LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡ್ ಮಟ್ಟದ  ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಿ: ಲೋಖಂಡೆ ಸ್ನೇಹಲ್ ಸುಧಾಕರ್

ಬೆಂಗಳೂರು:  ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ನಗರ ಪಾಲಿಕೆಯ ವಾರ್ಡ್‌ಗಳಲ್ಲಿ ನಡೆಯುತ್ತಿರುವ ರಸ್ತೆ ಬದಿಯ ಚರಂಡಿ ನಿರ್ವಹಣೆ, ರಸ್ತೆ ಅಭಿವೃದ್ಧಿ, ಡಾಂಬರೀಕರಣ ಹಾಗೂ ಸಿಸಿ ರಸ್ತೆ ಕಾಮಗಾರಿಗಳ ಸ್ಥಳ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.news_1782231915_1_830.webp

*ಚರಂಡಿ ನಿರ್ವಹಣೆಗೆ ಆದ್ಯತೆ ನೀಡಿ*

ಇದೇ ವೇಳೆ ವಿನಾಯಕ ಲೇಔಟ್ ನಲ್ಲಿ  ರಸ್ತೆ ಬದಿಯ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ಹಾಳಾಗಿರುವ ಸ್ಲ್ಯಾಬ್ ಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ರಂಧ್ರಗಳನ್ನು (ವೀಪ್ ಹೋಲ್ಸ್) ನಿರ್ಮಿಸಬೇಕು. ಹೊಸ ಚರಂಡಿ ಕಾಮಗಾರಿಯೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರಿನ ಸರಾಗ ಹರಿವಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

*ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಿ*

ಸರ್‌ ಎಂ.ವಿಶೇಶ್ವರಯ್ಯ  ಬಡಾವಣೆಯಲ್ಲಿ ನಡೆಯುತ್ತಿರುವ ರಸ್ತೆ ಬದಿಯ ಚರಂಡಿ, ಸಿಸಿ ರಸ್ತೆ ಹಾಗೂ ಡಾಂಬರೀಕರಣ ಕಾಮಗಾರಿಗಳನ್ನು ಪರಿಶೀಲಿಸಿದ ಅಪರ ಆಯುಕ್ತರು ಮಳೆಗಾಲದ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

*ರಸ್ತೆ ಅಭಿವೃದ್ಧಿಗೆ ಸಮನ್ವಯ ಇರಲಿ*

ಬೋವಿ ಕಾಲೋನಿಯಲ್ಲಿ ರಸ್ತೆ ಹಾಳಾಗಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ  ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಆದಷ್ಟು ಬೇಗ ಬಾಕಿ ಉಳಿದಿರುವ ಕುಡಿಯುವ ನೀರು ಹಾಗೂ ಒಳಚರಂಡಿ ಸಂಬಂಧಿತ ಪೈಪ್ಲೈನ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿಕೊಂಡು, ಕಾಮಗಾರಿಗಳು ಪೂರ್ಣಗೊಂಡ ಬಳಿಕ ಯಾವುದೇ ವಿಳಂಬವಿಲ್ಲದೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು. ಈ ಮೂಲಕ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.news_1782231915_0_954.webp

*ಚರಂಡಿಗಳಲ್ಲಿ ಸಮಗ್ರ ಹೂಳು ತೆರವು*

ಎಫ್‌ ಸಿ ಐ ಗೋಡೌನ್ ರಸ್ತೆ ಹಾಗೂ ರೈಲ್ವೆ ಪ್ಯಾರಲ್ ರಸ್ತೆಯ ಪಾದಚಾರಿ ಮಾರ್ಗದಲ್ಲಿನ ಕಾಬಲ್ ಸ್ಟೋನ್ಗಳನ್ನು ಸಮರ್ಪಕವಾಗಿ ಅಳವಡಿಸಿ, ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯ ಮರಗಳಿಗೆ ಸೂಕ್ತ ಟ್ರೀ ಬೇಸಿನ್ಗಳನ್ನು ನಿರ್ಮಿಸುವುದು, ತ್ಯಾಜ್ಯ ಸಾಗಣೆ ವಾಹನಗಳ ನಿಲುಗಡೆ ಸ್ಥಳದಲ್ಲಿ ಲೀಚೇಟ್ ಸಂಗ್ರಹವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಪರಿಸರ ಸ್ನೇಹಿ ನಿರ್ವಹಣೆ ಕೈಗೊಳ್ಳುವಂತೆ ಹಾಗೂ ಎಫ್‌ ಸಿ ಐ ಗೋಡೌನ್ ರಸ್ತೆ ಬದಿಯ ಚರಂಡಿಗಳಲ್ಲಿ ಸಮಗ್ರ ಹೂಳು ತೆರವು ಕಾರ್ಯ ಕೈಗೊಳ್ಳುವಂತೆ ತಿಳಿಸಿದರು.

*ಪ್ಲಾಟ್ಫಾರ್ಮ್ ರಸ್ತೆಯ ಕಾಮಗಾರಿ ಗುಣಮಟ್ಟ ಕಾಪಾಡಿ*

ಪ್ಲಾಟ್ಫಾರ್ಮ್ ರಸ್ತೆಯಲ್ಲಿ ಆರಂಭಿಕ ಹಂತದಲ್ಲಿರುವ ಕಾಮಗಾರಿಯನ್ನು ಪರಿಶೀಲಿಸಿದ ಅಪರ ಆಯುಕ್ತರು, ಗುಣಮಟ್ಟಕ್ಕೆ ಆದ್ಯತೆ ನೀಡಿ ಕಾಮಗಾರಿಯನ್ನು ಯೋಜಿತ ರೀತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

*ಎಲ್.ಎಲ್. ಎನ್ಕ್ಲೇವ್ನಲ್ಲಿ ಡಾಂಬರೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ*

ಎಲ್.ಎಲ್. ಎನ್ಕ್ಲೇವ್ ಪ್ರದೇಶದಲ್ಲಿ ರಸ್ತೆ ಬದಿಯ ಚರಂಡಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಡಾಂಬರೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಅಪರ ಆಯುಕ್ತರು ಸೂಚಿಸಿದರು.news_1782231915_2_172.webp

*ಮಳೆಗಾಲದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ*

ಪರಿಶೀಲನೆ ವೇಳೆ ಮಾತನಾಡಿದ ಅಪರ ಆಯುಕ್ತರು, ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ರಸ್ತೆ ಬದಿಯ ಚರಂಡಿಗಳಲ್ಲಿ ಮಳೆ ನೀರಿನ ಸರಾಗ ಹರಿವಿಗೆ ವ್ಯವಸ್ಥೆಗಳು ಹಾಗೂ ರಸ್ತೆ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಆಯುಕ್ತರ ಪರಿಶೀಲನೆ  ವೇಳೆಯಲ್ಲಿ ಕೆ.ಆರ್ ಪುರ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಘನ ತ್ಯಾಜ್ಯ ನಿರ್ವಹಣೆ, ಬ್ಲ್ಯಾಕ್ ಸ್ಪಾಟ್ ತೆರವು, ಸಿಬ್ಬಂದಿ ಕಾರ್ಯಕ್ಷಮತೆ ಕುರಿತು ಪ್ರಗತಿ ಪರಿಶೀಲನಾ ಸಭೆಕಸ ಸಂಗ್ರಹಣ ಆಟೋಗಳ ಮೇಲೆ ನಿಗಾ ಇಡಲು ಪ್ರಾಯೋಗಿಕವಾಗಿ MATRA app ಬಳಕೆ: ಆಯುಕ್ತ ಕೆ. ಎನ್. ರಮೇಶ್ವಾರ್ಡ್ ಮಟ್ಟದ  ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಿ: ಲೋಖಂಡೆ ಸ್ನೇಹಲ್ ಸುಧಾಕರ್ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ರಾಜ್ಯದ ನೇತೃತ್ವದಲ್ಲಿ ಪಾಲುದಾರರ ಕಾರ್ಯಾಗಾರಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಲಮಂಡಳಿ ಅಧ್ಯಕ್ಷರಾದ ಡಾ ಮಂಜುಳಾ ಸೂಚನೆ*ಕಿಮ್ಸ್ ರೆನೋವಾ ಆಂಕಾಲಜಿ ಇನ್‌ಸ್ಟಿಟ್ಯೂಟ್ ಉದ್ಘಾಟನೆ ಮಾಡಿದ ಕ್ರಿಕೆಟ್ ದಿಗ್ಗಜ ವಿವಿಎಸ್ ಲಕ್ಷ್ಮಣ್15 ಲಕ್ಷ ಸ್ಥಳೀಯ ತಳಿ ಸಸಿಗಳ ನೆಡುವ ಬೃಹತ್ ಅಭಿಯಾನಕ್ಕೆ ಸಕಲ ಸಿದ್ಧತೆಶ್ರೀ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮಿಗಳು ಲಿಂಗೈಕ್ಯಸಮಗ್ರ ಯೋಜನೆ ರೂಪಿಸಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಕೃಷ್ಣ ಬೈರೇಗೌಡಪಂಚ ಗ್ಯಾರಂಟಿ ನಾವೆಂದೂ ನಿಲ್ಲಿಸುವುದಿಲ್ಲ, ಕೊಟ್ಟ ಮಾತು ತಪ್ಪುವರಲ್ಲ:ಸಿದ್ದರಾಮಯ್ಯ