LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ: ಅಚಾತುರ್ಯಗಳಿಗೆ ಬಿಕೆ ಹರಿಪ್ರಸಾದ್ ಕ್ಷಮೆ 

ಬೆಂಗಳೂರು: ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ  ಬೆಂಗಳೂರಿನಲ್ಲಿ ಕೆಲವೊಂದು ಅಚಾತುರ್ಯ ಘಟನೆಗಳಿಗೆ ನೂತನ ಅಧ್ಯಕ್ಷರಾದ ಬಿಕೆ ಹರಿ ಪ್ರಸಾದ್ ಅವರು ರಾಜ್ಯದ ಜನತಗೆ ಕ್ಷಮೆ ಯಾಚಿಸಿದರು.

ಬೆಂಗಳೂರಿನ KPCC ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಾರದ ಮೊದಲನೆ ದಿನಗಳು ಸಮಾವೇಶ ಮಾಡಿದರೆ ಜನತೆಗೆ ಸಮಸ್ಯೆಯಾಗುತ್ತದೆ ಎಂದು ತಿಳಿದು, ವಾರದ ಕೊನೆ ದಿನ ಭಾನುವಾರದಲ್ಲಿ ಸಮಾವೇಶ ಮಾಡಿದ್ದಾಯಿತು. ಸಮಾವೇಶಕ್ಕೆ ಬರುವ ಜನರಿಂದ ನಗರದ ವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ಬೆಳಿಗ್ಗೆಯೇ ಜನರು ಬಸ್ ಗಳಲ್ಲಿ ಬಂದಿದ್ದರು. ಆದರೆ ಕೆಲವರು ಅಪಪ್ರಚಾರ ಮಾಡಿ ಕೆಟ್ಟ ಹೆಸರು ತರಲು ತಪ್ಪು ಸಂದೇಶ ಹರಡಿದ್ದಾರೆ. 

ಸರಣಿ ತಪ್ಪು ಮಾಹಿತಿ ನೀಡುವ ಬೆಂಗಳೂರಿನ ಸಂಸದರು ಮತ್ತೊಮ್ಮೆ ತಪ್ಪು ಸಂದೇಶ ಹರಡುವ ಕೆಲಸವನ್ನು ಬಹಳ ಉತ್ತಮವಾಗಿ ಮಾಡುತ್ತಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಪಕ್ಷದ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ನಿಜ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ನಾವು ಭಾನುವಾರ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಸಣ್ಣ ಪುಟ್ಟ ತೊಂದರೆಗಳು ಆಗಿವೆ. ಅವುಗಳನ್ನು ನಾವು ಅಲ್ಲಗೆಳೆಯುವುದಿಲ್ಲ. ಆದರೆ ನಮ್ಮ ಕಾರ್ಯಕ್ರಮದ ಟ್ರಾಫಿಕ್ ಸಮಸ್ಯೆಯಿಂದ ಎರಡು, ಮೂರು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗದೇ ಉಳಿದಿದ್ದಾರೆ ಎಂಬ ಸುದ್ದಿ ನೋಡಿದೆ. ಈ ಕಾರ್ಯಕ್ರಮದಿಂದ ಇಂತಹ ಪ್ರಮಾದವಾಗಿದ್ದರೆ ನಾವು ವಿಷಾದ ವ್ಯಕ್ತಪಡಿಸುತ್ತೇನೆ.

ನಾವು ಮುಂಜಾಗ್ರತೆ ಕ್ರಮ ಕೈಗೊಳ್ಳುವಾಗ ಪೊಲೀಸರು ಹಾಗೂ ಸೇವಾದಳದ ಕಾರ್ಯಕರ್ತರಿಗೆ ಬಹಳ ಸ್ಪಷ್ಟವಾಗಿ ನಾವು ಕೆಲವು ನಿರ್ದೇಶನ ನೀಡಿದ್ದೆವು. ನೀಟ್ ಪ್ರಾರಂಭವಾಗಿದ್ದು 1.30ರ ಸಮಯದಲ್ಲಿ ನಮ್ಮ ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಎಲ್ಲಾ ಬಸ್ ಗಳು ಬೆಳಗ್ಗೆ 10.30ರ ವೇಳೆಗೆ ಅರಮನೆ ಮೈದಾನ ತಲುಪಿದ್ದವು. ಎಲ್ಲೂ ಸಮಸ್ಯೆಯಾಗಬಾರದು ಎಂದು ಅರಮನೆ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೂ ಎರಡು ಮೂರು ಮಕ್ಕಳಿಗೆ ತೊಂದರೆ ಆಗಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಅವರಿಗೆ ಮುಂದಿನ ಪರೀಕ್ಷೆ ಕೈಗೊಳ್ಳಲು ಬೇಕಾಗಿರುವ ಎಲ್ಲಾ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. 

ನೀಟ್ ನಲ್ಲಿ ಆಗಿರವ ಆತ್ಮಹತ್ಯೆ ಬಗ್ಗೆ ಏಕೆ ಚಕಾರ ಎತ್ತಿಲ್ಲ ಕೇಂದ್ರದವರು?

ನೀಟ್ ಪರೀಕ್ಷೆಯನ್ನು ಮುಂದೂಡಿಕೆಯಾಗಿರುವುದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ಸಿಬಿಎಸ್ ಸಿ ಪರೀಕ್ಷೆಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದನ್ನೂ ನೋಡಿದ್ದೇವೆ. 12 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಾಗ ದೇಶದ ಸರೆಂಡರ್ ಮೋದಿ ಅವರಾಗಲಿ, ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಾಗಲಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರಾ? ಬೆಂಗಳೂರಿನ ಸಂಸತ್ ಸದಸ್ಯರು ನಡೆಯಬಾರದ, ಪ್ರಮಾದ ನಡೆದಿದೆ ಎಂದು ಮಾತನಾಡುತ್ತಿದ್ದಾರೆ. ಆದರೆ ಲಕ್ಷಾಂತರ ಜನರಿಗೆ ಪದೇ ಪದೆ ಪರೀಕ್ಷೆ ಬರೆಯುವಂತೆ ಮಾಡುತ್ತಿರುವುದು ಬಿಜೆಪಿ. ಪ್ರಶ್ನೆ ಪತ್ರಿಕೆಯಿಂದ 1.40 ಕೋಟಿ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಗೆ ಸಿಲುಕಿರುವಾಗ ಪ್ರಧಾನಿಯಾಗಲಿ, ಶಿಕ್ಷಣ ಸಚಿವರಾಗಲಿ ಅವರಿಗೆ ಸ್ಪಂದಿಸಿದ್ದಾರಾ? 

ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೇಂದ್ರ ಸಚಿವರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಆದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಮಕ್ಕಳ ಆತ್ಮಹತ್ಯೆಗೆ ಕಾರಣ ಯಾರು ಎಂದು ಬಿಜೆಪಿ ಸಂಸದರು ಹೇಳಬೇಕು. ಮೈಸೂರಿನಲ್ಲಿ 1400 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅಲ್ಲಿ ಯಾವ ಕಾರ್ಯಕ್ರಮವಿತ್ತು. ಯಾದಗಿರಿಯಲ್ಲಿ 286, ದಕ್ಷಿಣ ಕನ್ನಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇಲ್ಲೆಲ್ಲಾ ಯಾವ ಕಾರ್ಯಕ್ರಮ ನಡೆದಿತ್ತು? ಕೆಲವು ವಿದ್ಯಾರ್ಥಿಗಳು ಮಾಧ್ಯಮಗಳಿಗೆ ನೀಡಿರುವ ಸಂದರ್ಶನದಲ್ಲಿ ಪರೀಕ್ಷೆ ಬರೆದಿರುವುದಾಗಿಯೂ ಹೇಳಿದ್ದಾರೆ. 

ಸುಳ್ಳಿನ ಕಾರ್ಖಾನೆ ಇಟ್ಟುಕೊಂಡಿರುವ ಬಿಜೆಪಿಯವರು ತಮ್ಮ ತಪ್ಪು ಮರೆಮಾಚಲು ಕಾಂಗ್ರೆಸ್ ವಿರುದ್ಧ ಕುಂಠು ನೆಪ ಹೇಳುವುದು ಬೇಡ. ದೇಶದಾದ್ಯಂತ ವಿದ್ಯಾರ್ಥಿಗಳು ಆತಂಕದಲ್ಲಿರುವಾಗ, ಪರೀಕ್ಷೆ ಬರೆಯದೇ ನಕಲಿ ಪ್ರಮಾಣಪತ್ರ ಹೊಂದಿರುವ ಪ್ರಧಾನಮಂತ್ರಿಗಳು ಪರಿಕ್ಷಾ ಪೆ ಚರ್ಚಾ ಮಾಡುತ್ತಾರೆ. ಆದರೆ ಸೋರಿಕೆ ಬಗ್ಗೆ ಮಾತನಾಡುತ್ತಿದ್ದಾರೆ. 

ನೀಟ್ ಪ್ರಶ್ನೆಪತ್ರಿಕೆ ಸೋಲಿಕೆಗೆ ಹೊಣೆ ಯಾರು?
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಮಾನಸಿಕ ಯಾತನೆಗೆ ಹೋಣೆ ಯಾರು? 
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಉತ್ತರ ಕೊಡುವವರು ಯಾರು? 
ಪರಿಕ್ಷೆ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದವರು ಯಾರು? 

ಈ ಪ್ರಶ್ನೆಗಳಿಗೆ ಉತ್ತರ ನೀಡದೇ ಕಾಂಗ್ರೆಸ್ ಕಾರ್ಯಕ್ರಮ ಗುರಿಯಾಗಿಸಿ ಮಾತನಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗುವುದಿಲ್ಲವೇ? ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದೆ. ಅವರ ಹಕ್ಕುಗಳ ಪರವಾಗಿ ನಿಲ್ಲುತ್ತದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರು ಇಂದು ನೀತಿ ಪಾಠ ಹೇಳುತ್ತಿರುವುದು ಈ ದೇಶದ ದುರಂತ. ಬಿಜೆಪಿ ನೀಟ್ ಹಗರಣದಲ್ಲಿ ದೇಶದ ಜನರಿಗೆ ಕ್ಷಮೆ ಕೇಳಲಿ. ನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವುದಿಲ್ಲ. ಮೊದಲು ಈ ದೇಶದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. 

ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯ ಪ್ರದೇಶ ಸಿಎಂ ಆಗಿದ್ದಾಗ ವ್ಯಾಪಂ ಗೋಟಾಲ ಆಗಿದ್ದಾಗ 45 ಜನ ಕೊಲೆಯಾಗಿದೆ. ಆ ಪ್ರಕರಣದ ಸತ್ಯಾಂಶ ಈಗಲೂ ಹೊರಬರುತ್ತಿಲ್ಲ. ಅವರ ವೈಫಲ್ಯ ಮುಚ್ಚಿಹಾಕಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿರುವ ಬಿಜೆಪಿ ಗೂಬೆಗಳಿಗೆ ಜನ ಸರಿಯಾದ ಉತ್ತರ ನೀಡುತ್ತಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ: ಅಚಾತುರ್ಯಗಳಿಗೆ ಬಿಕೆ ಹರಿಪ್ರಸಾದ್ ಕ್ಷಮೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಸಾರ್ವಜನಿಕರ ಫೋನ್-ಇನ್ ಕಾರ್ಯಕ್ರಮ ಯಶಸ್ವಿ.ಬೆಂಗಳೂರು ನಗರ ಸ್ವಚ್ಛತೆ ಹೆಚ್ಚಿನ ಕಾಳಜಿ ವಹಿಸಿ: ಜಗದೀಶ್ ಜಿಕಳಪೆ ಕಾಮಗಾರಿ, ಅಧಿಕಾರಿನ ಅಮಾನತುಗೊಳಿ ಕಂಪೆನಿ ಬ್ಲಾಕ್ ಲಿಸ್ಟ್ ಗೆ ಸೇರಿಸಲು ಸಚಿವರ ನಿರ್ದೇಶನಅಡ್ಡ ಮತದಿಂದ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿಮೋದಿ ಆಡಳಿತಾವಧಿಯಲ್ಲಿ ಅನ್ನದಾತನ ಆರ್ಥಿಕ ಸ್ಥಿತಿ ಸುಧಾರಣೆ: ಹೆಚ್.ಡಿ. ಕುಮಾರಸ್ವಾಮಿನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಸರ್ಕಾರ ಮಟ್ಟದಲ್ಲಿ ಆಗಬೇಕುವಿವಾದದ ಕೇಂದ್ರವಾದ ಉತ್ತರ ಪ್ರದೇಶದ ಬಾಲ ಶ್ರೀರಾಮ ಮಂದಿರಸ್ವರ್ಣರಶ್ಮೀ ಕೌಶಲ್ಯಾಭಿವೃದ್ಧಿ, ತರಬೇತಿ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸSIR ವೇಳೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ನಡುವೆ ಸುವ್ಯವಸ್ಥಿತ ಸಂವಹನಕ್ಕೆ ಅವಕಾಶ ಕಲ್ಪಿಸಿಕೊಡಿ: ರಮೇಶ್ ಬಾಬು ಮನವಿ