ಬೆಂಗಳೂರು : BWSSB ಯಲ್ಲಿ ಅಧ್ಯಕ್ಷರಾಗಿ ಎರಡುವರೆ ವರ್ಷಗಳ ಕಾಲ ಕೆಲಸ ಮಾಡಿ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಡಾ. ರಾಮ್ ಪ್ರಸಾದ್ ಮನೋಹರ್ ಅವರಿಗೆ ಬಿಳ್ಕೊಡುಗೆ ಸಮಾರಂಭವನ್ನು ಇಲಾಕೆ ವತಿಯಿಂದ ಮಾಡಲಾಯಿತು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷರಾಗಿ ಎರಡೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಾ. ರಾಮ್ ಪ್ರಸಾತ್ ಮನೋಹರ್ ವಿ. ಭಾ.ಆ.ಸೇ., ಅವರನ್ನು ಮಂಡಳಿಯ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಬೆಂಗಳೂರು ಜಲ ಮಂಡಳಿಯಲ್ಲಿ ಎರಡುವರೆ ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ಇಲಾಖೆಗೆ ಉತ್ತಮವಾದಂತಹ ಹೆಸರನ್ನು ತಂದುಕೊಟ್ಟಿದ್ದಾರೆ ಹಾಗೆ ಜಲ ಮಂಡಳಿಯನ್ನು ಅಭಿವೃದ್ಧಿ ಪದದತ್ತ ಕೊಂಡೆಯಲು ಮನೋಹರ್ ರವರು ಸಹ ಕಾರಿ ಯಾಗಿದ್ದಾರೆ ಎಂದು ಮಂಡಳಿಯ ಸದಸ್ಯರು ಅಭಿಪ್ರಾಯಪಟ್ಟರು.
ಇಲಾಖೆಯಲ್ಲಿ ಮನೋಹರವರು ಅಧಿಕಾರವಹಿಸಿಕೊಂಡ ಆಗಿದ್ದರಿಂದ ಇಲ್ಲಿಯ ತನಕ ಜನರ ನಾಡಿ ಮಿಡಿತವನ್ನು ಹರಿದುಕೊಂಡು ಎಲ್ಲಾ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಿ, ಇಲಾಖೆಗೆ ಒಳ್ಳೆಯ ಹೆಸರನ್ನು ತಂದಿದ್ದಾರೆ.
ಇಲಾಖೆಯಲ್ಲಿ ಅವರು ಮಾಡಿರುವ ಸೇವೆಯನ್ನು ಗುರುತಿಸಿ ಹಾಗೂ ಅವರ ಕೆಲಸ ಕಾರ್ಯಗಳನ್ನು ಮೆಚ್ಚಿ ಅವರ ಕಾರ್ಯವೈಕರಿಗಳನ್ನು ಮಂಡಳಿಯವರು ಜ್ಞಾಪಿಸಿಕೊಂಡರು ಅಲ್ಲದೆ ಗುಣಗಾನವನ್ನು ಸಹ ಮಾಡಿದರು.
ಈ ಸಂದರ್ಭದಲ್ಲಿ ಮಂಡಳಿಯ ನೂತನ ಅಧ್ಯಕ್ಷರಾದ ಡಾ. ಮಂಜುಳಾ ಎನ್., ಭಾ.ಆ.ಸೇ ಆಡಳಿತಾಧಿಕಾರಿ ಮದನ್ ಮೋಹನ್, ಪ್ರಧಾನ ಮುಖ್ಯ ಇಂಜಿನಿಯರ್ ದಲಾಯತ್, ಆರ್ಥಿಕ ಸಲಹೆಗಾರ ಸುಬ್ಬರಾಮಯ್ಯ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.