ಬೆಂಗಳೂರು: ಬೇಸಿಗೆಯಲ್ಲೂ ಮಳೆ ಹೆಚ್ಚು ಪ್ರಮಾಣದಲ್ಲಿ ಸುರಿಯುವ ಮುನ್ಸೂಚನೆ ಹಿನ್ನೆಲೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಂದಾಯ ಮಂತ್ರಿಗಳಾದ ಕೃಷ್ಣ ಬೈರೇಗೌಡ ಅವರು ರಾಜಕಾಲುವೆಗಳ ಊಳೆತುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕ್ಷೇತ್ರದಲ್ಲಿ ಮುಂಜಾಗ್ರತಾ ಅಕ್ರಮವಾಗಿ ಸಾರ್ವಜನಿಕರಿಗೆ ಮಳೆಯಿಂದ ಯಾವುದೇ ಹಾನಿ ಹಾಕದಂತೆ ಎಚ್ಚರ ವಹಿಸುವ ಹಿನ್ನೆಲೆ,
ಮಳೆಗಾಲದ ಪೂರ್ವಸಿದ್ಧತೆಗಾಗಿ ಪ್ರಮುಖ ರಾಜಕಾಲುವೆಗಳ ಹೂಳು ತೆಗೆಯುವ ಕಾರ್ಯ ಕೈಗೊಳ್ಳಲಾಗಿದೆ.
ರಾಜಕಾಲುವೆಗಳಲ್ಲಿವ ಹೂಳು ತೆರವುಗೊಳಿಸುವ ಮೂಲಕ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರವಾಹ ಕಡಿಮೆಯಾಗುತ್ತದೆ. ಹೆಬ್ಬಾಳ ರಾಜಕಾಲುವೆ ಹೂಳು ತೆಗೆಯುವ ಕಾರ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಹೂಳು ತೆಗೆಯುವ ಕೆಲಸ ಸರಿಯಾಗಿ ನಡೆಯದ ಪ್ರದೇಶಗಳನ್ನು ಅಧಿಕಾರಿಗಳಿಗೆ ತೋರಿಸಿದ್ದೇನೆ.

ಮುಂದಿನ 15 ದಿನಗಳಲ್ಲಿ ಪ್ರಮುಖ ರಾಜಕಾಲುವೆ ಹೂಳು ತೆಗೆಯುವಿಕೆಯನ್ನು ಪೂರ್ಣಗೊಳಿಸಲು ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶೀಘ್ರದಲ್ಲಿಯೇ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ ರಾಜ ಕಾಲುವೆಗಳ ಹೂಳೆತ್ತುವ ಸ್ಥಳಕ್ಕೆ ಸ್ವತಃ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆಯನ್ನು ಸಹ ನಡೆಸಿದರು.