LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಯಾಗಿರುವ ಪ್ರದೇಶಗಳಲ್ಲಿ ಪಾಲಿಕೆ ಅಧಿಕಾರಿಗಳಿಂದ ತೆರವು ಕಾರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿತ್ತಿರುವ ಹಿನ್ನೆಲೆ ಇಂದು ಪಾಲಿಕೆಯ ಆಯುಕ್ತರಾದಂತಹ ಪ್ರಸಾದ್ ಗಿರಿನಾಥ ಅವರು ಪಾಲಿಕೆಯ ಕಂಟ್ರೋಲ್ ರೂಮಿನಲ್ಲಿ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿರುವುದು ಹಾಗೆ ಅಧಿಕಾರಿ ವರ್ಗದವರನ್ನು ತಕ್ಷಣ ಅಲ್ಲಿ ನಿಯೋಜನೆ ಮಾಡಿ ಮಳೆ ನೀರು ತೆರವ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ನಗರದ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದ್ದು, ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ನಿಯಂತ್ರಣ ಕೊಠಡಿಯಲ್ಲಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಮಸ್ಯೆಯಾಗಿರುವ ಕಡೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುತ್ತಿದ್ದಾರೆ.

• ಸಹಕಾರ ನಗರದ ಎನ್.ಟಿ.ಐ ಕೆಳಸೇತುವೆ ನಿಂತಿರುವ ನೀರನ್ನು ತೆರವುಗೊಳಿಸಲಾಗುತ್ತಿದೆ.

• ಜುಡಿಶಿಯಲ್ ಲೇಔಟ್ ಬಳಿ ಜಿಕೆವಿಕೆಯ ಹಳೆಯ ಸುಮಾರು 100 ಅಡಿ ಕಾಂಪೌಂಡ್ ಗೋಡೆ ಕುಸಿದು ರಸ್ತೆ ಮೇಲೆ ಬಿದ್ದಿದ್ದು, ಅದನ್ನು ಜೆಸಿಬಿ ಮೂಲಕ ರಸ್ತೆ ಬದಿಗೆ ತಳ್ಳಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

• ಕೊಡಿಗೆಹಳ್ಳಿಯ ಚಿತ್ರಕೂಟ ರೆಸಿಡೆನ್ಸಿಯ ಗೋಡೆ ಬಿದ್ದಿರುವ ಪರಿಣಾಮ ಪಕ್ಕದಲ್ಲಿರುವ ನೀರುಗಾಲುವೆಯಿಂದ ಅಪಾರ್ಟ್ಮೆಂಟ್ ಸೆಲ್ಲಾರ್ ಗೆ ನೀರು ಬಂದಿದ್ದು, ಪಂಪ್ ಮೂಲಕ ನೀರು ತೆರವುಗೊಳಿಸಲಾಗಿದೆ‌. ಇದೇ ಸ್ಥಳದಲ್ಲಿ ಕೈಸರ್ ರೆಸಿಡೆನ್ಸಿ ಬೇಸ್ಮೆಂಟ್ ಗೆ ನೀರು ಬಂದಿದ್ದು, ಪಂಪ್ ಮೂಲಕ ನೀರು ತೆರವುಗೊಳಿಸಲಾಗುತ್ತಿದೆ‌.

• ಕೊಡಿಗೆಹಳ್ಳಿ ಕೆಳ ಸೇತುವೆಯಲ್ಲಿ ನಿಂತಿದ್ದ ನೀರನ್ನು ತೆರವುಗೊಳಿಸಲಾಗಿದೆ.

• ಯಲಹಂಕ‌ ಕೆಳ ಸೇತುವೆಯಲ್ಲಿ ನಿಂತಿದ್ದ ನೀರನ್ನು ತೆರವುಗೊಳಿಸಲಾಗಿದೆ.

• ಇನ್ನು ಬಸವ ಸಮಿತಿಯ ಬಳಿ 9 ಮನೆ, ವೆಂಕಟಶಾಮಪ್ಪ‌ ಲೇಔಟ್ ನಲ್ಲಿ 10 ಮನೆ, ಎಂ.ಎಸ್ ಪಾಳ್ಯದಲ್ಲಿ 8 ಮನೆ ಹಾಗೂ ಟೆಲಿಕಾಂ ಲೇಔಟ್ ನಲ್ಲಿ 1 ಮನೆಗೆ ನೀರು ನುಗ್ಗಿದ್ದು, ಅಧಿಕಾರಿಗಳು ನೀರನ್ನು ತೆರವುಗೊಳಿಸುವ ಕೆಲಸ‌ ಮಾಡುತ್ತಿದ್ದಾರೆ‌.

* ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಲ್ಲಿ ಯಾವುದೇ ನೀರು ನಿಂತಿರುವುದಿಲ್ಲ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ