LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದಲ್ಲಿ ಕಳೆದ ಮೂರು ವರ್ಷಗಳಿಂದ ಮುಂದುವರಿದಿರುವ ವಿವಾದಕ್ಕೆ ಸಂಬಂಧಿಸಿದಂತೆ, ಸಂಘದ ಚುನಾವಣೆಗೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಸಂಘದ ಅಧ್ಯಕ್ಷರಾಗಿ ಕಾನೂನುಬದ್ಧವಾಗಿ ಆಯ್ಕೆಯಾಗಿದ್ದ ಪದ್ಮಿನಿ ನಂದ ಅವರ ಸಂಘಕ್ಕೆ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟ ಮಾನ್ಯತೆ ನೀಡಿತ್ತು. ಆದರೆ, ಹಿಂದಿನ ಚುನಾವಣೆಯಲ್ಲಿ ಸೋತ ಮಾಜಿ ಅಧ್ಯಕ್ಷ ಡಿಂಗ್ರಿ ನಾಗರಾಜ್ ಹಾಗೂ ಕಾರ್ಯದರ್ಶಿ ನವನೀತಂ ಅವರ ಬಳಗವು, ಡಿಂಗ್ರಿ ನಾಗರಾಜ್ ಅವರನ್ನು ಅವಿರೋಧವಾಗಿ ಅಧ್ಯಕ್ಷರಾಗಿ ಘೋಷಿಸಿ, ಉಳಿದ ಹುದ್ದೆಗಳಿಗಾಗಿ ಮಾರ್ಚ್ 21, 2026ರಂದು ಚುನಾವಣೆ ನಡೆಸಲು ಪ್ರಕಟಿಸಿತ್ತು.

ಈ ಕ್ರಮವನ್ನು ಪ್ರಶ್ನಿಸಿ, ಚುನಾವಣೆಯು ಕಾನೂನುಬಾಹಿರವಾಗಿದೆ ಎಂದು ವಾದಿಸಿ, ಹಾಗೂ ಹಿಂದಿನ ಅವಧಿಯಲ್ಲಿ ನಡೆದಿದ್ದಂತೆ ಆರೋಪಿಸಲಾದ ಹಣಕಾಸಿನ ಅವ್ಯವಹಾರಗಳ ಕುರಿತು ಗಮನ ಸೆಳೆದು, ಪದ್ಮಿನಿ ನಂದ ಅವರ ಬಳಗ ನ್ಯಾಯಾಲಯದ ಮೊರೆ ಹೋಗಿತ್ತು.
ಈ ಅರ್ಜಿಯನ್ನು ವಿಚಾರಿಸಿದ ಸಿಟಿ ಸಿವಿಲ್ ಕೋರ್ಟ್ (ಹಾಲ್ ನಂ. 60) ನ್ಯಾಯಾಲಯವು, ಪ್ರತಿವಾದಿ ಸಂಖ್ಯೆ 2 ಅವರಿಗೆ ಮಾರ್ಚ್ 21, 2026 ಅಥವಾ ಯಾವುದೇ ಇತರ ದಿನಾಂಕದಲ್ಲಿ ಚುನಾವಣೆ ನಡೆಸದಂತೆ ತಾತ್ಕಾಲಿಕ ತಡೆ ಆದೇಶ ನೀಡಿದೆ.
ಇದಲ್ಲದೆ, ಸಾಮಾನ್ಯ ಸಭೆಯ ನೆಪದಲ್ಲಿ ಯಾರಾದರೂ ಚುನಾವಣೆ ನಡೆಸಲು ಮುಂದಾದರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ