಗೆ ಹಣ ಸಹಾಯದ ಜೊತೆ ವಿದ್ಯೆಯ ಮಾರ್ಗ ತೋರಿಸುವುದು ಮುಖ್ಯ:ರೊ.ಅಪರ್ಣಎಸ್ಐಆರ್ ದುರುಪಯೋಗ; ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಕೊಟ್ಟ ಎನ್ ಡಿ ಎ