ಬೆಂಗಳೂರು: ಪಶ್ಚಿಮ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಒಟ್ಟಾರೆ 69341 ಬೀದಿ ಶ್ವಾನಗಳಿವೆ ಎಂದು ಅಂದಾಜಿಸಲಾಗಿದೆ. ಈ ಪೈಕಿ ಕಳೆದ ಒಂದು ತಿಂಗಳಿನಲ್ಲಿ 465 ಶ್ವಾನಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ವರದಿಯಲ್ಲಿ ಬಹಿರಂಗ.
ಇದಲ್ಲದೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ–2ರ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರನಗರ ವಾರ್ಡ್ನಲ್ಲಿ ಶ್ವಾನಗಳ ಲಸಿಕಾಕರಣ ಕಾರ್ಯಕ್ರಮದ ಸಂಬಂಧ ಇಂದು ಪಾಲಿಕೆಯ ಪಶುಪಾಲನಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಲಸಿಕಾಕರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ಬೆಂಗಳೂರಿನ ಇತರೆ ಪಾಲಿಕೆಗಳ ವ್ಯಾಪ್ತಿಯಲ್ಲೂ ಬೀದಿ ಶ್ವಾನಗಳ ಸಂತಾನಹರಣ ಚಿಕಿತ್ಸಾ ಕಾರ್ಯ ಅತ್ಯಂತ ವೇಗದಿಂದ ಸಾಗಿದೆ. ಅದರ ಬಗ್ಗೆಯೂ ಸಂಪೂರ್ಣ ಮಾಹಿತಿ ತರಿಸಿಕೊಂಡು ಪರಿಶೀಲಿಸಲಾಗುತ್ತದ.
ಸಚಿವ ಕೃಷ್ಣ ಬೈರೆಗೌಡ ಅವರು ಪಾಲಿಕೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಹಿನ್ನೆಲೆ, ಕಕ್ಕಾಬಿಕ್ಕಿಯಾಗಿ ತಲೆನೋವಾಗಿ ಪತಿಣಮಿಸಿದೆ. GBAಗೆ ಮೇಯರ್ ಇಲ್ಲದ ಕಾರಣ ಅಧಿಕಾರಿಗಳ ದರ್ಭಾರ್ ಹೆಚ್ಚಾಗಿದ್ದು, ಗುಣಮಟ್ಟದ ಕಾರ್ಯಗಳು ನಡೆದಿಲ್ಲ ಎಂಬುದು ಸಚಿವರು ನಡೆಸಿದ ಸಭೆಯಲ್ಲಿಯೇ ತಿಳಿಸಿದರು.