LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

ರಾಜಕೀಯ ಕ್ಷೇತ್ರ ಈಗ ಕಲುಷಿತಗೊಂಡಿದೆ ಅಂತ ಉಲ್ಲೇಖಿಸಿ ಪೋಸ್ಟ್..!!

2028ರ ಚುನಾವಣೆಗೆ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ..!!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಎಕ್ಸ್ (X) ಖಾತೆಯಲ್ಲಿ ತಿಳಿಸಿದ್ದಾರೆ.

news_1785084942_0_799.webp

ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲೇ ಮುಂದುವರಿದು ಜನರ ಕಷ್ಟ-ಸುಖಗಳಿಗೆ ಧ್ವನಿಯಾಗುತ್ತೇನೆ ಎಂದಿದ್ದಾರೆ.

ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದರೂ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

news_1785084970_0_668.webp

"ಒಂದು ಕಾಲದಲ್ಲಿ ಕ್ಷೇತ್ರದ ಜನರೇ ಹಣ ಸಂಗ್ರಹಿಸಿ ನನ್ನನ್ನು ಗೆಲ್ಲಿಸುತ್ತಿದ್ದರು. ಆದರೆ ಇಂದು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯರ್ಥಿಗಳೇ ಜನರಿಗೆ ದುಡ್ಡು ಕೊಡಬೇಕಾದ ಪರಿಸ್ಥಿತಿ ಬಂದಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲವಿಲ್ಲದಂತಾಗಿದೆ" ಎಂದು ಸಿದ್ದರಾಮಯ್ಯ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಅವರ ಈ ಘೋಷಣೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..ಸಿಂಹ ಪರ್ವದಡಿ ಲಯನ್ಸ್ ಜಿಲ್ಲಾ 317A ನೂತನ ಪದಾಧಿಕಾರಿಗಳ ಪದಗ್ರಹಣ ಜನ್ ಜಿ, ಜನ್ ಆಲ್ಫಾ ಯುವಕರು AI ಜೊತೆ ಸ್ಪರ್ಧೆಗೆ ಸಿದ್ದರಾಗಬೇಕು : ಡಾ‌ ನಿರ್ಮಲಾನಂದನಾಥ ಸ್ವಾಮೀಜಿಶ್ರದ್ದಾ ಶ್ರೀನಿವಾಸ್ ರಿಂದ ಭರತನಾಟ್ಯ ಪ್ರದರ್ಶನಶಿವಾಜಿನಗರ ಬಸ್ ನಿಲ್ದಾಣದ ಹತ್ತಿರದ ಪಾದಚಾರಿ ಮಾರ್ಗಕ್ಕೆ ಹೊಸ ಮೆರುಗು: ಜಗದೀಶ್ ಜಿಗ್ರಂಥಾಲಯಗಳ ಉನ್ನತೀಕರಣಕ್ಕೆ ಅಂತರಾಷ್ಟ್ರೀಯ ಸಮ್ಮೇಳನ : ಪ್ರೊ.ನಿರಂಜನಾಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ ಬಿ ಪಾಟೀಲನಾಳೆ ಬೆಂಗಳೂರು  ಜಲಮಂಡಳಿ:ನೇರ ಫೋನ್ ಇನ್ ಕಾರ್ಯಕ್ರಮಎಐ ಆಧಾರಿತ ಉತ್ಪನ್ನ ರಾಷ್ಟ್ರ ನಿರ್ಮಾಣ' ಗುರಿಯೊಂದಿಗೆ ಎರಡು ದಿನಗಳ ಶೃಂಗಸಭೆ:ಡಾ. ಸೆಲ್ವಕುಮಾರ್ನೀಟ್ ಪರೀಕ್ಷೆಯಲ್ಲಿ ಅಕ್ರಮ ಪ್ರಶ್ನೆ ಪತ್ರಿಕೆ ಸೋರಿಕೆ; ಯೂಥ್ ಕಾಂಗ್ರೆಸ್ ನಿಂದ ಧರಣಿ