ಬೆಂಗಳೂರು: ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ, ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹರ್ದೀಪ್ ಸಿಂಗ್ ಅಹ್ಲುವಾಲಿಯಾ ಅವರು ಭಾರತದ ಎಲ್ಲಾ ನಾಗರಿಕರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.
ಕೆನರಾ ಬ್ಯಾಂಕ್ ತನ್ನ ಎಲ್ಲಾ ಕಚೇರಿಗಳು ಮತ್ತು ಶಾಖೆಗಳಲ್ಲಿ ಭಾರತದ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಹೆಮ್ಮೆ ಮತ್ತು ದೇಶಭಕ್ತಿಯ ಉತ್ಸಾಹದಿಂದ ಆಚರಿಸಿತು. ಈ ಸಂದರ್ಭದಲ್ಲಿ ಬ್ಯಾಂಕ್ನ ನೌಕರರನ್ನು ಉದ್ದೇಶಿಸಿ ಮಾತನಾಡಿದ ಎಂಡಿ ಮತ್ತು ಸಿಇಒ ಹರ್ದೀಪ್ ಸಿಂಗ್ ಅಹ್ಲುವಾಲಿಯಾ ಅವರು, ಭಾರತದ ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳಿಗೆ ಸಂಸ್ಥೆಯ ಬದ್ಧತೆಯನ್ನು ಪುನರುಚ್ಚರಿಸಿದರು. ಕಾರ್ಯನಿರ್ವಾಹಕ ನಿರ್ದೇಶಕರುಗಳಾದ ಭವೇಂದ್ರ ಕುಮಾರ್ ಮತ್ತು ಸುನಿಲ್ ಕುಮಾರ್ ಚುಗ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಮ್ಮ ಭಾಷಣದಲ್ಲಿ ಹರ್ದೀಪ್ ಸಿಂಗ್ ಅಹ್ಲುವಾಲಿಯಾ ಅವರು ಸಂವಿಧಾನ ಶಿಲ್ಪಿಗಳಿಗೆ ಮತ್ತು ರಾಷ್ಟ್ರದ ಅಡಿಪಾಯ ಹಾಕಲು ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನಗಳನ್ನು ಸಲ್ಲಿಸಿದರು.
ಮುಂದುವರಿದು ಅವರು, 'ವಿಕಸಿತ ಭಾರತ'ದ ದೂರದೃಷ್ಟಿಗೆ ಕೆನರಾ ಬ್ಯಾಂಕ್ ತನ್ನ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ತಿಳಿಸಿದರು. ರಾಷ್ಟ್ರದ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ನಾವೆಲ್ಲರೂ ಒಗ್ಗೂಡಿ ಪ್ರತಿ ಭಾರತೀಯನ ಆರ್ಥಿಕ ಸ್ಥಿತಿಸ್ಥಾಪಕತ್ವ, ಹಣಕಾಸು ಒಳಗೊಳ್ಳುವಿಕೆ ಮತ್ತು ಸುಸ್ಥಿರ ಪ್ರಗತಿಯನ್ನು ಉತ್ತೇಜಿಸೋಣ ಎಂದರು.
ಕೆನರಾ ಬ್ಯಾಂಕ್ ಬಲಿಷ್ಠವಾದ ಪ್ರದರ್ಶನವನ್ನು ಮುಂದುವರಿಸಿದೆ ಎಂದು ಅವರು ಇದೇ ವೇಳೆ ತಿಳಿಸಿದರು. ಗ್ರಾಹಕರ ತೃಪ್ತಿಯೇ ಕೆನರಾ ಬ್ಯಾಂಕ್ನ ಕಾರ್ಯಾಚರಣೆಯ ಮೂಲಾಧಾರವಾಗಿದೆ ಎಂದರು