LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತ ತುರ್ತು ಸ್ಪಂದನ ವಾಹನಗಳಿಗೆ ಚಾಲನೆ

ಬೆಂಗಳೂರು: ಸರ್ಕಾರಿ ಸಾರಿಗೆ ವಾಹನ ಅಪಘಾತ ಹಾಗೂ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು “ಅಪಘಾತ ತುರ್ತು ಸ್ಪಂದನ ವಾಹನ” ಗಳಿಗೆ (Accident Emergency Response Vehicle) ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಚಾಲನೆ ನೀಡಿದರು.

ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಾಲದ ನೀಡಿ ಮಾತನಾಡಿದ ಸಚಿವರು , ಈ ವಾಹನಗಳು ನಿಗಮದ ಬಸ್ಸುಗಳು ಮಾರ್ಗ ಮಧ್ಯೆ ಅಪಘಾತ/ ಅವಘಡಕ್ಕೀಡಾಗಿ (ಬ್ರೇಕ್ ಡೌನ್) ದುರಸ್ಥಿಗೊಂಡಲ್ಲಿ ಸದರಿ ವಾಹನವನ್ನು ಶೀಘ್ರವಾಗಿ ರಿಪೇರಿಗೊಳಿಸುವ ಸಲುವಾಗಿ ಮೊಬೈಲ್ ವರ್ಕಷಾಪ್ ಮಾದರಿಯಲ್ಲಿ ಸೇರ್ಪಡೆಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ತುರ್ತು ವಾಹನದ ಕಾರ್ಯಗಳು:

1. ಈ ಎರಡು ವಾಹನಗಳನ್ನು ಬೆಂಗಳೂರು ಹಾಗೂ ಮೈಸೂರು ಕೇಂದ್ರ ಸ್ಥಳಗಳಲ್ಲಿ ನಿಯೋಜಿಸಲಾಗುವುದು. ಇದರಿಂದ ಬೆಂಗಳೂರು ಸುತ್ತಮುತ್ತ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಪ್ರದೇಶದಲ್ಲಿ ಉಂಟಾಗುವ ಅಪಘಾತ/ಅವಘಢಗಳನ್ನು ಶೀಘ್ರದಲ್ಲಿ ಸ್ಪಂದಿಸಲು ಅನುಕೂಲವಾಗುತ್ತದೆ.

2. ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ರಾಜ್ಯದ ಹಾಗೂ ಅಂತರರಾಜ್ಯದ ಭಾಗಗಳಿಗೆ ವಿವಿಧ ಮಾದರಿಯ ಬಸ್ಸುಗಳು ವಿವಿಧ ಸ್ಥಳಗಳಿಗೆ ಕಾರ್ಯಾಚರಣೆಯಾಗುತ್ತಿದೆ.
3. ಬಸ್ಸುಗಳು ವಿವಿಧ ಸ್ಥಳಗಳಲ್ಲಿ ತಾಂತ್ರಿಕ ದೋಷದಿಂದಾಗಿ ಕೆಟ್ಟು ನಿಲ್ಲುವ ಸಂದರ್ಭದಲ್ಲಿ, ಉಂಟಾಗುವ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಈ ವಾಹನವು ಸಹಕಾರಿಯಾಗಲಿದ್ದು, ಇದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ.

4. ಆದುದರಿಂದ, ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದ ತಾಂತ್ರಿಕ ಸಿಬ್ಬಂದಿಗಳು ವಾಹನ ಅವಘಡ/ ಅಪಘಾತ ಸಮಯದಲ್ಲಿ ಶೀಘ್ರವಾಗಿ ಬಿಡಿಭಾಗಗಳು / ಇತರೆ ಪರಿಕರಗಳೊಂದಿಗೆ ಸದರಿ ಸ್ಥಳಗಳಿಗೆ ತೆರಳಿ ವಾಹನ ದುರಸ್ಥಿಗೊಳಿಸಲು ಮೊಬೈಲ್ ವರ್ಕಷಾಪ್ ವಾಹನವನ್ನು ಸೇರ್ಪಡೆಗೊಳಿಸಲು ಉದ್ದೇಶಿಸಲಾಗಿದೆ.

5. ಬಸ್ಸುಗಳು ಅಪಘಾತ/ಅವಘಡಕ್ಕೀಡಾದಲ್ಲಿ (ಬ್ರೇಕ್ ಡೌನ್) ಚಾಲಕ, ನಿರ್ವಾಹಕರಿಗೆ ತಕ್ಷಣದಲ್ಲಿ ಸಹಾಯ ನೀಡಲು ಹಾಗೂ ಗಾಯಗೊಂಡಿದಲ್ಲಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲು ಸಹ ಸ್ಪಂದನ ವಾಹನವು ಉಪಯುಕ್ತವಾಗುತ್ತದೆ.

6. ಪ್ರತಿ ವಾಹನದ ಬೆಲೆ ರೂ.7.22 ಲಕ್ಷಗಳಾಗುತ್ತದೆ. ಜನವರಿ-2026ರ ಅಂತ್ಯಕ್ಕೆ ಹೆಚ್ಚುವರಿಯಾಗಿ 10 ಹೊಸ ವಾಹನಗಳು ಸೇರ್ಪಡೆಗೊಳ್ಳಲಿದ್ದು, ಸದರಿ ವಾಹನಗಳನ್ನು ಉಳಿದ ಜಿಲ್ಲೆಗಳಿಗೆ ಕ್ರಮವಾಗಿ ನಿಯೋಜನೆ ಮಾಡಲಾಗುವುದು.

7. ಅವಘಡ/ ಅಪಘಾತ ಸಮಯದಲ್ಲಿ ಶೀಘ್ರವಾಗಿ ಬಿಡಿಭಾಗಗಳು / ಇತರೆ ಪರಿಕರಗಳೊಂದಿಗೆ ಸದರಿ ಸ್ಥಳಗಳಿಗೆ ತೆರಳಿ ವಾಹನ ದುರಸ್ಥಿಗೊಳಿಸಲು Ashok Leyland DOST XL High Side Deck – BS-VI ಮಾದರಿಯ ವಾಹನವನ್ನು ಖರೀದಿಸಿದ್ದು ಇದರ ಪ್ರಮುಖ ವೈಶಿಷ್ಟ್ಯಗಳನ್ನು ಕೆಳಕಂಡಂತೆ ತಿಳಿಸಲಾಗುತ್ತದೆ:

ವಾಹನಗಳ ಪ್ರಮುಖ ಪ್ರಯೋಜನಗಳು:

o ಮಾದರಿ: Ashok Leyland DOST XL High Side Deck (HSD)
o ಮಾನದಂಡ: BS-VI
o ವರ್ಗ: Built-Up Truck (V2)
o ಎಂಜಿನ್ ಮತ್ತು ಕಾರ್ಯಕ್ಷಮತೆ: ಟರ್ಬೋ ಚಾರ್ಜ್ಡ್ ಮತ್ತು ಇಂಟರ್ಕೂಲ್ಡ್ ಡೀಸೆಲ್ ಎಂಜಿನ್
o BS-VI ಮಾನದಂಡಗಳಿಗೆ ಅನುಗುಣವಾಗಿರುವ ಕಡಿಮೆ ಮಾಲಿನ್ಯ ಹೊರಸೂಸುವ ವ್ಯವಸ್ಥೆ
o ಉತ್ತಮ ಇಂಧನ ದಕ್ಷತೆ ಮತ್ತು ಶಕ್ತಿ ಉತ್ಪಾದನೆ
o High Side Deck (HSD) ವಿನ್ಯಾಸ – ಸರಕುಗಳನ್ನು ಸುರಕ್ಷಿತವಾಗಿ ಸಾಗಿಸಲು ಅನುಕೂಲ

ಬಸ್ಸು ಗೆ ಚಾಲನೆ ನೀಡಿದ ಸಂದರ್ಭದಲ್ಲಿ ಅಧ್ಯಕ್ಷರುಗಳಾದ  ಭರಮಗೌಡ (ರಾಜು) ಅಲಗೌಡ ಕಾಗೆ, ವಾ.ಕ.ರ.ಸಾ. ಸಂಸ್ಥೆ ಹಾಗೂ ಅರುಣ್ ಕುಮಾರ್ ಎಂ.ವೈ. ಪಾಟೀಲ, ಕ.ಕ.ರ.ಸಾ. ನಿಗಮ, ವಿ.ಎಸ್. ಆರಾಧ್ಯ, ಬೆಂ.ಮ.ಸಾ. ಸಂಸ್ಥೆ, ಶ್ರೀ ಮೊಹಮ್ಮದ್ ರಿಜ್ವಾನ್ ನವಾಬ್, ಮಾನ್ಯ ಉಪಾಧ್ಯಕ್ಷರು, ಕರಾರಸಾ ನಿಗಮ, ಶ್ರೀ ನಿಕೇತ್ ರಾಜ್ ಎಂ, ಮಾನ್ಯ ಉಪಾಧ್ಯಕ್ಷರು, ಬಿ ಎಂ ಟಿ‌ಸಿ, ಅಕ್ರಂ ಪಾಷ, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ, ಶಿವಕುಮಾರ್ ಕೆ.ಬಿ., ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಬೆಂ.ಮ.ಸಾ.ಸಂಸ್ಥೆ, ಪ್ರಿಯಾಂಗಾ ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ವಾ.ಕ.ರ.ಸಾ.ಸಂಸ್ಥೆ ಮತ್ತು ಡಾ. ಸುಶೀಲಾ ಬಿ. ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕ.ಕ.ರ.ಸಾ. ನಿಗಮ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ