LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದ ಮಾಜಿ ಸಚಿವ ಸಿದ್ದಿಕಿ ಹತ್ಯೆ

ಮುಂಬೈ: ಎನ್ ಸಿಪಿಯ ಹಿರಿಯ ನಾಯಕ, ಮಹಾರಾಷ್ಟ್ರದ ಮಾಜಿ ಸಚಿವ ಬಾಬು ಸಿದ್ದಿಕಿ ಮೇಲೆ 3 ಭಾರಿ ಗುಂಡು ಹಾರಿಸಿ ದುಷ್ಕರ್ಮಿಗಳು ಹತ್ಯೆ ಮಾಡಲಾಗಿದೆ. ಇನ್ನು ಬಾಬ ಸಿದ್ದಿಕಿ ಅವರ ಕಚೇರಿ ಸಮೀಪದಲ್ಲಿರುವ ರಾಮ ಮಂದಿರ ಬಳಿ ದುರಂತ ಸಂಭವಿಸಿದೆ.

ಮುಂಬೈನಲ್ಲಿನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಸಿದ್ದಿಕಿ ಅವರನ್ನು ಹತ್ತಿರದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದುರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ದಸರಾ ಸಂಭ್ರಮದಲ್ಲಿ ತೊಡಗಿದ್ದಾಗ ರಸ್ತೆಯಲ್ಲಿಯೇ 3 ಶಾರ್ಪ್ ಶೂಟರ್ ಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆ ಪ್ರಕರಣದಲ್ಲಿ ಹರಿಯಾಣ ಹಾಗು ಉತ್ತರ ಪ್ರದೇಶ ಮೂಲದ ದುಷ್ಕರ್ಮಿಗಳೆಂದು ತಿಳಿದುಬಂದಿದೆ. ಸಿದ್ದುಕಿಯ ದೇಹ , ಇದೆ ಭಾಗಕ್ಕೆ ಗುಂಡು ತಗಲಿರುವುದು ತಿಳಿದುಬಂದಿದೆ.

ಕೃತ್ಯದಲ್ಲಿ ಭಾಗಿಯಾಗಿರುವ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆಯ ಪೊಲೀಸರು ತಿಳಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದರು. ಪ್ರಕರಣ ಸಂಬಂಧ ಇನ್ನು ಇಬ್ಬರು ಶಾರ್ಟ್ ಶೂಟರ್ ರನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸಿದ್ದಿಕಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದವರಾಗಿದ್ದು, ಕೃತ್ಯದಲ್ಲಿ ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಹೊರಗಿನವರನ್ನು ಶಾರ್ಪ್ ಶೂಟರ್ ಕರೆಸಿ ಕೃತ್ಯ ಎಸಗಲಾಗಿದೆ ಎಂದು ಮಹಾರಾಷ್ಟ್ರ ಸಿಎಂ ಏಕ ನಾಥ ಶಿಂಧೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಸರ್ಕಾರ ಕಾನೂನು ಬಿಗಿಗೊಳಿಸಲು ವಿಫಲವಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಹೇಳಿಕೆ.

ಬಾಬ ಸಿದ್ದಿಕಿ ಹತ್ಯೆ ಹಿನ್ನೆಲೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಎಲ್ಲಾ ಕಾರ್ಯಕ್ರಮಗಳನ್ನು ಮೋಟಕುಗೊಳಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಮುಂದೆ ಭಾರಿ ಜನಸ್ತೋಮ ಸೇರಿದ್ದು, ಸಿದ್ದಿಕಿ ಅಭಿಮಾನಿಗಳು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಇನ್ನು ಲೀಲಾವತಿ ಆಸ್ಪತ್ರೆಗೆ ಪಡ್ನವೀಸ್ ಆಗಮಿಸಿ
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ