ನವದೆಹಲಿ: ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿರುವ ಹಿರಿಯ ನಟ ಅನಂತ್ ನಾಗ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿರುವ ಕನ್ನಡನಾಡಿನ ಹೆಮ್ಮೆಯ ನಟರಾದ ಅನಂತ್ ನಾಗ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಅನಂತ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರು ಹಾಗೂ ಸಹಜ ಅಭಿನಯ, ಅಭಿವ್ಯಕ್ತಿಗೆ ಮತ್ತೊಂದು ಹೆಸರು. ಭಾರತೀಯ ಚಿತ್ರರಂಗದಲ್ಲಿ ಅಪರೂಪದ ಪ್ರತಿಭೆ. ಅಂತಹ ಸಾಧಕರಿಗೆ ದಾದಾಸಾಹೇಬ್ ಫಾಲ್ಕೆ ಗೌರವ ಸಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ವರನಟ ಡಾ.ರಾಜ್ಕುಮಾರ್ ಅವರ ನಂತರ ಕನ್ನಡ ಭುವನೇಶ್ವರಿಯ ಕೀರ್ತಿ ಕಿರೀಟಕ್ಕೆ ಮತ್ತೊಂದು ಗರಿ ಮುಡಿಸಿದ ಹೆಗ್ಗಳಿಕೆ ಅವರದ್ದಾಗಿದೆ. ಅವರಿಗೆ ಶುಭಾಶಯಗಳನ್ನು ಕೋರುತ್ತಾ, ಮುಂದಿನ ದಿನಗಳಲ್ಲಿ ಅವರಿಂದ ಕನ್ನಡ ಚಿತ್ರರಂಗಕ್ಕೆ, ನಾಡಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದ್ದಾರೆ.