LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ವಿ ದೇವರಾಜ್ ಹುಟ್ಟುಹಬ್ಬಕ್ಕೆ ಆರೋಗ್ಯ ತಪಾಸಣೆ ಶಿಬಿರ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ವಿ ದೇವರಾಜ್ ಅವರ ಹುಟ್ಟುಹಬ್ಬದ ಸಂಭ್ರಮವನ್ನು ಕುಟುಂಬದವರು ವಿಶೇಷವಾಗಿ ಆಚರಿಸಿದರು.

ಜೆಸಿ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ಆರ್ ವಿ ದೇವರಾಜ್ ಅವರ 66ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವನ್ನು ದೀಪ ಬೆಳಗುವ ಮೂಲಕ ಆರ್ ವಿ ದೇವರಾಜ್ ಕುಟುಂಬಸ್ಥರು ವಿಭಿನ್ನವಾಗಿ ಆಚರಣೆ ಮಾಡಿದರು.

ಆರ್ ವಿ ದೇವರಾಜ್ ಅವರ ಬರ್ತಡೆ ಹಿನ್ನೆಲೆ ಪತ್ನಿ ಆರ್ ವಿ ಮಾಮತಾ ದೇವರಾಜ್ ಅವರು ಕಚೇರಿಯ ಆವರಣದಲ್ಲಿ ಪ್ರಾದೇಶಿಕ ನೇತ್ರ ಚಿಕಿತ್ಸಾ ಸಂಸ್ಥೆ ಮಿಂಟೋ ಕಣ್ಣಿನ ಆಸ್ಪತ್ರೆಯ ಸಹಯೋಗದಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಸಲಾಯಿತು, ಆರೋಗ್ಯ ಶಿಬಿರ, ರಕ್ತ ದಾನ ಶಿಬಿರ ಸೇರಿ ಇನ್ನಿತರೆ ಸಮಾಜ ಮುಖಿ ಕೆಲಸವನ್ನು ಹಮ್ಮಿಕೊಳ್ಳಲಾಗಿತ್ತು.

ಇನ್ನು ಕಾರ್ಯಕ್ರಮದಲ್ಲಿ ಆರ್ ವಿ ದೇವರಾಜ್ ಪುತ್ರ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಆರ್ ವಿ ಯುವರಾಜ್ ಭಾಗವಹಿಸಿ ತಂದೆಯ ಹುಟ್ಟುಹಬ್ಬ ಬಗ್ಗೆ ಮಾತನಾಡಿ, ನಮ್ಮ ತಂದೆ ಕೆಲಸ ಕಾರ್ಯಗಳು, ಕೇವಲ ರಾಜಕೀಯದಿಂದ ಮಾತ್ರವಲ್ಲದೆ ಸಮಾಜ ಸೇವಕನಾಗಿ ಜನರ ಕಷ್ಟ ಸುಖಗಳನ್ನು ಆಲಿಸಿ ಮತ್ತಷ್ಟು ಜನರ ಸೇವೆ ಮಾಡುವ ಅವಕಾಶ ಸಿಗಲಿ, ಮುಂದಿನದಿನಗಳಲ್ಲಿ ಬೇರೆ ಬೇರೆ ಕೆಲ್ಸಗಳನ್ನು ಮಾಡಿಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದರು.

ಹುಟ್ಟುಹಬ್ಬದ ಹಿನ್ನೆಲೆ ನಡೆಯುತ್ತಿರುವ ಆರೋಗ್ಯ ಶಿಬಿರ ಜನರಿಗೆ ಅನುಕೂಲವಾಗಲಿ, ಪ್ರತಿಭಾರಿ ಜನರೇ ಬರ್ತಡೆ ಆಚರಣೆ ಮಾಡುತ್ತಿದ್ದರು, ಆದರೆ ಈ ಭಾರಿ ನಾವೇ ಮುಂದೆ ನಿಂತು ಆರೋಗ್ಯ ತಪಾಸಣೆ ಶಿಬಿರ ನಡೆಸಿ, ಜನರಿಗೆ ಅನುಕೂಲವಾಗಲಿ ಎಂದು ಆಶಿಸಿದರು. ಇದು ಕೇವಲ ಒಂದು ದಿನಕ್ಕೆ ಸೀಮಿತವಲ್ಲ ನಿರಂತರವಾಗಿ ಮಾಡಿಕೊಂಡು ಹೋಗಲಾಗುತ್ತದೆ ಎಂದು ತಿಳಿಸಿ ಮತ್ತೊಮ್ಮೆ ನಾಯಕರಾದ ಆರ್ ವಿ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರ್ ವಿ ದೇವರಾಜ್ ಅವರ ಕುಟುಂಬ ವರ್ಗ, ಬಂದು ಬಳಗ, ಸಾರ್ವಜನಿಕರು ಭಾಗಿಯಾಗಿ ಯಶಸ್ವಿಗೊಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ