ಬೆಂಗಳೂರು ಗ್ರಾಮಾಂತರ ಹೊಸಕೋಟೆ: ಬೆಂ.ಮ.ಸಾ.ಸಂಸ್ಥೆಯ ವತಿಯಿಂದ ಹೆಚ್.ಕ್ರಾಸ್ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟಿನ್ ಫ್ಯಾಕ್ಟರಿಯಿಂದ ಹೆಚ್.ಕ್ರಾಸ್ ಗೆ ಹಾಗೂ ಹೊಸಕೋಟೆಯಿಂದ ನೆಲಮಂಗಲಕ್ಕೆ ನೂತನ ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಚಾಲನೆ ನೀಡಲಾಯಿತು.

ನಂತರ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿ ಮಾತನಾಡಿ, ಪ್ರಯಾಣಿಕರ ಅನುಕೂಲತೆ ಹಾಗೂ ಗುಣಮಟ್ಟದ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ನೂತನ ಸೇವೆಗಳು ಮಹತ್ವದ ಹೆಜ್ಜೆಯಾಗಿವೆ. ಪ್ರಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಾನ್ ಸ್ಟಾಪು ಪಾಯಿಂಟ್ ಸೇಬಿ ಉದಯಿಸುವ ಕೆಲಸವನ್ನು ಮಾಡಲಾಗಿದೆ ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕಾಗಿದೆ ಸಾರ್ವಜನಿಕರ ಅನುಕೂಲಕ್ಕೆ ಈ ಸೇವೆಯನ್ನು ಕಲ್ಪಿಸಲಾಗಿದೆ ಎಂದರು.
ಈ ನೂತನ ಸೇವೆಗಳಿಗೆ ಶ್ರೀ ರಾಮಲಿಂಗಾರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು, ವಿ.ಎಸ್.ಆರಾಧ್ಯ, ಅಧ್ಯಕ್ಷರು, ಬೆಂ.ಮ.ಸಾ.ಸಂಸ್ಥೆ, ಶ್ರೀ ಶರತ್ ಕುಮಾರ್ ಬಚ್ಚೇಗೌಡ, ಮಾನ್ಯ ಶಾಸಕರು, ಹೊಸಕೋಟೆ ವಿಧಾನಸಭಾ ಕ್ಷೇತ್ರ, ಶ್ರೀ ಬಿ.ಎನ್.ರವಿಕುಮಾರ್, ಮಾನ್ಯ ಶಾಸಕರು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ, ಶ್ರೀ ಶಿವಕುಮಾರ್ K B , IAS, ವ್ಯವಸ್ಥಾಪಕ ನಿರ್ದೇಶಕರು , ಶ್ರೀ ನಿಕೇತ್ ರಾಜ್.ಎಂ, ಉಪಾಧ್ಯಕ್ಷರು, ಬೆಂ.ಮ.ಸಾ.ಸಂಸ್ಥೆ,ಮತ್ತು ಇತರೇ ಗಣ್ಯರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಬೆಂ.ಮ.ಸಾ.ಸಂಸ್ಥೆಯ ಅಧಿಕಾರಿಗಳು/ಸಿಬ್ಬಂದಿಗಳು ಉಪಸ್ಥಿತರಿದ್ದರು.