LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಳ: ರಾಮ್ ಮನೋಹರ

ಬೆಂಗಳೂರು: ಸಂಸ್ಕರಿಸಿದ ನೀರಿನ ಸದ್ಬಳಕೆಯಲ್ಲಿ ಬೆಂಗಳೂರು ಜಲಮಂಡಳಿ ದೇಶಕ್ಕೆ ಉತ್ತಮ ಮಾದರಿಯಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಮಂತ್ರಾಲಯದಿಂದ ಪ್ರಶಂಸೆಗೆ ಪಾತ್ರವಾಗಿದೆ.

ನಗರದ ಸಂಸ್ಕರಿಸಿದ ನೀರಿನ ಬಳಕೆಯ ಬಗ್ಗೆ ಹಾಗೂ ಅದರಿಂದ ಆಗಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಮಂತ್ರಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಡಿ ತಾರಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜೊತೆಗೆ ಸಭೆ ನಡೆಸಿದರು.

ಸಂಸ್ಕರಿಸಿದ ನೀರಿನ ಸದ್ಬಬಳಕೆಯಲ್ಲಿ ದೇಶಕ್ಕೆ ಉತ್ತಮ ಮಾದರಿ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ನಗರದ 1.3 ಕೋಟಿ ಜನರಿಗೆ ನೀರು ಒದಗಿಸುವ ಕಾರ್ಯದಲ್ಲಿ ತೊಡಗಿದೆ. ಬೆಂಗಳೂರು ನಗರದಲ್ಲಿ 1,480 ಎಂ ಎಲ್ ಡಿ ತ್ಯಾಜ್ಯ ನೀರು ಉತ್ಪಾದನೆ ಆಗುತ್ತದೆ. 1,381 ಎಂ ಎಲ್ ಡಿ ನೀರನ್ನು ಶುದ್ಧಿಕರಿಸುವ ಸೌಕರ್ಯ ಈಗಾಗಲೇ ನಿರ್ಮಿಸಲಾಗಿದ್ದು, ಪ್ರಸ್ತುತ 1,212 ಎಂ ಎಲ್ ಡಿ ತ್ಯಾಜ್ಯ ನೀರನ್ನು ಶುದ್ಧಿಕರಿಸಲಾಗುತ್ತಿದೆ. ಇದರ ಬಹುಪಾಲು 850 ಎಂ ಎಲ್ ಡಿ, ನೀರನ್ನು ಸದ್ಬಳಕೆ ಮಾಡಲಾಗುತ್ತಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಎನ್ ಜಿ ಟಿ ಮಾನದಂಡಗಳ ಆಧಾರದ ಮೇಲೆ ಶುದ್ಧಿಕರಣ ನಡೆಸಲಾಗುತ್ತಿದೆ. ಇದರಿಂದ ಉತ್ಪತ್ತಿಯಾಗುವ ಸಂಸ್ಕರಿಸಿದ ನೀರನ್ನು ಸದ್ಬಳಕೆ ಮಾಡುವ ಮೂಲಕ ಬೆಂಗಳೂರು ನಗರದ ಸಾರಕ್ಕಿ ಕೆರೆ, ಅಗರಮ್ ಕೆರೆ, ವೇಂಗಯ್ಯ ನ ಕೆರೆ, ನಾಯಂಡ ಹಳ್ಳಿ ಕೆರೆ, ಮಾದವಾರ ಕೆರೆ, ಚಿಕ್ಕ ಬಾಣಾವರ ಕೆರೆ, ಕಲ್ಕೆರೆ ಕೆರೆ, ಅಲ್ಲಾಸಂದ್ರ ಕೆರೆ, ಜಕ್ಕುರು ಕೆರೆ, ಮಡಿವಾಳ ಕೆರೆ, ಹುಳಿಮಾವು ಕೆರೆ, ಎಲೆ ಮಲ್ಲಪ್ಪ ಚೆಟ್ಟಿ ಕೆರೆ, ಹಲಸೂರು ಕೆರೆ, ಮಾದವಾರ ಕೆರೆ, ಕೆಂಗೇರಿ ಕೆರೆ ಸೇರಿದಂತೆ 20 ಕೆರೆಗಳನ್ನು ತುಂಬಿಸಲಾಗುತ್ತಿದೆ. ಇದರಿಂದ ಆಯಾ ಪ್ರದೇಶದ ಅಂತರ್ಜಲ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಜಲಮಂಡಳಿ ಅಧ್ಯಕ್ಷರು ವಿವರಿಸಿದರು.

ನಗರದಲ್ಲಿ ಸಂಸ್ಕರಿಸಿದ ನೀರಿನ ಬಳಕೆಗೆ ವಿನೂತನ ಯೋಜನೆಗಳು

ಕಟ್ಟಡ ನಿರ್ಮಾಣ ಕಾಮಗಾರಿ ಗಳಿಗೆ ಸಂಸ್ಕರಿಸಿದ ನೀರು ಬಳಸುವುದನ್ನ ಕಡ್ಡಾಯಗೊಳಿಸಿರುವುದು. ಸಂಸ್ಕರಿಸಿದ ನೀರನ್ನು ಗೃಹ ಬಳಕೆಗೆ ಹೊರತು ಪಡಿಸಿ ಸ್ವಚ್ಛತೆ ಕಾರ್ಯಗಳಿಗೆ, ಗಾರ್ಡನಿಂಗ್ ಸೇರಿದಂತೆ ಹಲವಾರು ಇತರೆ ಕಾರ್ಯಗಳಿಗೆ ಬಳಸುವುದಕ್ಕೆ ಉತ್ತೇಜನ ನೀಡುತ್ತಿರುವುದು. ಗ್ರೀನ್ ಸ್ಟಾರ್ ಚಾಲೆಂಜ್ ಮೂಲಕ ಎಲ್ಲಾ ಬಳಕೆದಾರರಲ್ಲೂ ನೀರಿನ ಉಳಿತಾಯದ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸಿರುವುದು, ಕೈಗಾರಿಕೆಗಳಿಗೆ, ವಾಣಿಜ್ಯ ಸಂಸ್ಥೆಗಳಲ್ಲಿ ವ್ಯಾಪಕವಾಗಿ ಸಂಸ್ಕರಿಸಿದ ನೀರನ್ನು ಬಳಸುವಂತೆ ಸೂಚಿಸಿರುವುದು ಕೇಂದ್ರ ಜಲಸಂಪನ್ಮೂಲ ಮಂತ್ರಾಲಯದ ಅಧಿಕಾರಿಗಳಿಗೆ ಬಹಳ ಮೆಚ್ಚುಗೆಯಾಯಿತು.

ಸಂಸ್ಕರಿಸಿದ ನೀರಿನ ಸಮರ್ಪಕ ಬಳಕೆಯಿಂದ ನಾವು ಬೆಂಗಳೂರು ನಗರದ ನೀರಿನ ಕೊರತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದಾಗಿದೆ. 850 ಎಂ ಎಲ್ ಡಿ ಸಂಸ್ಕರಿಸಿದ ನೀರನ್ನು ಮರುಬಳಕೆ ಮಾಡುತ್ತಿದ್ದೇವೆ. ಇನ್ನುಳಿದ 271 ಎಂ ಎಲ್ ಡಿ ಯಷ್ಟು ಸಂಸ್ಕರಿಸಿದ ನೀರನ್ನು ಸಮರ್ಪಕವಾಗಿ ಬಳಸಲು ಈಗಾಗಲೇ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಪ್ರಶಂಸಿಸಿರುವುದು ನಮ್ಮ ಮಂಡಳಿಯ ಉತ್ತಮ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬೆಂಗಳೂರಿನಲ್ಲಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಸಂತಸ ವ್ಯಕ್ತಪಡಿಸಿದರು.

 

 

 

 

 

 

 

 

 

 

 

 

 
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ