LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬೆಂಗಳೂರು: 'ಸಚಿವ ಸಂಪುಟದಲ್ಲೇ ಸೂಕ್ತ ಮಹಿಳಾ ಪ್ರಾತಿನಿಧ್ಯ ಇಲ್ಲ. ಈ ಸರ್ಕಾರದಲ್ಲಿ ನಾನೊಬ್ಬಳೇ ಮಹಿಳಾ ಮಂತ್ರಿ. ಅದೂ ಅರ್ಹತೆಗಾಗಿ ಅಲ್ಲ, ಮಹಿಳಾ ಕೋಟಾದ ಫಲ. ಸರ್ಕಾರಿ ಉದ್ಯೋಗ ಸೇರಿದಂತೆ ಎಲ್ಲೆಡೆಯೂ ಅವಕಾಶಗಳು ಕಡಿಮೆ ಇವೆ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಬೇಸರ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರುಸಾಧನೆ ಮಾಡಿದ್ದರೂ, ಪುರುಷರಿಗೆಸಮಾನವಾದ ಅವಕಾಶಗಳು ಇಂದಿಗೂ ಸಿಗುತ್ತಿಲ್ಲ. ಸಮಾನ ಅವಕಾಶಗಳು ಮಾತ್ರ ಸಾಧನೆ ದೊರೆತಾಗ ಸಾರ್ಥಕ ವಾಗುತ್ತದೆ. ಕೌಟುಂಬಿಕ ಚೌಕಟ್ಟಿನೊಳಗೇ ಇದ್ದುಕೊಂಡು, ಸೀಮಿತ ಅವಕಾಶ ಬಳಸಿಕೊಂಡು ಭಾರತದ ಮಹಿಳೆಯರು ಮಾಡುತ್ತಿರುವ ಸಾಧನೆಗೆ ವಿಶ್ವವೇ ಬೆರಗಾಗಿದೆ. ಕೂಲಿ ಕಾರ್ಮಿಕರಾಗಿ, ಗಗನಯಾನಿಯಾಗಿ ఎల్ల క్షేత్ర ಗಳಲ್ಲೂ ಸಾಧನೆ ಮಾಡಿ ತೋರಿಸಿದ್ದಾರೆ' ಎಂದರು.

ಗಾಂಧೀಜಿ ಮಹಾತ್ಮರಾಗಲು, ನೆಹರೂ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಲು ಅವರ ಪತ್ನಿಯರ ತ್ಯಾಗ, ಪರಿಶ್ರಮವೂ ಇದೆ. ಬಹುತೇಕ ಪುರುಷ ಸಾಧಕರ ಹಿಂದೆಯೂ ಅವರ.   ಕುಟುಂಬದ ಮಹಿಳೆಯರ ಪಾತ್ರ ಇರುತ್ತದೆ ಎಂದು ಹೇಳಿದರು.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ 20 ಸಾಧಕಿಯರು ಹಾಗೂ ಅರು ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಏಳು ಸ್ತ್ರೀಶಕ್ತಿ ಗುಂಪುಗಳು, ಮೂರು ಸ್ತ್ರೀಶಕ್ತಿ ಒಕ್ಕೂಟಗಳಿಗೆ ಯಶೋದಮ್ಮ ದಾಸಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಪ್ರಕಾಶ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ವ್ಯವಸ್ಥಾಪಕ ನಿರ್ದೇಶಕಿ ಎಚ್. ಪುಷ್ಪಲತಾ, ಇಲಾಖೆಯ ಜಂಟಿ ನಿರ್ದೇಶಕ ಡಾ.ಮೈತ್ರಿಯಿ, ಬಾಲಭವನದ ಕಾರ್ಯದರ್ಶಿ ನಿಶ್ಚಲ್, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ