LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ : ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿನೂತನ ಪ್ರತಿಭಟನೆ

news_1777898342_0_913.webp
ಬೆಂಗಳೂರು: ಫೀಡಂ ಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನ ಖಂಡಿಸಿ ಮತ್ತು ಸಣ್ಣ ವ್ಯಾಪಾರಿಗಳು, ಹೋಟಲ್ ಉದ್ಯಮಿಗಳು ಮತ್ತು ಸಾರ್ವಜನಿಕರ ಪರವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಗೌಡರವರು ನೇತೃತ್ವದಲ್ಲಿ ಖಾಲಿ ಸಿಲಿಂಡರ್ ಪ್ರದರ್ಶನದ ಮೂಲಕ ವಿನೂತನವಾಗಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರು.
ಇದೇ ಸಂದರ್ಭದಲ್ಲಿ *ಹೆಚ್.ಎಸ್.ಮಂಜುನಾಥ್ ಗೌಡರವರು* ಮಾತನಾಡಿ ಚುನಾವಣೆಗೊಸ್ಕರ ದರ ಏರಿಕೆ ಮಾಡದೇ, ಇದೀಗ ವಾಣಿಜ್ಯ ಗ್ಯಾಸ್ ದರ 990ರೂಪಾಯಿ ಹೆಚ್ಚಳ ಮಾಡಿ, ಬೀದಿ ಬದಿಯ ಸಣ್ಣ ವ್ಯಾಪಾರಿಗಳು  ಮತ್ತು  ಹೋಟೆಲ್ ನವರಿಗೆ ಬಹಳ ಸಂಕಷ್ಟ ಎದುರಿಸುವ ಪರಿಸ್ಥಿತಿ ಬಂದಿದೆ.
ರಾಜ್ಯದಲ್ಲಿ ಆಯ್ಕೆಯಾಗಿರುವ ಬಿಜೆಪಿ ಸಂಸದರು ಮೌನವಹಿಸಿದ್ದಾರೆ.
ಕೇಂದ್ರ ಸರ್ಕಾರ ಬಿಜೆಪಿ ಅಂಧ ಭಕ್ತರಿಗೆ ಗ್ಯಾಸ್ ಬೆಲೆ ಹೆಚ್ಚಳ ಮಾಡಿ ಕೊಡಿ ಅವರು ಸಹಿಸಿಕೊಳ್ಳುತ್ತಾರೆ, ಸಾಮಾನ್ಯ ಜನರಿಗೆ ದರ ಕಡಿಮೆ ಮಾಡಿ.
 ಮನಮೋಹನ್ ಸಿಂಗ್ ರವರ ಆಡಳಿತದಲ್ಲಿ ಗ್ಯಾಸ್ ಪೆಟ್ರೋಲ್ ಸಂಗ್ರಹ ಕೇಂದ್ರ ಸ್ಥಾಪನೆಯಿಂದ ಇಷ್ಟು ದಿನ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿಲ್ಲ, ಪಂಚ ರಾಜ್ಯ ಚುನಾವಣೆ ನಂತರ ಗದಾಪ್ರಹಾರ ಮಾಡಿದ್ದಾರೆ.
ವಾಣಿಜ್ಯ ಗ್ಯಾಸ್ ದರ ಏರಿಕೆಯಿಂದ ಆಹಾರ, ತಿನಿಸುಗಳ ಬೆಲೆ ಹೆಚ್ಚಳವಾಗಲಿದೆ ಇದರಿಂದ ವ್ಯಾಪಾರ ಕುಸಿತವಾಗಲಿದೆ. ಸಣ್ಣ ಉದ್ಯಮಿದಾರರು, ಹೋಟಲ್ ಗಳು ನಂಬಿರುವ ಕೊಟ್ಯಂತರ ಜೀವನ ಬೀದಿ ಪಾಲಾಗಲಿದೆ. ಆರ್ಥಿಕ ಕುಸಿತವಾಗಿ ದೇಶ ಕಂಗಾಲು ಆಗುವ ಪರಿಸ್ಥಿತಿ ಬರುತ್ತದೆ 
ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ 2ರೂಪಾಯಿ ಹೆಚ್ಚಾದರೆ ಬೀದಿಗೆ ಬಂದು ಗಲಾಟೆ ಮಾಡುತ್ತಿದ್ದ ಕೇಂದ್ರ ಸಚಿವೆ ಶೋಭ ಕರಾಂದ್ಲಜೆರವರು ಇಂದು 990ರೂಪಾಯಿ ಗ್ಯಾಸ್ ದರ ಏರಿಕೆ ಮಾಡಿದೆ ಈಗ ಯಾಕೆ ಮಾತನಾಡುತ್ತಿಲ್ಲ ಶೋಭ ಮೇಡಮ್. ಸಂಸದ ತೇಜಸ್ವಿಸೂರ್ಯ ಎಲ್ಲಿದಿಯಪ್ಪ
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸಮಿತಿ ಹೋರಾಟ ಮತ್ತು ಪ್ರತಿಭಟನೆ ಮಾಡಲಿದೆ ಎಂದು ಹೇಳಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ