ಬೆಂಗಳೂರು: ಸೋಲಿಲ್ಲದ ಸರದಾರ ನಾಲ್ಕು ಬಾರಿ ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಅಮೋಘವಾಗಿ ಗೆಲುವನ್ನು ಸಾಧಿಸಿದ ಪ್ರತಿಮಾ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮುಖಂಡ ಏನ್ ಏ ಆರ್ ಎಸ್ ಅವರಿಗೆ ಸಚಿವ ಸ್ಥಾನ ನೀಡದೇ ಇರುವುದು ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಕಾರ್ಯಕರ್ತರು ಹಳಲನ್ನು ತೋಡಿಕೊಂಡರು.
ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಮಹಿಳಾ ಮುಖಂಡರು ಹಾಗೂ ಕ್ಷೇತ್ರದ ಸಾರ್ವಜನಿಕರು 9 ರಿಂದ ಬೃಹತ್ ಪ್ರತಿಭಟನೆಯನ್ನು ಮಾಡುವ ಮೂಲಕ.
ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಎನ್ಎ ಹ್ಯಾರಿಸ್ ಅವರು ಅಭಿವೃದ್ಧಿಯ ಮಹಾಪೂರವನ್ನೇ ಮಾಡಿದ್ದಾರೆ ಹೀಗಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಕಾರ್ಯಗಳನ್ನು ಕಳೆದ ನಾಲ್ಕು ಬಾರಿ ಶಾಸಕರಾಗಿ ಗೆದ್ದು ಬಿಗಿದ್ದಾರೆ ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಎನ್ಎ ಯಾರಿಸ್ ಅವರನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಹಾಗೆ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಹ್ಯಾರಿಸ್ ಅವರನ್ನು ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈ ಕಮಾಂಡ್ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯವನ್ನು ಮಾಡಿದರು.
ಇನ್ನು ಕಾಂಗ್ರೆಸ್ ನಲ್ಲಿ ಮೂರು ಹುದ್ದೆಗಳಿದ್ದು ಅದರಲ್ಲಿ ಒಂದು ಸ್ಥಾನವನ್ನು ಎನ್ಎಆರ್ಎಸ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯವನ್ನು ಸಹ ಒಮ್ಮತದಿಂದ ಮಾಡಿದರು ಬೃಹತ್ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತರು ಸಹ ಭಾಗಿಯಾಗಿ ಬೆಂಬಲವನ್ನು ವ್ಯಕ್ತಪಡಿಸಿದರು.
ಜಾರಿಸ್ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಕೊಡದೆ ಇದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಲ್ಲದೆ ಹೈಕಮಾಂಡ್ಗೆ ಮನವರಿಕೆ ಮಾಡುವುದಾಗಿ ಇದೇ ವೇಳೆ ಕಾರ್ಯಕರ್ತರು ತಿಳಿಸಿದರು.
ಇನ್ನು ಪ್ರತಿಭಟನೆ ಉಗ್ರ ಸ್ವರೂಪ ತಾಳುತಿದ್ದಂತೆ ಪೊಲೀಸರು ಎಚ್ಚೆತ್ತುಕೊಂಡು ಪ್ರತಿಭಟನ ನಿರತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.