LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಟ ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಸಚಿವ  ವಿಜಯಾನಂದ ಕಾಶಪ್ಪನವರ್ ಅಭಿನಂದನೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಗೂ ಉದಯೋನ್ಮುಖ ನಟ ಅನಂತನಾಗ್ ಅವರಿಗೆ ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿರುವುದಕ್ಕೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮ ವಲಯಗಳು ಹಾಗೂ ಬಾಗಲಕೋಟೆ ಜಿಲ್ಲೆ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಅಭಿನಂದನೆ ಸಲ್ಲಿಸಿದ್ದಾರೆ.news_1789566497_0_307.webp

ಕನ್ನಡ ಚಿತ್ರರಂಗಕ್ಕೆ ಅನಂತನಾಗ್ ಅವರು ದಶಕಗಳ ಕಾಲ ಸಲ್ಲಿಸಿರುವ ಅಪೂರ್ವ ಸೇವೆ ಹಾಗೂ ತಮ್ಮ ವಿಭಿನ್ನ ನಟನಾ ಶೈಲಿಯ ಮೂಲಕ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
ಅನಂತನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿರುವುದು ಕನ್ನಡದ ಶ್ರೇಷ್ಠ ನಟನೆಯ ಸೇವೆಗೆ ದೊರೆತಿರುವ ನಿಜವಾದ ಗೌರವವಾಗಿದೆ. ತಮ್ಮ ಸಹಜ ಅಭಿನಯ, ವಿಭಿನ್ನ ಪಾತ್ರಗಳ ನಿರ್ವಹಣೆ ಹಾಗೂ ಕಲಾತ್ಮಕ ಅಭಿವ್ಯಕ್ತಿಯ ಮೂಲಕ ಅನಂತನಾಗ್ ಅವರು ಕನ್ನಡ ಸಿನಿರಸಿಕರ ಮನಸ್ಸಿನಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ ಎಂದು  ಹೇಳಿದ್ದಾರೆ.

ಕನ್ನಡದ ದಿಗ್ಗಜ ನಟ ಡಾ. ರಾಜಕುಮಾರ್ ಅವರ ಬಳಿಕ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆಯುತ್ತಿರುವ ಎರಡನೇ ಕನ್ನಡಿಗ ಎಂಬ ಹೆಗ್ಗಳಿಕೆಗೆ ಅನಂತನಾಗ್ ಪಾತ್ರರಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಅವರ ಕಲಾಸೇವೆ ಮತ್ತು ಸಾಧನೆಗೆ ದೇಶದ ಅತ್ಯುನ್ನತ ಚಿತ್ರರಂಗದ ಗೌರವಗಳಲ್ಲಿ ಒಂದಾದ ಈ ಪ್ರಶಸ್ತಿ ಮತ್ತಷ್ಟು ಮೆರುಗು ನೀಡಿದೆ ಎಂದು ಅವರು
ಸಂತಸ ವ್ಯಕ್ತಪಡಿಸಿದ್ದಾರೆ. 

ಅನಂತನಾಗ್ ಅವರ ಕಲಾ ಪಯಣವು ಹಲವು ತಲೆಮಾರುಗಳ ಕಲಾವಿದರು ಹಾಗೂ ಚಿತ್ರರಂಗದ ಅಭಿಮಾನಿಗಳಿಗೆ ಸ್ಫೂರ್ತಿದಾಯಕವಾಗಿದೆ. ಅವರ ಅಭಿನಯಕ್ಕೆ ಸಂದಿರುವ ಈ ಗೌರವವು ಕನ್ನಡ ಚಿತ್ರರಂಗದ ಶ್ರೀಮಂತ ಪರಂಪರೆಗೂ ಸಂದ ಗೌರವವಾಗಿದೆ. ಪ್ರಶಸ್ತಿ ಘೋಷಣೆಗೆ ಅನಂತನಾಗ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಚಿವ ವಿಜಯಾನಂದ ಕಾಶಪ್ಪನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IIPM ಬೆಂಗಳೂರಿನ 21ನೇ ಘಟಿಕೋತ್ಸವ: 343 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಪ್ರದಾನಹಿರಿಯ ನಟ ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಸಚಿವ  ವಿಜಯಾನಂದ ಕಾಶಪ್ಪನವರ್ ಅಭಿನಂದನೆದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾದ ಅನಂತ್ ನಾಗ್ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿ ಕೈಗೊಳ್ಳಿ, ಇಲ್ಲವೇ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕತೆ ಮಾಡಿ: ಪಾಟೀಲ್ ನರಿಬೋಳ ಶುಕ್ರ ಗ್ರಹದ ಪಕ್ಕದಲ್ಲಿ ಅರ್ಧಚಂದ್ರಾಕಾರದ ಚಂದ್ರ ಗೋಚರಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಮಸ್ತ ಚಟುವಟಿಕೆಗಳೂ ರಾಜ್ಯದಲ್ಲೇ ನಡೆಯಬೇಕು: ಎಂ ಬಿ ಪಾಟೀಲರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ.,ಸೆ.19ರಂದು CM ತೀರ್ಥಹಳ್ಳಿಗೆ ಕೆವಿನ್‌ಕೇರ್, (MMA) ಸಹಯೋಗದಲ್ಲಿ 15ನೇ ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಬಳಕೆಯಾಗಲಿ: ಕೆ. ಎಂ. ಶಿವಲಿಂಗೇಗೌಡ ಖೋಪೋಲಿಯಲ್ಲಿ ಅಕ್ಟೋಬರ್ 30 ರಿಂದ ಭಾರತೀಯ ಶಾಲೆಗಳ ಶಿಕ್ಷಣ ಶೃಂಗಸಭೆ