LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರಿನ ಫಳ್ನೀರ್ ‌ನ ಎಂಎಫ್‌ಸಿ ರೆಸ್ಟೋರೆಂಟ್‌ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಪರಿಶೀಲನೆ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು.news_1787654805_0_656.webp

ಈ ಹಿನ್ನೆಲೆಯಲ್ಲಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸಿ, ಅಗತ್ಯವಿರುವ ಮಾದರಿಗಳನ್ನು ಸಂಗ್ರಹಿಸಿ ಮುಂದಿನ ಕಾನೂನು ಕ್ರಮಕ್ಕಾಗಿ ಕಳುಹಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್‌, ರೆಸ್ಟೋರೆಂಟ್ ಹಾಗೂ ಇತರೆ ಆಹಾರ ಸಂಸ್ಥೆಗಳ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕರು ಆಹಾರದ ಗುಣಮಟ್ಟ, ಸ್ವಚ್ಛತೆ ಅಥವಾ ಆಹಾರ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ಇಲಾಖೆಯ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ದೂರು ಸಲ್ಲಿಸುವಂತೆ ಮನವಿ ಮಾಡಲಾಗಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿ ಪರ, ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು :ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಮಂಗಳೂರಿನ ಫಳ್ನೀರ್ ‌ನ ಎಂಎಫ್‌ಸಿ ರೆಸ್ಟೋರೆಂಟ್‌ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಪರಿಶೀಲನೆಶೀಘ್ರವೇ ಉರ್ದು ಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪಇದು ನಿಮ್ಮ ಮನೆ… ನಾನು ನಿಮ್ಮ ಸೇವಕ ಅಷ್ಟೇ’: ಸೊರಬ ಕ್ಷೇತ್ರದ ಜನರೊಂದಿಗೆ ಸಚಿವ ಮಧು ಬಂಗಾರಪ್ಪರ ಆತ್ಮೀಯ ಕ್ಷಣಇಂ. ರೆಕಾರ್ಡ್ ಗೆ 3 ವರ್ಷದ ಕಂಪ್ಲಿ ತನವ್ ನ ದಾಖಲೆಯ 600ಮೀ ಓಟಪೋಲೀಸರ ಸಭೆಗಳಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಅಸಮಾನತೆ ಪ್ರದರ್ಶನ ಸಹಿಸಲಾಗದು -ಮೋಹನ್ ಕುಮಾರ್ ದಾನಪ್ಪಜನರ ಪ್ರಶ್ನೆಗಳಿಂದ ಕಾಂಗ್ರೆಸ್ ಪಲಾಯನ; ಪ್ರಶ್ನಿಸುವ ಕರ್ತವ್ಯ ಮರೆತ ಬಿಜೆಪಿ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ದ ಸೆಪ್ಟೆಂಬರ್ 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ: ವಿಜಯೇಂದ್ರನೃತ್ಯ ನಿಕುಂಜದಿಂದ 'ಅಭಿವ್ಯಕ್ತಿ' 9ನೇ ವಾರ್ಷಿಕ ಕಥಕ್ ನೃತ್ಯೋತ್ಸವ: ಲಯ, ಮಳೆಯ ಅದ್ಬುತ ಜುಗಲ್‌ಬಂದಿಹೆಲ್ಮೆಟ್ ಜಾಗೃತಿ ಅಭಿಯಾನ:   ಸ್ಟೀಲ್‌ಬರ್ಡ್ ಕಂಪನಿಯಿಂದ 500 ಫುಲ್‌ಫೇಸ್ ಹೆಲ್ಮೆಟ್‌ಗಳ ಉಚಿತ  ವಿತರಣೆ