LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಎಎಸ್ ಅಧಿಕಾರಿಗಳ ಜೀವನ ಸಾಧನೆ ಪುಸ್ತಕ ರೂಪದಲ್ಲಿ ಬರಲಿ:ರಾಮಲಿಂಗಾ ರೆಡ್ಡಿ

ಬೆಂಗಳೂರು: ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಜೀವನ ಸಾಧನೆಗಳು ಪುಸ್ತಕ ರೂಪದಲ್ಲಿ ಬರಬೇಕು ಎಂದು ಸಾರಿಗೆ ಸಚಿವ  ರಾಮಲಿಂಗಾ ರೆಡ್ಡಿ ಹೇಳಿದರು.

ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಭಾನುವಾರ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಹಮ್ಮಿಕೊಂಡಿದ್ದ ಎಸ್.ಆರ್.ಉಮಾಶಂಕರ್ ಅಭಿನಂದನೆ ಹಾಗೂ ಗೌರವ ಗ್ರಂಥ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಕುರಿತು ಪುಸ್ತಕಗಳು ಬಂದರೆ ಮುಂದಿನ ಪೀಳಿಗೆಗೆ ಪ್ರೇರಣೆ ನೀಡಲಿದೆ. ಇಂತಹ ಸಾಧಕರ ವತ್ರಕ ಗ್ರಂಥಾಲಯದಲ್ಲಿ ಇರಬೇಕು ಎಂದು ತಿಳಿಸಿದರು.

ಉತ್ತಮ ಆಡಳಿತ ನಡೆಸಿದ ಅಧಿಕಾರಿಗಳನ್ನು ಜನನು ಸದಾ ನೆನಪಿನಲ್ಲಿ ಇಟ್ಟುಕೊಂಡಿರುತ್ತಾರೆ. ಯಾವಾಗಲೂ ನೆನೆಯುತ್ತಾರೆ. ಅಂತಹ ಸಾಲಿನಲ್ಲಿ ಉಮಾಶಂಕರ್ ಸೇರುತ್ತಾರೆ. ಸಾರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ದಕ್ಷತೆಗೆ ಪ್ರಾಮಾಣಿಕತೆ ಹೆಸರುವಾಸಿ ಆಗಿದ್ದಾರೆ ಎಂದು ಹೇಳಿದರು.

ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಮಾತ ನಾಡಿ, ಅಧಿಕಾರದಲ್ಲಿರುವವರು ಈ ಪೀಡೆ ಹೋಗಲಿ ಎಂಬ ಮರುಕ ಜನರಲ್ಲಿ ಇರಬಾರದು. ಅಯ್ಯೋ ಆಡಳಿತದಿಂದ ಹೋದರಲ್ಲಪ್ಪ ಅನ್ನುವಂತಿರಬೇಕು. ಅಂತ ಪ್ರೀತಿಗೆ ಉಮಾ ಶಂಕರ್ ಭಾಜನರಾಗಿದ್ದಾರೆ ಎಂದರು. ಸಂಸದ ಡಾ.ಸಿ.ಎನ್.ಮಂಜುನಾಥ್ ಮಾತನಾಡಿ, ಸನ್ಮಾನಗಳು ಮೌನವಾಗಿರಬೇಕು. ಸಾಧನೆ ಸದ್ದು ಮಾಡಬೇಕು. ಸಾಧನೆ ಮಾಡಿದ ವ್ಯಕ್ತಿಯನ್ನು ಶೋಧನೆ ಮಾಡದೆ ಅಭಿನಂದನೆ ಮಾಡಬೇಕು ಎಂದು ತಿಳಿಸಿದರು.

ಉಮಾಶಂಕರ್ ಅವರ ಐಎಎಸ್ ಬ್ಯಾಚ್ ಮೆಂಟ್ ಕೂಡ ಆಗಿರುವ ಬಿಬಿಎಂಪಿ ಆಡಳಿತಾಧಿ ಕಾರಿ ತುಷಾರ್ ಗಿರಿನಾಥ್ ಮಾತನಾಡಿ, ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಕರ್ನಾಟಕದ ಮೊದಲ ಒಕ್ಕಲಿಗ ಐಎಎಸ್ ಅಧಿಕಾರಿಯಾಗಿದ್ದಾರೆ. ನಾನು ಅವರು ಒಂದೆ ಬ್ಯಾಚ್ ಮೆಂಟ್ ಎಂದು ಹೇಳಲು ಹೆಮ್ಮೆ ಆಗುತ್ತದೆ. ಹಲವು ಆಯಾ ಕಟ್ಟಿನ ಸ್ಥಳಗಳಲ್ಲಿ ಕೆಲಸ ಮಾಡುವ ಅವಕಾಶ ಸಿಗಬೇಕಾ ಗಿತ್ತು. ಅಂತಹ ಅವಕಾಶ ಕೈತಪ್ಪಿ ಹೋದಾಗಲೂ ಬೇಸರ ಮಾಡಿಕೊಳ್ಳದೆ ದಕ್ಷತೆಯಿಂದ ಕೆಲಸ ಮಾಡಿ ಹೆಸರುವಾಸಿ ಆಗಿದ್ದಾರೆ ಎಂದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ ಮಾತನಾಡಿ, ಆಡಳಿತ ಅವಧಿಯಲ್ಲಿ ಉಮಾಶಂಕರ್ ಮಾಡಿದ ಜನಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಸಕ ದರ್ಶನ್ ಪುಟ್ಟಣ್ಣಯ್ಯ, ಹಿರಿಯ ಪೊಲೀಸ್ ಅಧಿಕಾರಿ ಸಲೀಂ, ಜಯರಾಂ ರಾಯಪುರ, ಕೆ.ಎ.ದಯಾನಂದ, ನಿಶ್ಚಲಾನಂದ ನಾಥ ಸ್ವಾಮೀಜಿ, ಆಯೋಜಕರಾದ ನೀಲಕಂಠೇಗೌಡ, ಇರದಂತೆ ಸಮಿತಿಯ ಅನೇಕ ಪದಾಧಿಕಾರಿಗಳು ಸಮಾಜದ ಬಾಂಧವರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ